ಭವಿಷ್ಯದ ಪೀಳಿಗೆಗೆ ಒಳ್ಳೆಯ ಪರಿಸರ ಬಿಟ್ಟು ಹೋಗಬೇಕು: ರಾಜೇಶ್ವರಿ ಪುರಾಣಿಕ

KannadaprabhaNewsNetwork |  
Published : Jun 06, 2024, 12:32 AM IST
ಫೋಟೋ : ೫ಎಚ್‌ಎನ್‌ಎಲ್೨ | Kannada Prabha

ಸಾರಾಂಶ

ಹಾನಗಲ್ಲಿನ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ಹಾನಗಲ್ಲ: ಪರಿಸರದ ನಾಶದಿಂದ ಮನುಕುಲವೇ ಆತಂಕದತ್ತ ದಾಪುಗಾಲು ಹಾಕುತ್ತಿದೆ ಎಂಬ ಎಚ್ಚರಿಕೆ ಮೂಡಿಸುವ ಜತೆಗೆ, ಭವಿಷ್ಯದ ಪೀಳಿಗೆಗೆ ಒಳ್ಳೆಯ ಪರಿಸರ ಬಿಟ್ಟು ಹೋಗುವತ್ತ ಎಲ್ಲರೂ ಚಿತ್ತ ಹರಿಸಬೇಕು ಎಂದು ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರಾದ ರಾಜೇಶ್ವರಿ ಪುರಾಣಿಕ ಹೇಳಿದರು.

ಬುಧವಾರ ಹಾನಗಲ್ಲಿನ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ ಸಂಯುಕ್ತವಾಗಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪರಿಸರ ಇಲ್ಲದಿದ್ದರೆ ಮನುಷ್ಯನಿಗೆ ಉಸಿರೇ ಇಲ್ಲ. ಬಿಸಿಲಿನಿಂದ ಜನ ಸಾಯುತ್ತಿದ್ದಾರೆ. ಗಿಡ-ಮರಗಳನ್ನು ಕಡಿದು ಕಾಂಕ್ರೀಟ್ ಕಾಡು ಕಟ್ಟುತ್ತಿದ್ದೇವೆ. ಅಂತರ್ಜಲ ಅಪಾಯದ ಸ್ಥಿತಿಯಲ್ಲಿದೆ. ಈಗಲಾದರೂ ಎಚ್ಚೆತ್ತುಕೊಳ್ಳೋಣ. ಶಾಲಾ-ಕಾಲೇಜುಗಳಲ್ಲಿ ಓದುವ ಮಕ್ಕಳಿಗೆ ಈ ಪರಿಸರದ ಅರಿವು ಮೂಡಿಸುವುದು ಅತ್ಯಂತ ಮುಖ್ಯವಾಗಿದೆ ಎಂದರು.

ಸಿವಿಲ್ ನ್ಯಾಯಾಧೀಶ ಎಸ್.ಕೆ. ಜನಾರ್ದನ ಮಾತನಾಡಿ, ಮಾನವನ ಉಳಿವಿಗೆ ಪರಿಸರವೇ ನಿಜವಾದ ಆಸ್ತಿ. ದಿನಾಚರಣೆಗಳು ಕಾರ್ಯಕ್ರಮಕ್ಕೆ ಸೀಮಿತವಾಗದಿರಲಿ. ಸರ್ಕಾರದ ಇಲಾಖೆಗಳೊಂದಿಗೆ ಸಾಮಾಜಿಕ ಸಂಘಟನೆಗಳು ಜತೆಯಾಗಿ ಪರಿಸರ ಪ್ರಜ್ಞೆ ಮೂಡಿಸುವ, ಪರಿಸರ ಉಳಿಸುವ ಕಾರ್ಯದಲ್ಲಿ ಶಕ್ತಿ ತುಂಬಬೇಕಾಗಿದೆ. ನಮಗೆಲ್ಲ ಉಳ್ಳೆಯ ಶಿಕ್ಷಣ ಸಿಕ್ಕಿದೆ. ಇದರ ಫಲ ಭವಿಷ್ಯಕ್ಕೆ ಒಳ್ಳೆಯದನ್ನು ಮಾಡುವ ಪರಿಸರ ರಕ್ಷಣೆಗೂ ಆಗಬೇಕು. ಹಸಿರೇ ನಮ್ಮ ಉಸಿರು. ಮಳೆ ಬೆಳೆ ಚನ್ನಾಗಿದ್ದರೆ ಮಾತ್ರ ಮನುಷ್ಯನ ಬದುಕು ಎಂದರು.

ಅರಣ್ಯಾಧಿಕಾರಿ ಶಿವಾನಂದ ತೊಂಡೂರ ಮಾತನಾಡಿ, ಅರಣ್ಯ ಇಲಾಖೆಯ ಸಂಕಲ್ಪಕ್ಕೆ ಸಾಮಾಜಿಕ ಬೆಂಬಲ ಬೇಕು. ನೆಟ್ಟ ಗಿಡಗಳ ಉಳಿಸಲು ಕೇವಲ ಅರಣ್ಯ ಇಲಾಖೆ ಮಾತ್ರ ಹೆಣಗಾಡಿದರೆ ಸಾಲದು. ಈ ನಾಡಿನ ಪ್ರತಿಯೊಬ್ಬರೂ ಇದು ತಮ್ಮ ಜವಾಬ್ದಾರಿ ಎಂದು ಕಾಳಜಿವಹಿಸಬೇಕು ಎಂದರು.

ಸಿಪಿಐ ಆರ್.ವೀರೇಶ, ವಕೀಲರ ಸಂಘದ ಉಪಾಧ್ಯಕ್ಷ ಕೆ.ಪಿ. ಭೋಸಲೆ, ಕಾರ್ಯದರ್ಶಿ ಎಂ.ಎಸ್. ಕಾಳಂಗಿ, ವಕೀಲ ಎಸ್.ಕೆ. ದೊಡ್ಡಮನಿ, ಮುಖ್ಯ ಶಿಕ್ಷಕ ಆರ್.ಬಿ. ರೆಡ್ಡಿ, ಪ್ರಾಚಾರ್ಯ ಶಿವಕುಮಾರ ಯತ್ತಿನಹಳ್ಳಿ, ಪುರಸಭೆ ಮುಖ್ಯಾಧಿಕಾರಿ ವೈ.ಕೆ. ಜಗದೀಶ, ಶಿವಾನಂದ ಕ್ಯಾಲಕೊಂಡ ಹಾಗೂ ವಿವಿಧ ಸಂಘಟನೆಗಳು ಪದಾಧಿಕಾರಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!