ಕನ್ನಡಪ್ರಭವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಪಿಎಂ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಆಯೋಜಿಸಿದ್ದ ಅಡುಗೆ ತಯಾರಕರು ಹಾಗೂ ಸಹಾಯಕರಿಗೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ತಾಲೂಕಿನಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಸುಮಾರು 253 ಮಂದಿ ಅಡುಗೆ ತಯಾರಕರು ಹಾಗೂ ಸಹಾಯಕರಿದ್ದು, ರಾಜ್ಯ ಸರ್ಕಾರ ಅವರಿಗೆ ನಿವೃತ್ತಿಯಾಗುವ ವೇಳೆ ತಲಾ 40 ಸಾವಿರ ರು. ಹಣ ನೀಡಲು ತೀರ್ಮಾನಿಸಿತ್ತು. ಅದರಂತೆ ಈ ಬಾರಿ 2025 ನೇ ಸಾಲಿನಲ್ಲಿ ತಾಲೂಕಿನ ಸುಮಾರು 13 ಮಂದಿ ಅಡುಗೆ ತಯಾರಕರು ನಿವೃತ್ತಿಯಾಗಿದ್ದು ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತಿದೆ. ತಮ್ಮ ನಿವೃತ್ತಿ ವಯಸ್ಸಿನಲ್ಲಿ ಬಂದ ಈ ಹಣವನ್ನು ಜೀವನಕ್ಕೆ ನೆರವಾಗುವಂತೆ ಉಪಯೋಗಿಸಿಕೊಳ್ಳುವಂತೆ ತಿಳಿಸಿದರು.ಅಡುಗೆ ತರಬೇತಿ ಕಾರ್ಯುಗಾರದಲ್ಲಿ ಭಾಗವಹಿಸಿ ತಯಾರಿಕಾ ಸಿದ್ಧತೆಗಳ ಮಾಹಿತಿ ಪಡೆದುಕೊಳ್ಳಲು ಈ ಕಾರ್ಯಕ್ರಮವನ್ನು ಅಡುಗೆ ತಯಾರಕ ಸಿಬ್ಬಂದಿಗೆ ಆಯೋಜನೆ ಮಾಡಿದ್ದು, ಈ ಕಾರ್ಯಾಗಾರದ ಪ್ರಯೋಜನ ಪಡೆದು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಹೇಳಿದರು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ನಡೆದ ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ಅಧಿಕಾರಿಗಳು ಅರ್ಜಿಗಳ ವಿಳಂಬ ಮಾಡಿ, ವಿಲೇ ಮಾಡುತ್ತಿರುವ ಬಗ್ಗೆ ಹೆಚ್ಚಾಗಿ ದೂರುಗಳು ಕೇಳಿ ಬಂದವು.
ಪಶ್ಚಿಮವಾಹಿನಿಯಿಂದ ಪಾಲಹಳ್ಳಿ ಗ್ರಾಪಂ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಗುತ್ತಿಗೆದಾರ ಕಾಮಗಾರಿ ವಿಳಂಬ, ಕ್ರಮಕ್ಕೆ ಆಗ್ರಹಿಸಿ ಪೀಕಾರ್ಡ್ ಬ್ಯಾಂಕ್ ನಿರ್ದೇಶಕ ದೇವರಾಜು ದೂರು ನೀಡಿ ಒತ್ತಾಯಿಸಿದರು.
ಈ ವೇಳೆ ತಹಸೀಲ್ದಾರ್ ಚೇತನಾ ಯಾದವ್, ತಾ.ಪಂ ಇಒ ವೇಣು, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ಇತರ ಇಲಾಖೆ ಅಧಿಕಾರಿ ವರ್ಗ ಹಾಜರಿದ್ದರು.