ರಾಮಮಂದಿರ ಮಂತ್ರಾಕ್ಷತೆಯ ಭವ್ಯ ಮೆರವಣಿಗೆ

KannadaprabhaNewsNetwork |  
Published : Dec 31, 2023, 01:30 AM IST
ರಾಮಮಂದಿರ ಮಂತ್ರಾಕ್ಷತೆಯ ಭವ್ಯ ಮೆರವಣಿಗೆ | Kannada Prabha

ಸಾರಾಂಶ

ಅಯೋದ್ಯೆಯಿಂದ ಬಂದ ರಾಮಮಂದಿರದ ಮಂತ್ರಾಕ್ಷತೆಯನ್ನು ಚಾಮರಾಜನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರರಾಮ ಮಂದಿರದ ಉದ್ಘಾಟನೆಗೆ ಅಯೋಧ್ಯೆಯಿಂದ ತಂದಿರುವ ರಾಮಮಂದಿರ ಮಂತ್ರಾಕ್ಷತೆಯ ವಾಹನವನ್ನು ಜಿಲ್ಲಾ ಕೇಂದ್ರ ಚಾಮರಾಜನಗರದಲ್ಲಿ ಬಿಜೆಪಿ ಮುಖಂಡರು, ಹಿಂದೂಪರ ಮುಖಂಡರು ಬರ ಮಾಡಿಕೊಂಡು, ನಗರದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಮೆರವಣಿಗೆ ಮಾಡಲಾಯಿತು.

ಅಲಂಕೃತ ವಾಹನದಲ್ಲಿ ಶ್ರೀರಾಮಚಂದ್ರ, ಲಕ್ಷ್ಮಣ, ಸೀತೆ, ವೇಷಧಾರಿಗಳು ಮತ್ತು ಮಂತ್ರಾಕ್ಷತೆ ಇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಅಯೋಧ್ಯೆಯ ಶ್ರೀರಾಮಮಂದಿರದಿಂದ ಮಂತ್ರಾಕ್ಷತೆಯನ್ನು ದೇಶದ ಎಲ್ಲಾ ಭಾಗಗಳಿಗೂ ತಲುಪಿಸಲಾಗುತ್ತಿದೆ. ಮಂತ್ರಾಕ್ಷತೆ ಹೊತ್ತು ತಂದ ವಾಹನ ದೇಶಾದ್ಯಂತ ಸಂಚಾರ ಮಾಡುತ್ತಾ, ರಾಜ್ಯದ ಗಡಿ ಜಿಲ್ಲಾ ಚಾಮರಾಜನಗರಕ್ಕೆ ಬಂದ ಪವಿತ್ರ ಮಂತ್ರಾಕ್ಷತೆಯನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ಎಲ್ಲಾ ಗ್ರಾಮಗಳಿಗೆ ಆರ್‌ಎಸ್‌ಎಸ್‌ ಮತ್ತು ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಮಂತ್ರಾಕ್ಷತೆ ತಲುಪಿಸುವ ಕೆಲಸ ಮಾಡಲಿದ್ದಾರೆ ಎಂದು ಹಿಂದೂಪರ ಸಂಘಟನೆಗಳು ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪದಾಧಿಕಾರಿಗಳು, ಮುಖಂಡರು ತಿಳಿಸಿದರು.

ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಹಿಂದುಪರ ಸಂಘಟನೆಗಳು, ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು ಮೆರವಣಿಗೆಯುದ್ದಕ್ಕೂ ಜೈಕಾರದ ಘೋಷಣೆಗಳನ್ನು ಕೂಗಿದರು. ಅನೇಕ ಜನರು ಪೂಜೆ ಸಲ್ಲಿಸಿ ಭಕ್ತಿ ಮೆರೆದರು.

ಮೆರವಣಿಗೆಯು ಚಾಮರಾಜೇಶ್ವರ ದೇವಸ್ಥಾನದಿಂದ ಹೊರಟು ಪಚ್ಚಪ್ಪ ವೃತ್ತ, ಡಿವಿಯೇಷನ್ ರಸ್ತೆ, ದೇವಾಂಗ 3ನೇ ಬೀದಿ, ನಾಗಪ್ಪ ಶೆಟ್ಟರ ಚೌಕ, ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಸಂತೆಮರಳ್ಳಿ ವೃತ್ತ, ಆದಿಶಕ್ತಿ ದೇವಸ್ಥಾನದ ಮುಂಭಾಗದಿಂದ ಬಣಜಿಗರ ಬೀದಿ, ಹಳ್ಳದ ಬೀದಿ ಮುಖಾಂತರ ಮತ್ತೆ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಕೊನೆಗೊಂಡಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣಪ್ರಸಾದ್ ಮುಖಂಡರಾದ ಎಂ. ರಾಮಚಂದ್ರ, ನಿಜಗುಣರಾಜು, ಎ. ಆರ್. ಬಾಬು, ವೃಷಭೇಂದ್ರಪ್ಪ, ನೂರೊಂದುಶೆಟ್ಟಿ, ಬಾಲಸುಬ್ರಹ್ಮಣ್ಯಂ, ಸತೀಶ್, ಸುದರ್ಶನಗೌಡ, ಮಂಜುನಾಥಗೌಡ, ಸುಂದರ್, ಮಂಜುನಾಥ್, ಚಂದ್ರಶೇಖರ್, ಶಿವಣ್ಣ, ನಟರಾಜು, ಕುಮಾರ್, ರಾಜಶೇಖರ್, ವೇಣುಗೋಪಾಲ್, ವಿರಾಟ್‌ಶಿವು, ಮಂಜು, ಕೃಷ್ಣಪ್ಪ, ರಂಗಸ್ವಾಮಿ, ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

------------

೩೦ಸಿಎಚ್‌ಎನ್೫

ರಾಮ ಮಂದಿರದ ಉದ್ಘಾಟನೆಯ ಅಯೋಧ್ಯೆಯಿಂದ ತಂದಿರುವ ರಾಮಮಂದಿರ ಮಂತ್ರಾಕ್ಷತೆಯ ವಾಹನವನ್ನು ಜಿಲ್ಲಾ ಕೇಂದ್ರ ಚಾಮರಾಜನಗರದಲ್ಲಿ ಬಿಜೆಪಿ ಮುಖಂಡರು, ಹಿಂದೂಪರ ಮುಖಂಡರು ಬರ ಮಾಡಿಕೊಂಡರು.

----------

೩೦ಸಿಎಚ್‌ಎನ್೬

ರಾಮ ಮಂದಿರದ ಉದ್ಘಾಟನೆಯ ಅಯೋಧ್ಯೆಯಿಂದ ತಂದಿರುವ ರಾಮಮಂದಿರ ಮಂತ್ರಾಕ್ಷತೆಯ ಬೆಳ್ಳಿ ರಥದಲ್ಲಿ ಶ್ರೀರಾಮಚಂದ್ರ, ಲಕ್ಷ್ಮಣ, ಸೀತೆ, ವೇಷಧಾರಿಗಳು.

-----

೩೦ಸಿಎಚ್‌ಎನ್೭

ರಾಮ ಮಂದಿರದ ಉದ್ಘಾಟನೆಯ ಅಯೋಧ್ಯೆಯಿಂದ ತಂದಿರುವ ರಾಮಮಂದಿರ ಮಂತ್ರಾಕ್ಷತೆಯ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮಲಾಕರ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌! - ಖಾಸಗಿ ಕ್ಷಣಗಳ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌
ರಾಜಧಾನಿಯಲ್ಲಿ ಡ್ರಗ್ಸ್ ಬೇಟೆ : ಸಾವಿರ ವ್ಯಸನಿಗಳ ಸೆರೆ