ಬಲೆಯ ಮೂಲಕ ಕರಡಿ ಸೆರೆ ಹಿಡಿದ ಅರಣ್ಯ ಸಿಬ್ಬಂದಿ!

KannadaprabhaNewsNetwork |  
Published : Jun 12, 2024, 12:32 AM IST
11ಸಿಎಚ್‌ಎನ್‌54ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ಬಳಿಯ ನೀಲಗಿರಿ ತೋಪಿನಲ್ಲಿ ಬಲೆಯಲ್ಲಿ ಸೆರೆ ಹಿಡಿದ ಕರಡಿಯನ್ನು ಹೊತ್ತು ಕೊಂಡು ತೆರಳುತ್ತಿರುವ ಸಿಬ್ಬಂದಿ. | Kannada Prabha

ಸಾರಾಂಶ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯದಂಚಿನ ಆಲತ್ತೂರು ಬಳಿ ನೀಲಗಿರಿ ಪ್ಲಾಂಟೇಶನ್‌ನ ದನದ ದಾರಿ ಬಳಿ ಕರಡಿ ಅಡ್ಡಾಡಿಕೊಂಡು ಇರುವ ಮಾಹಿತಿ ಅರಿತ ಓಂಕಾರ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್‌ ಕುಮಾರ್‌ ಸ್ಥಳಕ್ಕೆ ತೆರಳಿ ಮೊದಲಿಗೆ ಪರಿಶೀಲನೆ ನಡೆಸಿದ್ದಾರೆ.

ಕನ್ನಡಪ್ರಭ ವಾರ್ತೆ, ಗುಂಡ್ಲುಪೇಟೆ

ಓಂಕಾರ ವಲಯದಂಚಿನ ಆಲತ್ತೂರು ಭಾಗದಲ್ಲಿ ಉಪಟಳ ನೀಡುತ್ತಿದ್ದ ಕರಡಿಯೊಂದನ್ನು ಆಲತ್ತೂರು ಬಳಿಯ ಅರಣ್ಯ ಸಿಬ್ಬಂದಿ ʼಬಲೆʼಯ ಮೂಲಕವೇ ಹಿಡಿದು ಸಾಹಸ ಮಾಡಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯದಂಚಿನ ಆಲತ್ತೂರು ಬಳಿ ನೀಲಗಿರಿ ಪ್ಲಾಂಟೇಶನ್‌ನ ದನದ ದಾರಿ ಬಳಿ ಕರಡಿ ಅಡ್ಡಾಡಿಕೊಂಡು ಇರುವ ಮಾಹಿತಿ ಅರಿತ ಓಂಕಾರ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್‌ ಕುಮಾರ್‌ ಸ್ಥಳಕ್ಕೆ ತೆರಳಿ ಮೊದಲಿಗೆ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಕರೆಯಿಸಿ ವೈದ್ಯರ ನೆರವಿಲ್ಲದೆ ಹಾಗೂ ಕರಡಿಗೆ ಅರವಳಿಕೆ ಚುಚ್ಚು ಮದ್ದು ನೀಡದೆ ಕರಡಿಗೆ ಬಲೆಯನ್ನು ಹಾಕಿ ಹಿಡಿದು ಸಿಬ್ಬಂದಿ ಸಾಹಸ ಮೆರೆದಿದ್ದಾರೆ.

ಬಲೆಯ ಮೂಲಕವೇ ಸೆರೆ ಹಿಡಿದ ಕರಡಿಯನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲೆಹೊಳೆ ವಲಯಕ್ಕೆ ಬಿಡಲಾಗಿದೆ ಎಂದು ಓಂಕಾರ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್‌ ಕುಮಾರ್‌ ಕನ್ನಡಪ್ರಭಕ್ಕೆ ಮಾಹಿತಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೂಪಾ ಮೌದ್ಗಿಲ್‌ ಮಾನಹಾನಿ ಕೇಸ್‌: ರೋಹಿಣಿ ಅರ್ಜಿ ವಜಾ
ವಿರೋಧದ ನಡುವೆ ಮದುವೆ : ಸಿಟ್ಟಲ್ಲಿ ಅಳಿಯನ ಮನೆಗೆ ಮಾವನಿಂದ ಬೆಂಕಿ!