ಕನ್ನಡಪ್ರಭ ವಾರ್ತೆ ಪಾಂಡವಪುರ
ಅಭಿನಂದನೆ ಸ್ವೀಕರಿಸಿದ ಶಿಕ್ಷಕ ಟಿ.ವೆಂಕಟೇಶ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಮನವಿ ಮಾಡಿದರು.
ಮುಖ್ಯ ಶಿಕ್ಷಕ ಆರ್.ವಿ.ಧರ್ಮ ರತ್ನಾಕರ ಮಾತನಾಡಿ, ಈ ದಿನ ಶಿಕ್ಷಕ ವೃತ್ತಿಯಿಂದ ನಿವೃತ್ತಿಯಾಗುತ್ತಿರುವ ಟಿ.ವೆಂಕಟೇಶ್ ಅವರು ಮಕ್ಕಳಿಗೆ ಉತ್ತಮ ಕಲಿಕೆ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸಿ ಊರಿನ ಗ್ರಾಮಸ್ಥರು ಹಾಗೂ ಅಕ್ಕಪಕ್ಕ ಗ್ರಾಮಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದರು.ಇದೇ ವೇಳೆ ಶಿಕ್ಷಕ ಟಿ.ವೆಂಕಟೇಶ್ ಹಾಗೂ ಅನಿತಾ ದಂಪತಿಗೆ ಮೈಸೂರು ಪೇಟ, ಶಾಲು-ಹಾರ ಹಾಕಿ ನೆನಪಿನ ಕಾಣಿಕೆ ನೀಡಿ
ಹೃತೀಕ್ಷಾ ಕುಟುಂಬದವರಿಗೆ ಶ್ರೀ ನಿಶ್ಚಲಾನಂದ ಸ್ವಾಮೀಜಿ ಸಾಂತ್ವನ
ಕನ್ನಡಪ್ರಭ ವಾರ್ತೆ ಮದ್ದೂರುಸಂಚಾರಿ ಪೊಲೀಸರ ಎಡವಟ್ಟಿನಿಂದ ಸಾವನ್ನಪ್ಪಿದ ತಾಲೂಕಿನ ಗೊರವನಹಳ್ಳಿಯ ಹೃತೀಕ್ಷಾ ಮನೆಗೆ ಭೇಟಿ ನೀಡಿದ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ ಮಗುವಿನ ಪೋಷಕರಿಗೆ ಸಾಂತ್ವನ ಹೇಳಿದರು.
ಇಂತಹದೊಂದು ದುರ್ಘಟನೆ ನಡೆಯಬಾರದಿತ್ತು. ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸುವುದು ಅಗತ್ಯವಿದೆ. ಸರ್ಕಾರ ಮಗುವಿನ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದರು.ಇನ್ನೊಂದು ಮಗುವಿನ ವಿದ್ಯಾಭ್ಯಾಸಕ್ಕೆ ನೆರವು ಬೇಕಾದಲ್ಲಿ ಶ್ರೀಮಠಕ್ಕೆ ಬಂದರೆ ಅನುಕೂಲ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.