ಕನ್ನಡಪ್ರಭ ವಾರ್ತೆ ದಾಬಸ್ಪೇಟೆ
ಹೊನ್ನೇನಹಳ್ಳಿ ತಾಂಡ್ಯ ಶಾಲೆಯಲ್ಲಿ ನಿವೃತ್ತಿ ಹೊಂದಿದ ವಿ.ಸಿ.ನಾಗರಾಜಮೂರ್ತಿ, ದೈಹಿಕ ಶಿಕ್ಷಕ ರಂಗಸ್ವಾಮಿ, ಜಕ್ಕಸಂದ್ರಶಾಲೆ ಶಿಕ್ಷಕ ಕೃಷ್ಣಮೂರ್ತಿಯವರಿಗೆ ಅಭಿನಂದನೆ ಸಲ್ಲಿಸುವ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಿಕ್ಷಕ ವೃತ್ತಿಯನ್ನು ಪ್ರಾಮಾಣಿಕವಾಗಿ ನಡೆಸುವ ಶಿಕ್ಷಕ ಸಾಧಕರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುತ್ತಾನೆ. ಒಬ್ಬ ಉತ್ತಮ ಶಿಕ್ಷಕ ವಿದ್ಯಾರ್ಥಿಗಳ ದೇವರಾಗಬಹುದು. ನಿವೃತ್ತಿ ಪಡೆಯುತ್ತಿರುವ ಶಿಕ್ಷಕರ ಸೇವೆ ಶ್ಲಾಘನೀಯವಾಗಿದೆ. ಅವರ ನಿವೃತ್ತಿ ಜೀವನ ಮತ್ತಷ್ಟು ಚೆನ್ನಾಗಿರಲಿ ಎಂದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟರುದ್ರಾರಾಧ್ಯ ಮಾತನಾಡಿ, ಉತ್ತಮ ಪ್ರಜೆಗಳನ್ನು ರೂಪಿಸುವ ಶಿಕ್ಷಕರನ್ನು ಪ್ರತಿಯೊಬ್ಬರೂ ಗೌರವಿಸುತ್ತಾರೆ. ಸದಾ ಮಕ್ಕಳೊಂದಿಗೆ ಒಡನಾಟ ಮತ್ತು ಅವರ ಕಲಿಕೆಯಲ್ಲಿ ತಮ್ಮ ಜೀವಮಾನವನ್ನು ಕಳೆಯುವ ಶಿಕ್ಷಕರು ವಿದ್ಯಾರ್ಥಿಗಳಿಗೆ ಅಚ್ಚು ಮೆಚ್ಚು. ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡುವ ಮೂಲಕ ಅವರ ಬಾಳಿಗೆ ಬೆಳಕು ನೀಡುವಲ್ಲಿ ಶಿಕ್ಷಕರು ಶ್ರಮಿಸುತ್ತಾರೆ ಎಂದು ಹೇಳಿದರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ವಾಸುದೇವಮೂರ್ತಿ, ಮುಖಂಡರಾದ ಪುಟ್ಟರುದ್ರ ಆರಾಧ್ಯ, ದೇವರಾಜು, ಸಿದ್ದಗಂಗಯ್ಯ, ರೇಣುಕಸ್ವಾಮಿ, ಹೊನರಾಜು, ಪ್ರಕಾಶ್, ಕೃಷ್ಣಮೂರ್ತಿ, ಮಲ್ಲಿಕಾರ್ಜುನ್, ಆರ್.ಜಿ ಬಸವರಾಜಪ್ಪ, ಯೋಗನಂದ್, ಚಂದ್ರಶೇಖರಯ್ಯ, ಎಚ್.ಆರ್ ಸತೀಶ್, ಗಂಗಪ್ಪಗೌಡ, ಪರಮೇಶ್ವರಯ್ಯ,ರಾಮಚಂದ್ರಪ್ಪ, ಶ್ರೀನಿವಾಸ್ ಮತ್ತಿತರರಿದ್ದರು.