ಹನುಮೋತ್ಸವದ ಅಂಗವಾಗಿ ಬೃಹತ್‌ ಮೆರವಣಿಗೆ

KannadaprabhaNewsNetwork |  
Published : Dec 09, 2025, 12:45 AM IST
8ಎಚ್ಎಸ್ಎನ್13 : ಹೊಳೆನರಸೀಪುರದಲ್ಲಿ ಡಿ. ೧೩ರ ಶನಿವಾರ ಆಯೋಜನೆ ಮಾಡಿರುವ ಅದ್ಧೂರಿಯ ಶ್ರೀ ಹನುಮೋತ್ಸವ ಅಂಗವಾಗಿ ಮಹಾತ್ಮಗಾಂಧಿ ವೃತ್ತ ಹಾಗೂ ನಗರವನ್ನು ಬಂಟಿಂಗ್ಸ್ ಹಾಗೂ ಆಕರ್ಷಕ ವಿದ್ಯುತ್ ದೀಪಗಳಿಂದ ಅದ್ಧೂರಿಯಾಗಿ ಸಿಂಗರಿಸಲಾಗಿದೆ. | Kannada Prabha

ಸಾರಾಂಶ

ಡಿ. ೧೩ರ ಶನಿವಾರ ಅದ್ಧೂರಿಯ ಶ್ರೀ ಹನುಮೋತ್ಸವದ ಅಂಗವಾಗಿ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ಮುಂಭಾಗದಲ್ಲಿ ಶ್ರೀಯವರಿಗೆ ಪೂಜೆ ಹಾಗೂ ಉತ್ಸವದ ಜತೆಗೆ ವಿವಿಧ ಪ್ರಖ್ಯಾತ ಸಾಂಸ್ಕೃತಿಕ ಕಲಾ ತಂಡಗಳಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿದೆ ಎಂದು ಶ್ರೀ ಹನುಮೋತ್ಸವ ಆಚರಣಾ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ದ್ವಿತೀಯ ವರ್ಷದ ಹನುಮೋತ್ಸವ ಬೆಳಿಗ್ಗೆ ೮ ಗಂಟೆಯ ಶುಭಲಗ್ನದಲ್ಲಿ ಶ್ರೀಯವರಿಗೆ ಪೂಜೆ ಹಾಗೂ ಉತ್ಸವ ಪ್ರಾರಂಭಗೊಳ್ಳಲಿದ್ದು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವೈಭವದ ಬೃಹತ್ ಮೆರವಣಿಗೆ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ಪಟ್ಟಣದಲ್ಲಿ ಡಿ. ೧೩ರ ಶನಿವಾರ ಅದ್ಧೂರಿಯ ಶ್ರೀ ಹನುಮೋತ್ಸವದ ಅಂಗವಾಗಿ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ಮುಂಭಾಗದಲ್ಲಿ ಶ್ರೀಯವರಿಗೆ ಪೂಜೆ ಹಾಗೂ ಉತ್ಸವದ ಜತೆಗೆ ವಿವಿಧ ಪ್ರಖ್ಯಾತ ಸಾಂಸ್ಕೃತಿಕ ಕಲಾ ತಂಡಗಳಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿದೆ ಎಂದು ಶ್ರೀ ಹನುಮೋತ್ಸವ ಆಚರಣಾ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ದ್ವಿತೀಯ ವರ್ಷದ ಹನುಮೋತ್ಸವ ಬೆಳಿಗ್ಗೆ ೮ ಗಂಟೆಯ ಶುಭಲಗ್ನದಲ್ಲಿ ಶ್ರೀಯವರಿಗೆ ಪೂಜೆ ಹಾಗೂ ಉತ್ಸವ ಪ್ರಾರಂಭಗೊಳ್ಳಲಿದ್ದು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವೈಭವದ ಬೃಹತ್ ಮೆರವಣಿಗೆ ನಡೆಯಲಿದೆ ಹಾಗೂ ತಾಲೂಕು ಕಚೇರಿ ಮುಂಭಾಗದ ಗಣಪತಿ ಪೆಂಡಾಲಿನಲ್ಲಿ ಮಧ್ಯಾಹ್ನ ೧ ಗಂಟೆಯಿಂದ ಪ್ರಸಾದ ವಿತರಣೆ ಇರುತ್ತದೆ.

ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ಮುಂಬಾಗದ ವಿಶೇಷ ವೇದಿಕೆಯಲ್ಲಿ ಸಂಜೆ ೪ ಗಂಟೆಯಿಂದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ಏರ್ಪಡಿಸಿದ್ದು, ಪ್ರಥಮ ಬಹುಮಾನ ೩೦ ಸಾವಿರ ರು., ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ೨೦ ಸಾವಿರ ರು., ಆಕರ್ಷಕ ಟ್ರೋಫಿ, ತೃತೀಯ ಬಹುಮಾನ ೧೦ ಸಾವಿರ ರು., ಆಕರ್ಷಕ ಟ್ರೋಫಿ, ನಾಲ್ಕನೇ ಬಹುಮಾನ ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ಪ್ರವೇಶ ಶುಲ್ಕ ಐನೂರು ರು. ನಿಗದಿಪಡಿಸಿರುವ ಜತೆಗೆ ಸ್ಪರ್ಧೆಗೆ ನಿಯಮಗಳನ್ನು ರೂಪಿಸಿದ್ದು, ಹೆಚ್ಚಿನ ಮಾಹಿತಿಗೆ ೯೬೩೨೫೨೬೬೬೦ ಹಾಗೂ ೮೯೭೧೯೯೩೩೬೯ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೈಲಲ್ಲೂ ದರ್ಶನ್‌ಗೆ ‘ಅಭಿಮಾನಿಗಳು’ ಕಾಟ!
ನಾಳೆ ಹಲವು ಸಾಧಕರಿಗೆ ಗಾಂಧಿ ಪುರಸ್ಕಾರ ಪ್ರದಾನ