ಹಿರೇಮಗಳೂರಿನಲ್ಲಿ ವೈಭವದ ಸಿಡಿ ಮಹೋತ್ಸವ

KannadaprabhaNewsNetwork |  
Published : Apr 21, 2024, 02:19 AM IST
ಹಿರೇಮಗಳೂರಿನಲ್ಲಿ ಗ್ರಾಮ ದೇವತೆಗಳಾದ ಶ್ರೀ ಕರಾಳಮ್ಮ, ಅಂತರಘಟ್ಟಮ್ಮ ಮತ್ತು ಪ್ಲೇಗಿನಮ್ಮನವರ 71ನೇ ವರ್ಷದ ಸಿಡಿ ಮಹೋತ್ಸವ ಸಹಸ್ರಾರು ಭಕ್ತರ ನಡುವೆ ವೈಭವದಿಂದ ನಡೆಯಿತು. | Kannada Prabha

ಸಾರಾಂಶ

ನಗರ ಹೊರವಲಯದ ಹಿರೇಮಗಳೂರಿನಲ್ಲಿ ಗ್ರಾಮ ದೇವತೆಗಳಾದ ಶ್ರೀ ಕರಾಳಮ್ಮ, ಅಂತರಘಟ್ಟಮ್ಮ ಮತ್ತು ಪ್ಲೇಗಿನಮ್ಮ ನವರ 71ನೇ ವರ್ಷದ ಸಿಡಿ ಮಹೋತ್ಸವ ಸಹಸ್ರಾರು ಭಕ್ತರ ನಡುವೆ ವೈಭವದಿಂದ ನಡೆಯಿತು.

- ಕಳಶ ಹೊತ್ತ ಬಾಲೆಯರೊಂದಿಗೆ ಗ್ರಾಮದಲ್ಲಿ ಮೆರವಣಿಗೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ನಗರ ಹೊರವಲಯದ ಹಿರೇಮಗಳೂರಿನಲ್ಲಿ ಗ್ರಾಮ ದೇವತೆಗಳಾದ ಶ್ರೀ ಕರಾಳಮ್ಮ, ಅಂತರಘಟ್ಟಮ್ಮ ಮತ್ತು ಪ್ಲೇಗಿನಮ್ಮ ನವರ 71ನೇ ವರ್ಷದ ಸಿಡಿ ಮಹೋತ್ಸವ ಸಹಸ್ರಾರು ಭಕ್ತರ ನಡುವೆ ವೈಭವದಿಂದ ನಡೆಯಿತು.

ಉತ್ಸವದ ಅಂಗವಾಗಿ ಕಲಾವೃದ್ಧಿ ಹೋಮ, ಶ್ರೀದುರ್ಗಾ ಹೋಮ, ಲಕ್ಷ್ಮಿಹೋಮ, ಸರಸ್ವತಿ ಹೋಮ, ಚಂಡಿಕಾ ಹೋಮ, ಕುಂಭಾಭಿಷೇಕ, ಮಹಾಪೂಜೆ, ಸಾರ್ವಜನಿಕ ಅನ್ನ ಸಂತರ್ಪಣೆ, ಭಾರ್ಗವಪುರಿ ಶ್ರೀ ಕೋದಂಡ ರಾಮಚಂದ್ರ ಸ್ವಾಮಿಗೆ ಫಲಸಮರ್ಪಣೆ ಜರುಗಿತು.ಸಂಜೆ ವೇಳೆಗೆ ಶ್ರೀ ಕರಾಳಮ್ಮ ಅಂತರಘಟ್ಟಮ್ಮ ಮತ್ತು ಪ್ಲೇಗಿನಮ್ಮನವರ ಉತ್ಸವಮೂರ್ತಿಗಳನ್ನು ದೇವಾಲಯದಿಂದ ಹೊರತಂದು ನಾದಸ್ವರ, ಕಹಳೆ, ಕೊಂಬು, ಚಾಮ, ಕೆಂಚರಾಯ ಗ್ರಾಮೀಣ ವಾದ್ಯಗಳು ಮತ್ತು ಕೇರಳದ ಪಂಚ ವಾದ್ಯ ಗಳು ಕಳಶ ಹೊತ್ತ ಬಾಲೆಯರೊಂದಿಗೆ ಗ್ರಾಮದಲ್ಲಿ ಮೆರವಣಿಗೆ ನಡೆಸಲಾಯಿತು.ಈ ವೇಳೆ ಗ್ರಾಮಸ್ಥರು ತಮ್ಮ ಮನೆಗಳ ಮುಂದೆ ಸಾರಿಸಿ, ರಂಗವಲ್ಲಿ ಹಾಕಿ ಉತ್ಸವ ಮೂರ್ತಿಗಳನ್ನು ಸ್ವಾಗತಿಸಿ ಪೂಜೆ ಸಲ್ಲಿಸಿದರು. ಅಂತರಘಟ್ಟಮ್ಮ ದೇವಾಲಯದ ಬಳಿ ಉತ್ಸವ ಮೂರ್ತಿಗಳು ಮೆರವಣಿಗೆಯೊಂದಿಗೆ ಆಗಮಿಸುತ್ತಿದ್ದಂತೆ ಮುಂಭಾಗದಲ್ಲಿ ಸಾಲಂಕೃತಗೊಂಡು ಸಜ್ಜಾಗಿ ನಿಂತಿದ್ದ ಸಿಡಿಗಂಬಕ್ಕೆ ಮತ್ತು ಪಂಚಭೂತಗಳಿಗೆ ಪೂಜೆ ಸಲ್ಲಿಸಲಾಯಿತು.ನಂತರ ಉತ್ಸವ ಮೂರ್ತಿಗಳನ್ನು ಸಿಡಿ ಗಂಬದಲ್ಲಿ ಪ್ರತಿಷ್ಠಾಪಿಸಲಾಯಿತು. ಈ ವೇಳೆ ಭಕ್ತರು ತಮ್ಮಮಕ್ಕಳನ್ನು ಸಿಡಿ ಗಂಬ ದಲ್ಲಿ ಕುಳ್ಳಿರಿಸಿ ಹರಕೆ ಸಲ್ಲಿಸಿದರು. ತರುವಾಯ ಭಕ್ತರ ಹರ್ಷೋದ್ಘಾರ ಕರತಾಡನ ವಾದ್ಯಗಳ ಭರಾಟೆ ನಡುವೆ ಉತ್ಸವ ಮೂರ್ತಿಗಳ ಸಿಡಿ ಮಹೋತ್ಸವ ನೆರವೇರಿತು.

ಅರ್ಚಕ ಎಚ್.ಕೆ.ಶ್ರೀಧರ್ ನೇತೃತ್ವದ ತಂಡ ಉತ್ಸವದ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿತು. ಉತ್ಸವದ ನಿಮಿತ್ತ ಗ್ರಾಮದ ರಸ್ತೆಗಳು ಮನೆ ಮನೆಗಳು ತಳಿರು ತೋರಣಗಳಿಂದ ಸಿಂಗಾರಗೊಂಡು ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ನಗರ- ಸುತ್ತಮುತ್ತಲ ಗ್ರಾಮಗಳ ಸಹಸ್ರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು. ದೇವಾಲಯ ಸಮಿತಿ ಅಧ್ಯಕ್ಷ ಸಿ.ಪಿ.ರವಿಶಂಕರ್, ಕಾರ್ಯದರ್ಶಿ ಡಿ.ಎಂ.ಶಂಕರ್‌ ಉತ್ಸವದಲ್ಲಿ ಪಾಲ್ಗೊಂಡಿದ್ದರು.

20 ಕೆಸಿಕೆಎಂ 2ಹಿರೇಮಗಳೂರಿನಲ್ಲಿ ಗ್ರಾಮ ದೇವತೆಗಳಾದ ಶ್ರೀ ಕರಾಳಮ್ಮ, ಅಂತರಘಟ್ಟಮ್ಮ ಮತ್ತು ಪ್ಲೇಗಿನಮ್ಮನವರ 71ನೇ ವರ್ಷದ ಸಿಡಿ ಮಹೋತ್ಸವ ಸಹಸ್ರಾರು ಭಕ್ತರ ನಡುವೆ ವೈಭವದಿಂದ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!