ಹಂಪಿಯಲ್ಲಿ ವಿಜೃಂಭಣೆಯ ಶ್ರೀವಿರೂಪಾಕ್ಷೇಶ್ವರ ಸ್ವಾಮಿ ತೆಪ್ಪೋತ್ಸವ

KannadaprabhaNewsNetwork |  
Published : Apr 27, 2024, 01:26 AM ISTUpdated : Apr 27, 2024, 09:11 AM IST
26ಎಚ್‌ಪಿಟಿ4ಹಂಪಿಯಲ್ಲಿ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿಯ ತೆಪ್ಪೋತ್ಸವ ಗುರುವಾರ ರಾತ್ರಿ ಅತ್ಯಂತ ವಿಜೃಂಬಣೆಯಿಂದ ಜರುಗಿತು. | Kannada Prabha

ಸಾರಾಂಶ

ದಕ್ಷಿಣಕಾಶಿ ಹಂಪಿಯಲ್ಲಿ ಶ್ರೀವಿರೂಪಾಕ್ಷೇಶ್ವರ ಸ್ವಾಮಿ ತೆಪ್ಪೋತ್ಸವ ಗುರುವಾರ ರಾತ್ರಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.

 ಹೊಸಪೇಟೆ :  ದಕ್ಷಿಣಕಾಶಿ ಹಂಪಿಯಲ್ಲಿ ಶ್ರೀವಿರೂಪಾಕ್ಷೇಶ್ವರ ಸ್ವಾಮಿ ತೆಪ್ಪೋತ್ಸವ ಗುರುವಾರ ರಾತ್ರಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.

ಶ್ರೀ ವಿದ್ಯಾರಣ್ಯ ಭಾರತಿ ಶ್ರೀಗಳ ಸಮ್ಮುಖದಲ್ಲಿ ಶ್ರೀ ವಿರೂಪಾಕ್ಷೇಶ್ವರ ದೇವಾಲಯದ ಪಕ್ಕದಲ್ಲಿರುವ ಮನ್ಮುಖ ತೀರ್ಥ(ಪುಷ್ಕರಣಿ)ದಲ್ಲಿ ವಿದ್ಯುತ್ ಅಲಂಕೃತ ತೆಪ್ಪದಲ್ಲಿ ಪಂಪಾ ಶ್ರೀವಿರೂಪಾಕ್ಷೇಶ್ವರನ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಐದು ಸುತ್ತು ಪ್ರದಕ್ಷಿಣೆ ಹಾಕಲಾಯಿತು. ಮಂಗಳವಾದ್ಯದೊಂದಿಗೆ ತೆಪ್ಪೋತ್ಸವ ಅದ್ಧೂರಿಯಾಗಿ ನಡೆಯಿತು. ಈ ವೇಳೆ ಭಕ್ತರ ಜಯಘೋಷ ಮೊಳಗಿತು.

ವಿಜಯನಗರ, ಬಳ್ಳಾರಿ, ಕೊಪ್ಪಳ ಸೇರಿದಂತೆ ಇತರೆ ಜಿಲ್ಲೆಗಳ ಭಕ್ತರು ತೆಪ್ಪೋತ್ಸವದಲ್ಲಿ ಭಾಗವಹಿಸಿದ್ದರು. ಬೆಳಗ್ಗೆ ತುಂಗಭದ್ರಾ ನದಿ ತೀರದಲ್ಲಿರುವ ಶ್ರೀ ಚಕ್ರ ತೀರ್ಥ ಕೋದಂಡರಾಮ ಸ್ವಾಮಿ ಕಲ್ಯಾಣೋತ್ಸವ ಹಾಗೂ ರಥೋತ್ಸವ ನಡೆಯಿತು. ಸಾವಿರಾರರು ಭಕ್ತರು ಭಾಗಿಯಾಗಿದ್ದರು. ಏ. 23ರಂದು ಶ್ರೀವಿರೂಪಾಕ್ಷೇಶ್ವರ ಹಾಗೂ ಶ್ರೀ ಚಂದ್ರಮೌಳೇಶ್ವರ ಬ್ರಹ್ಮರಥೋತ್ಸವ ನಡೆದು ಲಕ್ಷಾಂತರ ಭಕ್ತರು ಸಾಕ್ಷಿಯಾಗಿದ್ದರು. ಹಂಪಿ ಜಾತ್ರೆಯಾಗಿ ಎರಡು ದಿನಕ್ಕೆ ತೆಪ್ಪೋತ್ಸವ ನಡೆದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ