ಕನ್ನಡಪ್ರಭ ವಾರ್ತೆ ಕಲಬುರಗಿ
ಎಲ್ಲರ ಮೊಗದಲ್ಲಿ ಕುತೂಹಲವಿತ್ತು, ಸಮಾರಂಭದಲ್ಲಿ ತಮಗೆ ನಡೆಯಲಿರುವ ಸನ್ಮಾನದ ಬಗ್ಗೆ ಪುರಸ್ಕಾರಕ್ಕೆ ಆಯ್ಕೆಯಾದವರ ಕಂಗಳಲ್ಲಿ ಬೆರಗು, ಕುತೂಹಲ ಕಂಡರೆ, ಜತೆ ಬಂದವರು, ಬಂಧುಗಳ ಕಂಗಳಲ್ಲಿ ತಮ್ಮವರಿಗೆ ನಡೆಯಲಿರುವ ಸನ್ಮಾನ ಕಂಡು ಪುಳಕಿತರಾಗುವ ಹಂಬಲ ಮನೆ ಮಾಡಿತ್ತು.
ಇವೆಲ್ಲದರ ನಡುವೆಯೇ ಸುಂದರ ಸಂಜೆ ಅಹ್ಲಾದಕರ ವಾತಾವರಣದಲ್ಲಿ ಸುವರ್ಣ ಭವನದಲ್ಲಿ ಪ್ರೈಮರಿ, ಹೈಸ್ಕೂಲ್, ಐಟಿಐ, ಪದವಿ, ಪದವಿ ಪೂರ್ವ ಹೀಗೆ ಎಲ್ಲಾ ವಿಭಾಗಗಳಲ್ಲಿ ಜಿಲ್ಲಾದ್ಯಂತ ಸೇವೆಸಲ್ಲಿಸುತ್ತಿರುವ ಗುರುಗಳಾದ ಡಾ. ಗುರುಪ್ರಕಾಶ ಹೂಗಾರ, ಡಾ. ಬಸವರಾಜೇಶ್ವರಿ ಇಂದೂರ, ಡಾ. ಗಿರಿಜಾಬಾಯಿ ಗುಜಗೊಂಡ, ಮೀನಾಕ್ಷಿ ಶೇಷಮೂರ್ತಿ ಅವಧಾನಿ, ಶರಣು ಬಿರಾದಾರ, ಶಿವಾನಂದ ನಿರವಾಣಿ, ಭೋಜನಗೌಡ ಪಾಟೀಲ, ದೌಲತರಾಯ ದೇಸಾಯಿ, ವಿಜಯಕುಮಾರ ಪಾಟೀಲ, ಮರೆಪ್ಪ ಬಸವಪಟ್ಟಣ, ರಮೇಶಕುಮಾರ ದೇವಣಿ, ಜೆ.ಹೆಚ್. ಪಾಟಿಲ, ಪರಮೇಶ್ವರ ಪಾಟೀಲ, ಶಾರದಾ ದೇಸಾಯಿ, ಪ್ರಕಾಶ ಕೋಟ್ರೆ ಈರಮ್ನ ಸುತಾರ, ರಾಜಶೇಖರ ಸಜ್ಜಿ, ವಿಶಾಲಾ ಕಾಟಾಪೂರ, ದೇವಿದಾಸ ಪವಾರ, ಮಹಾಂತೇಶ್ವರಿ ಕಟ್ಟಿಮನಿ, ಭೀಮಾಶಂಕರ ಮಡಿವಾಳ, ಸುನಂದಾ ಕುಲಕರ್ಣಿ, ಮೈತ್ರಾಬಾಯಿ ಪತ್ತಾರ, ಡಾ. ಅನ್ನಪೂರ್ಣ ಗಂಗಾಣಿ, ವಿಶಾಲಾ ಕಾಟಾಪೂರ ಅವರಿಗೆ ಸಾರ್ಥಕ ಶಿಕ್ಷಕ ಪ್ರಶಸ್ತಿ ನೀಡಿ ಕನ್ನಡ ಬಾವುಟ ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪುರಸ್ಕೃತ ನಿಂಗಪ್ಪ ಮಂಗೊಂಡ ಹಾಗೂ ಮಾಜಿ ಪ್ರದಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶಿವಾನಂದ ಪೂಜಾರಿ, ಜಯಶ್ರೀ ಜಮಾದಾರ ಅವರನ್ನು ವಿಶೇಷವಾಗಿ ಸತ್ಕರಿಸಲಾಯಿತು.
ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಸತತ ಅಧ್ಯಯನಶೀಲರಾಗಿ, ಚಾರಿತ್ರ್ಯವಂತರಾಗಿರಿ, ಶಿಕ್ಷಕರು ನಮ್ಮ ನಾಡಿನ ಸಾಂಸ್ಕೃತಿಕ ಲೋಕದ ಆಧಾರಸ್ತಂಭ ಎಂದು ಅಭಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸೋಮಶೇಖರ್ ಹೇಳಿದರು.ಕಳೆದ ನಾಲ್ಕೂವರೆ ವರ್ಷಗಳಿಂದ ನಿರಂತರವಾಗಿ ಸಾಹಿತ್ಯಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಪರಿಷತ್ತನ್ನು ಸಾಮಾನ್ಯ ಜನರ ಬಳಿ ಕೊಂಡೊಯ್ಯಲಾಗಿದೆ. ಎಲ್ಲಾ ಜನ ಸಮುದಾಯದರೊಂದಿಗೆ ಜಿಲ್ಲೆಯಲ್ಲಿ ಕನ್ನಡ ತೇರನ್ನೆಳೆಯುವ ಕೆಲಸ ಮಾಡುತ್ತಿದ್ದೇವೆ ಎಂದು ಕಲಬುರಗಿ ಕಸಾಪ ಅಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ ಹೇಳಿದರು.