ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ

KannadaprabhaNewsNetwork |  
Published : Nov 09, 2023, 01:00 AM ISTUpdated : Nov 09, 2023, 01:01 AM IST
ಪೊಟೋ-ಪಟ್ಟಣದ ವೀರಯೋಧ ಸುರೇಶ ಹೂಲಿಕಟ್ಟಿ ಅವರು ದೇಶ ಸೇವೆಯಿಂದ ನಿವೃತ್ತರಾಗಿ ಆಗಮಿಸಿದ್ದ ವೇಳೆ ತೆರೆದ ಜೀಪಿನಲ್ಲಿ ಅವರನ್ನು ಮೆರವಣೀಗೆಯ ಮೂಲಕ ಕರೆತರುತ್ತಿರುದ್ದ ದೃಶ್ಯ. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರಭಾರತ ಮಾತೆಯ ಸೇವೆಯಲ್ಲಿ ಕಳೆದ 22 ವರ್ಷಗಳಿಂದ ತೊಡಗಿಕೊಂಡಿದ್ದ ವೀರಯೋಧ ಸುರೇಶ ಹೂಲಿಕಟ್ಟಿ ಸೇವೆಯಿಂದ ನಿವೃತ್ತರಾಗಿ ತವರಿಗೆ ಆಗಮಿಸಿದ್ದ ವೇಳೆ ಪಟ್ಟಣದ ಶಿಗ್ಲಿ ಕ್ರಾಸ್ ಬಳಿ ದೇಶಾಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿ ಬರ ಮಾಡಿಕೊಂಡರು.ನಿವೃತ್ತ ಯೋಧ ಸುರೇಶ ಹೂಲಿಕಟ್ಟಿ ದಂಪತಿಗಳನ್ನು ತೆರೆದ ಜೀಪಿನಲ್ಲಿ ಪಟ್ಟಣದ ತುಂಬೆಲ್ಲ ಮೆರವಣಿಗೆ ಮಾಡುತ್ತ ಸಾಗಿದ್ದು ವಿಶೇಷವಾಗಿ ಕಂಡು ಬಂದಿತು.

ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರ

ಭಾರತ ಮಾತೆಯ ಸೇವೆಯಲ್ಲಿ ಕಳೆದ 22 ವರ್ಷಗಳಿಂದ ತೊಡಗಿಕೊಂಡಿದ್ದ ವೀರಯೋಧ ಸುರೇಶ ಹೂಲಿಕಟ್ಟಿ ಸೇವೆಯಿಂದ ನಿವೃತ್ತರಾಗಿ ತವರಿಗೆ ಆಗಮಿಸಿದ್ದ ವೇಳೆ ಪಟ್ಟಣದ ಶಿಗ್ಲಿ ಕ್ರಾಸ್ ಬಳಿ ದೇಶಾಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿ ಬರ ಮಾಡಿಕೊಂಡರು. ನಿವೃತ್ತ ಯೋಧ ಸುರೇಶ ಹೂಲಿಕಟ್ಟಿ ದಂಪತಿಗಳನ್ನು ತೆರೆದ ಜೀಪಿನಲ್ಲಿ ಪಟ್ಟಣದ ತುಂಬೆಲ್ಲ ಮೆರವಣಿಗೆ ಮಾಡುತ್ತ ಸಾಗಿದ್ದು ವಿಶೇಷವಾಗಿ ಕಂಡು ಬಂದಿತು. ಲಕ್ಷ್ಮೇಶ್ವರ ತಾಲೂಕು ನಿವೃತ್ತ ಸೈನಿಕರ ಸಂಘದ ಸದಸ್ಯರು ಪಟ್ಟಣದ ಶಿಗ್ಲಿ ಕ್ರಾಸ್, ಸೋಮೇಶ್ವರ ಪಾದಗಟ್ಟಿ, ಹಾವಳಿ ಹನಮಪ್ಪನ ದೇವಸ್ಥಾನ, ವಿದ್ಯಾರಣ್ಯ ವೃತ್ತ, ಮಹಾಕವಿ ಪಂಪ ವೃತ್ತದ ಮೂಲಕ ಮೂಕ ಬಸವೇಶ್ವರ ದೇವಸ್ಥಾನಕ್ಕೆ ಮೆರವಣಿಗೆ ಮೂಲಕ ಕರೆತರಲಾಯಿತು.ಮೆರವಣಿಗೆಯಲ್ಲಿ ಭಾರತ ಮಾತಾ ಕೀ ಜೈ ಎನ್ನುವ ಘೋಷಣೆ ಕೂಗುತ್ತ ದೇಶಾಭಿಮಾನಿಗಳು ಸಾಗಿದ್ದು ಕಂಡು ಬಂದಿತು. ಸುರೇಶ ನಾನಾ ಕಡೆಗಳಲ್ಲಿ ದೇಶ ಸೇವೆ ಸಲ್ಲಿಸಿ ತವರಿಗೆ ಮರಳಿದ ಸಂದರ್ಭದಲ್ಲಿ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್‌, ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಭೀಮಣ್ಣ ಯಂಗಾಡಿ, ಮಂಜುನಾಥ ಚಾಕಲಬ್ಬಿ, ಎಸ್.ಎಫ್. ಆದಿ, ಎನ್.ಎನ್. ನೆಗಳೂರ, ಚರಂತಯ್ಯ ಹಿರೇಮಠ ಸೇರಿದಂತೆ ಅನೇಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌