ಕನ್ನಡಪ್ರಭವಾರ್ತೆ ಕೆಜಿಎಫ್ ಕೆಜಿಎಫ್ ೨೦೧೮ ರಲ್ಲಿ ಬಂಗಾರಪೇಟೆಯಿಂದ ವಿಭಜನೆಗೊಂಡು ಕೆಜಿಎಫ್ ಹೊಸ ತಾಲೂಕಿನ ಮಾನ್ಯತೆ ಪಡೆದುಕೊಂಡಿದ್ದರೂ ಶೇ ೫೦ ರಿಂದ ೬೦ ರಷ್ಟು ಇಲಾಖೆಗಳು ಮಾತ್ರ ಹೊಸ ತಾಲೂಕಿನಲ್ಲಿ ಕಾರ್ಯಾರಂಭ ಮಾಡಿವೆ. ಉಳಿದ ಇಲಾಖೆಗಳು ಬಂಗಾರಪೇಟೆಯಲ್ಲೇ ಇರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಹೊಸ ತಾಲೂಕು ರಚನೆಯಾದ ಬಳಿಕ ತಾಲೂಕು ಆಡಳಿತ ಸೌಧದ ನಿರ್ಮಾಣವನ್ನು ಸವಾಲಾಗಿ ಸ್ವೀಕರಿಸಿದ ಸ್ಥಳೀಯ ಶಾಸಕಿ ರೂಪಕಲಾ ಶಶಿಧರ್ ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹಾಕಿದ್ದರ ಫಲವಾಗಿ ಸುಮಾರು ೧೦ ಕೋಟಿ ರು.ಗಳ ವೆಚ್ಚದಲ್ಲಿ ಸುಸಜ್ಜಿತ ತಾಲೂಕು ಆಡಳಿತ ಸೌಧವನ್ನು ನಿರ್ಮಾಣ ಮಾಡಿಸುವಲ್ಲಿ ಯಶಸ್ವಿಯಾಗಿ ೨೦೨೨ರ ಅಕ್ಟೋಬರ್ ೨೭ ರಂದು ಅಂದಿನ ಕಂದಾಯ ಸಚಿವ ಆರ್.ಅಶೋಕ್ ರವರಿಂದ ಲೋಕಾರ್ಪಣೆಗೊಳಿಸಿದ್ದರು.ಪ್ರಮುಖ ಕಚೇರಿಗಳಿಗೆ ಅಲೆದಾಟ
ಇನ್ನು ಸಾಮಾಜಿಕ ಅರಣ್ಯ ಇಲಾಖೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ವಲಯ ಅರಣ್ಯಾಧಿಕಾರಿಗೆ ಕೆಜಿಎಫ್ ಜೊತೆಗೆ ಮುಳಬಾಗಿಲು, ಬಂಗಾರಪೇಟೆ ಮತ್ತು ಮಾಲೂರು ತಾಲೂಕುಗಳ ಪ್ರಭಾರವನ್ನು ವಹಿಸಿರುವುದರಿಂದ ಇವರೂ ಸಹ ಸಾರ್ವಜನಿಕರ ಕೈಗೆ ಸಿಗುತ್ತಿಲ್ಲ. ಇಲ್ಲಿ ಗುತ್ತಿಗೆ ಆಧಾರದ ಮೇಲೆ ನೌಕರರೊಬ್ಬರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಟ್......................................
ಸರ್ವೆ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳು ಬಂಗಾರಪೇಟೆಯಿAದ ಕೆಜಿಎಫ್ ತಾಲೂಕಿಗೆ ಸಂಪೂರ್ಣವಾಗಿ ವರ್ಗಾವಣೆಯಾಗದೇ ಇರುವ ಬಗ್ಗೆ ಇದೇ ಶುಕ್ರವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು.-ನಾಗವೇಣಿ, ತಹಸೀಲ್ದಾರ್, ಕೆಜಿಎಫ್