ಯಡ್ರಾಮಿಯಲ್ಲಿ ಇದ್ದೂ ಇಲ್ಲದಂತಿರುವ ಶುದ್ಧ ನೀರಿನ ಘಟಕ

KannadaprabhaNewsNetwork |  
Published : May 27, 2024, 01:01 AM IST
ಚಿತ್ರ: ಫಿಲ್ಟರ್‌ ವಾಟರ್‌ಯಡ್ರಾಮಿ ತಾಲ್ಲೂಕಿನ ಕುಳಗೇರಿ ಗ್ರಾಮದಲ್ಲಿ ಕಾರ್ಯ ನಿರ್ವಹಿಸದೆ ಬಾಗಿಲು ಮುಚ್ಚಿರುವ ಶುದ್ದ ಕುಡಿಯುವ ನೀರಿನ ಘಟಕ.   | Kannada Prabha

ಸಾರಾಂಶ

ಪ್ರದೇಶದ ನಾಗರಿಕರಂತೆ ಗ್ರಾಮೀಣ ಭಾಗದ ಜನರೂ ಸಹ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿವ ನೀರು ಕುಡಿಯಲೆಂದು ಸರ್ಕಾರ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದೆ

ಕನ್ನಡಪ್ರಭ ವಾರ್ತೆ ಯಡ್ರಾಮಿ

ಶುದ್ಧ ನೀರಿನ ಘಟಕ ಕೆಟ್ಟು ನಿಂತಿದ್ದು, ಗ್ರಾಮಸ್ಥರು ಕುಡಿವ ನೀರಿಗಾಗಿ ಪರಿತಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣ ಪ್ರದೇಶದ ನಾಗರಿಕರಂತೆ ಗ್ರಾಮೀಣ ಭಾಗದ ಜನರೂ ಸಹ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿವ ನೀರು ಕುಡಿಯಲೆಂದು ಸರ್ಕಾರ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದೆ.

ಆದರೆ, ಅದು ಕೆಟ್ಟರೆ ಮತ್ತೆ ದುರಸ್ತಿಗೊಳಿಸದೇ ಅಧಿಕಾರಿಗಳು ಕಡೆಗಣಿಸಿರುವುದರಿಂದ ಗ್ರಾಮಗಳಲ್ಲಿ ಮತ್ತೆ ಹಳೆಯ ಪದ್ಧತಿ ಮರಳುವಂತಿದೆ. ಯಡ್ರಾಮಿ ತಾಲೂಕಿನ ಮಳ್ಳಿ, ಕುಳಗೇರಿ, ಸುಂಬಡ, ಕಡಕೋಳ ಸೇರಿದಂತೆ ಬಹುತೇಕ ಗ್ರಾಮಗಳಲ್ಲಿ ಶುದ್ಧ ಕುಡಿವ ನೀರಿನ ಘಟಕ ಕೆಟ್ಟು ಹಲವು ವರ್ಷವೇ ಕಳೆದರೂ ಈವರೆಗೂ ಇದನ್ನು ಯಾರೂ ದುರಸಿಗೊಳಿಸಿಲ್ಲ.

ಈ ಗ್ರಾಮಗಳಲ್ಲಿ ಪ್ಲೊರೈಡ್ ಅಂಶ ಅಧಿಕವಾಗಿದ್ದು, ಜನರು ಲವಣಾಂಶ ತುಂಬಿರುವ ನೀರು ಕುಡಿದು ಹಲವು ಕಾಯಿಲೆಗಳಿಗೆ ತುತ್ತಾಗಿದ್ದರು. ನಿತ್ಯ ಒಂದಲ್ಲ ಒಂದು ಅನಾರೋಗ್ಯಕ್ಕೆ ಸಿಲುಕಿ ಪರದಾಡುತ್ತಿದ್ದರು. ಈ ಹಿನ್ನೆಲೆ ಸರ್ಕಾರ ಶುದ್ಧ ನೀರಿನ ಘಟಕ ಅಳವಡಿಸಿತ್ತು. ಆದರೆ, ಯಂತ್ರಗಳು ಕೆಟ್ಟ ಬಳಿಕ ಕೇಳುವವರೇ ಇಲ್ಲ.

ಗ್ರಾ.ಪಂ, ತಾ.ಪಂ, ಶಾಸಕರ ನಿರ್ಲಕ್ಷ್ಯ:

ಮಳ್ಳಿ ಮತ್ತು ಕುಳಗೇರಿ ಗ್ರಾಮದಲ್ಲಿ ಶುದ್ಧ ಕುಡಿವ ನೀರಿನ ಘಟಕ ಕೆಟ್ಟು ವರ್ಷಗಳೇ ಕಳೆದರೂ, ಯಾರೂ ಗ್ರಾಮದ ಕಡೆ ಮುಖ ಮಾಡಿಲ್ಲ. ಈ ಎರಡು ಗ್ರಾಮದವರು ಶುದ್ಧ ಕುಡಿಯುವ ನೀರು ತರಲು 5 ಕಿ.ಮೀ. ದೂರದ ನಾಗರಹಳ್ಳಿ ಗ್ರಾಮದಲ್ಲಿ ಇರುವ ಖಾಸಗಿ ಶುದ್ಧ ನೀರಿನ ಘಟಕಕ್ಕೆ ಹೋಗಿ ಶುದ್ಧ ನೀರನ್ನು ತರುವ ಪರಿಸ್ಥಿತಿ ಎದುರಾಗಿದೆ.

ಪ್ರತಿದಿನವೂ ಕೆಲಸ, ಕಾರ್ಯ ಬಿಟ್ಟು ದೂರದ ಊರುಗಳಿಗೆ ಅಲೆಯುವಂತಾಗಿದೆ. ಯಂತ್ರಗಳು ಕೆಟ್ಟಿರುವ ಬಗ್ಗೆ ಗ್ರಾ.ಪಂ.ಗೆ ದೂರು ನೀಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ತಾ.ಪಂ ಗಮನಕ್ಕೆ ತಂದರೂ ಉಪಯೋಗವಾಗಿಲ್ಲ. ಇನ್ನು ಶಾಸಕರ ಗಮನಕ್ಕೆ ತಂದರೂ ಆಸಕ್ತಿ ತೋರುತ್ತಿಲ್ಲ ಎಂದು ಗ್ರಾಮದ ಹಿರಿಯರು ಆರೋಪಿಸಿದ್ದಾರೆ.

ಯಂತ್ರೋಪಕರಣ ತುಕ್ಕು ಹಿಡಿಯುತ್ತಿವೆ:

ತಾಲೂಕಿನ ಗ್ರಾಮಗಳಲ್ಲಿ ನಿರ್ಮಿಸಿರುವ ಶುದ್ಧ ನೀರಿನ ಘಟಕಗಳು ಕಾಯನಿರ್ವಹಿಸದಿರುವುದರಿಂದ ಗ್ರಾಮಸ್ಥರು ಕುಡಿವ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನಪ್ರತಿನಿಧಿ, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕೆಟ್ಟು ನಿಂತಿರುವ ನೀರಿನ ಘಟಕಗಳನ್ನು ದುರಸ್ತಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕಿದೆ. ಲಕ್ಷಾಂತರ ರು. ಖರ್ಚು ಮಾಡಿ ನಿರ್ಮಿಸಿರುವ ಘಟಕದ ಯಂತ್ರೋಪಕರಣಗಳು ತುಕ್ಕು ಹಿಡಿಯು ವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕಾಗಿದೆ.ಕೋಟ್‌..

ನೀರಿನ ಘಟಕವನ್ನು ಶೀಘ್ರದಲ್ಲೇ ದುರಸ್ತಿ ಗೊಳಿಸಬೇಕು. ಇದು ಹಾಳಾಗಿರುವ ಕಾರಣ ಕುಡಿಯುವ ನೀರಿಗಾಗಿ ಅಲೆಯಬೇಕಿದೆ. ಇಲ್ಲಿನ ಘಟಕ ದುರಸ್ತಿ ಯಾದರೆ, ಸುತ್ತಮುತ್ತಲಿನ ನಾಗರಿಕರಿಗೆ ನೀರಿನ ಸಮಸ್ಯೆ ನಿವಾರಣೆ ಆಗಲಿದೆ.

- ನಿಂಗಣ್ಣ ಹಾದಿಮನಿ, ಮಳ್ಳಿ ಗ್ರಾಮಸ್ಥ

ತಾಲೂಕಿನಲ್ಲಿ ಸುಮಾರು 35 ಶುದ್ಧ ಕುಡಿವ ನೀರಿನ ಘಟಕ ಇದ್ದು. ಅದರಲ್ಲಿ 20ಕಿಂತ ಹೆಚ್ಚು ಶುದ್ಧ ಕುಡಿವ ನೀರಿನ ಘಟಕ ಕೆಟ್ಟು ನೀತ್ತಿದ್ದು ನನ್ನ ಗಮನಕ್ಕೇ ಇದ್ದೆ, ಶೀಘ್ರದಲ್ಲಿ ದುರಸ್ತಿ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು.

- ಮಾಂತೇಶ ಪುರಾಣಿಕ, ತಾ.ಪಂ. ಇಒ ಯಡ್ರಾಮಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ
ಹೋರಾಟಗಾರರ ಮೇಲಿನ ಎಲ್ಲ ಕೇಸ್ ಹಿಂಪಡೆಯಿರಿ