ಅನಂತ್ ಹೆಗಡೆ ಮನೆಯ ಜಿಮ್‌ ಕೊಠಡಿಗೆ ಬೆಂಕಿ

KannadaprabhaNewsNetwork |  
Published : Jun 26, 2024, 12:44 AM IST
ಜಿಮ್‌ ಕೊಠಡಿಗೆ ತಗುಲಿದ್ದ ಬೆಂಕಿಯನ್ನು ಅಗ್ನಿಶಾಮಕ ದಳದವರು ನಂದಿಸಿದರು. | Kannada Prabha

ಸಾರಾಂಶ

ಅನಂತಕುಮಾರ ಹೆಗಡೆಯವರ ಮನೆಯ ಮೇಲ್ಭಾಗದ ಕೊಠಡಿಯಲ್ಲಿ ಅವರ ವೈಯಕ್ತಿಕ ಜಿಮ್ ಇದ್ದು, ಮಂಗಳವಾರ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ.

ಶಿರಸಿ: ಕೇಂದ್ರ ಮಾಜಿ ಸಚಿವ ಹಾಗೂ ಉತ್ತರಕನ್ನಡದ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಮನೆಯ ಜಿಮ್ ಕೊಠಡಿಯಲ್ಲಿದ್ದ ಸಲಕರಣೆಗಳಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಹಾನಿಯನ್ನು ತಡೆದಿದ್ದಾರೆ.

ಅನಂತಕುಮಾರ ಹೆಗಡೆಯವರ ಮನೆಯ ಮೇಲ್ಭಾಗದ ಕೊಠಡಿಯಲ್ಲಿ ಅವರ ವೈಯಕ್ತಿಕ ಜಿಮ್ ಇದ್ದು, ಮಂಗಳವಾರ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ. ದಟ್ಟ ಹೊಗೆ ಆವರಿಸಿದ್ದರಿಂದ ಬೆಂಕಿ ತಗುಲಿದ್ದು ತಿಳಿದೊಡನೆಯೇ ನಗರದ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಬೆಂಕಿ ನಂದಿಸಿದರು. ಜಿಮ್‌ನಲ್ಲಿದ್ದ ಕೆಲವು ಸಲಕರಣೆಗಳು ಸುಟ್ಟುಹೋಗಿವೆ. ಮಗು ಅಪಹರಣ: ದೂರು ದಾಖಲು

ಭಟ್ಕಳ: ದಾಂಡೇಲಿ ಮೂಲದ ಪುಟ್ಟ ಮಗು ಅಪಹರಣದ ಬಗ್ಗೆ ಇಲ್ಲಿನ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.ಪುಟ್ಟ ಮಗುವೊಂದನ್ನು ಅಪಹರಣ ಮಾಡಿದ್ದು, ಮಗುವನ್ನು ಹುಡುಕಿಕೊಡುವಂತೆ ಠಾಣೆಯಲ್ಲಿ ದಾಂಡೇಲಿನ ಹುಸೇನ ಸಾಬ ತಂದೆ ಅಕ್ಬರ್ ಲತೀಫನವರ ದೂರು ನೀಡಿದ್ದು, ಅದರಲ್ಲಿ ಒಬ್ಬ ಪುರುಷ ಹಾಗೂ ಇಬ್ಬರು ಮಹಿಳೆಯರು ದಾಂಡೇಲಿಗೆ ಬಂದು ತಮ್ಮ ಪರಿಚಯವನ್ನು ಮಾಡಿಕೊಂಡು ಹೋಗಿದ್ದರು. ನಂತರ ಅವರು ನನಗೆ ಕರೆ ಮಾಡಿ ಭಟ್ಕಳಕ್ಕೆ ಒಮ್ಮೆ ಬಂದು ಹೋಗುವಂತೆ ಒತ್ತಾಯ ಮಾಡಿದ ಮೇರೆಗೆ ನಾವು ಜೂ. ೧೮ರಂದು ನನ್ನ ಹೆಂಡತಿ ಬಳಿ ಇದ್ದ ೭ ತಿಂಗಳ ಮಗುವನ್ನು ಎತ್ತಿಕೊಂಡು ಈಗ ಬರುತ್ತೇವೆ ಎಂದು ಹೋದವರು ನಂತರ ತಮ್ಮ ಮೊಬೈಲ್ ಸ್ವಿಚ್ ಆಫ್‌ ಮಾಡಿದ್ದಾರೆ. ನಂತರ ನಮ್ಮ ಮೊಬೈಲ್‌ಗೆ ವಿಡಿಯೋ ಕರೆ ಮಾಡಿ ಮಗುವನ್ನು ತೋರಿಸಿ ಮಗು ಆರಾಮವಾಗಿ ಇರುವುದಾಗಿ ಹೇಳಿದ್ದು, ಆದರೆ ಮಗುವನ್ನು ತಮಗೆ ಮರಳಿ ಕೊಟ್ಟಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಗುವಿನ ಪತ್ತೆ ಕಾರ್ಯ ಆರಂಭಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರದಿಂದ ಯಲ್ಲಮ್ಮನಗುಡ್ಡಕ್ಕೆ ₹118 ಅನುದಾನ
ಮಡಿಕೇರಿಯ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮ