ಶಿವಮೊಗ್ಗದಲ್ಲಿ ಕನ್ನಡದ ರಥಕ್ಕೆ ಅದ್ಧೂರಿ ಸ್ವಾಗತ

KannadaprabhaNewsNetwork |  
Published : Oct 29, 2024, 12:51 AM IST
ಪೊಟೊ: 28ಎಸ್ಎಂಜಿಕೆಪಿ02ಶಿವಮೊಗ್ಗ ನಗರಕ್ಕೆ ಸೋಮವಾರ ಆಗಮಿಸಿದ್ದ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದ  ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯನ್ನು ಗಣ್ಯರು ಸ್ವಾಗತಿಸಿದರು. | Kannada Prabha

ಸಾರಾಂಶ

ಶಿವಮೊಗ್ಗ ನಗರಕ್ಕೆ ಸೋಮವಾರ ಆಗಮಿಸಿದ್ದ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯನ್ನು ಗಣ್ಯರು ಸ್ವಾಗತಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯು ರಾಜ್ಯದ ವಿವಿಧ ತಾಲೂಕುಗಳಿಗಲ್ಲಿ ಸಂಚರಿಸಿ ಸೋಮವಾರ ಮಧ್ಯಾಹ್ನ ಶಿವಮೊಗ್ಗ ನಗರವನ್ನು ಪ್ರವೇಶಿಸಿತು.

ಜಿಲ್ಲಾಡಳಿತ, ತಾಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪಧಾದಿಕಾರಿಗಳು ಜಿಲ್ಲೆಯ ಜನಪ್ರತಿನಿಧಿಗಳು ಭುವನೇಶ್ವರಿ ತಾಯಿಗೆ ಪುಷ್ಪ ನಮನ ಸಲ್ಲಿಸಿ ಕನ್ನಡದ ರಥವನ್ನು ಸಂಭ್ರಮದಿಂದ ಸ್ವಾಗತಿಸಿದರು.

ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ಕುವೆಂಪು ರಂಗಮಂದಿರದವರೆಗೆ ಹೊರಟ ರಾಜ ಬೀದಿ ಉತ್ಸವದಲ್ಲಿ ವಿವಿಧ ಶಾಲೆಗಳ ಮಕ್ಕಳು ಹೆಜ್ಜೆ ಹಾಕಿದರು. ದುರ್ಗಿಗುಡಿ ಪ್ರೌಢಶಾಲೆಯ ಮಕ್ಕಳು ಸ್ವತಃ ಡೊಳ್ಳು ಬಾರಿಸುತ ಮೆರವಣಿಗೆಗೆ ವಿಶೇಷ ಮೆರಗು ನೀಡಿದರು. ಮೆರವಣಿಗೆ ಉದ್ದಕ್ಕೂ ಕನ್ನಡಪರ ಜಯ ಘೋಷ, ನಾದ ಸ್ವರದೊಂದಿಗೆ ನೆರೆದಿದ್ದ ಕನ್ನಡದ ಮನಸ್ಸುಗಳು ಹೆಜ್ಜೆ ಹಾಕಿದರು.

ಕುವೆಂಪು ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಹಸೀಲ್ದಾರ್ ಗಿರೀಶ್ ಅವರು, ಕನ್ನಡ ಭಾಷೆ ನಮ್ಮ ಭಾವನೆಯನ್ನು ವ್ಯಕ್ತಪಡಿಸುವ ಹೃದಯಸ್ಪರ್ಶಿ ಭಾಷೆಯಾಗಿದೆ ಎಂದರು.

ಕನ್ನಡವನ್ನು ಮಾತನಾಡಿದರೆ ಕೆಲವು ಶಾಲೆಗಳಲ್ಲಿ ದಂಡ ಹಾಕುತ್ತಾರೆ ಎನ್ನುವ ಸುದ್ದಿಗಳನ್ನು ಕೇಳಿದ್ದೇವೆ. ಕನ್ನಡ ನಾಡಿನಲ್ಲಿಯೇ ಈ ಪರಿಸ್ಥಿತಿ ಇದ್ದು, ಇದು ಅತ್ಯಂತ ವಿಷಾಧನೀಯ. ಅನ್ಯಭಾಷೆ ಕಲಿಕೆ ನಮ್ಮ ಜೀವನಕ್ಕೆ ಅಗತ್ಯ ಅದರೆ ನಮ್ಮ ಮಾತೃ ಭಾಷೆಯನ್ನು ನಾವು ಎಂದಿಗೂ ಬಿಡಬಾರದು. ಶಾಲೆಗಳಲ್ಲಿ ಹಾಗೂ ನಮ್ಮ ಉದ್ಯೋಗದ ಸ್ಥಳಗಳಲ್ಲಿ ಕನ್ನಡವನ್ನು ಮಾತನಾಡಬೇಕು ಎಂದು ಹೇಳಿದರು.

|ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಮಾತನಾಡಿ, ಸಾಹಿತ್ಯ ಸಮ್ಮೇಳನ ಕನ್ನಡಿಗರ ಅಸ್ಮಿತೆಯಾಗಿದ್ದು, ಕನ್ನಡದ ಅನೇಕ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ಮತ್ತು ನಿರ್ಣಯಗಳು ನಡೆಯಲಿದೆ. ಮಾತೃಭಾಷೆಯಲ್ಲಿ ಪ್ರಬುದ್ಧತೆ ಪಡೆದಾಗ ಯಾವುದೇ ಭಾಷೆಯನ್ನು ಸುಲಲಿತವಾಗಿ ಕಲಿಯಬಹುದಾದ ಶಕ್ತಿ ನಮ್ಮ ಮಕ್ಕಳಿಗೆ ಸಿಗುತ್ತದೆ. ಅದಕ್ಕಾಗಿಯೆ ಪ್ರೌಢಶಾಲಾ ಹಂತದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸುವ ಹಾಗೂ ಸೃಜನಶೀಲ ಚಟುವಟಿಕೆಗಳಲ್ಲಿ ಮಕ್ಕಳು ತಮ್ಮನ್ನು ತಾವು ತೆರೆದುಕೊಳ್ಳಲು ಪ್ರೋತ್ಸಾಹಿಸುವ ಕಾರ್ಯ ನಡೆಯಬೇಕಿದೆ ಎಂದು ಹೇಳಿದರು.

ಈ ವೇಳೆ ಜಿಪಂ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಎನ್.ಹೇಮಂತ್, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್, ಬಿಇಒ ರಮೇಶ್, ಸಂಚಾರಿ ಠಾಣೆ ಇನ್ಸೆಪೆಕ್ಟರ್ ಸಂತೋಷ್, ಕಸಾಪ ಪದಾಧಿಕಾರಿಗಳಾದ ಎಂ.ಎಂ.ಸ್ವಾಮಿ, ಡಿ.ಗಣೇಶ್, ಶಿಕಾರಿಪುರ ಎಚ್.ಎಸ್.ರಘು, ಕೆ.ಎಸ್.ಹುಚ್ಚರಾಯಪ್ಪ, ಮಹಾದೇವಿ, ಅನುರಾಧ, ಪ್ರತಿಮಾ ಡಾಕಪ್ಪಗೌಡ, ಲಕ್ಷ್ಮೀ ಮಹೇಶ್, ಸಾವಿತ್ರಮ್ಮ, ಕುಬೇರಪ್ಪ, ಸತ್ಯನಾರಾಯಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕಳೆದ ಎರಡು ದಿನಗಳಿಂದ ಶಿಕಾರಿಪುರ, ಸೊರಬ, ಸಾಗರ, ತೀರ್ಥಹಳ್ಳಿ ತಾಲೂಕಿನಲ್ಲಿ ಸಂಚರಿಸಿದ್ದ ರಥವು ಸೋಮವಾರ ಸಂಜೆಯ ವೇಳೆಗೆ ಮಲವಗೊಪ್ಪ, ಭದ್ರಾವತಿ ಸಂಚರಿಸಿ, ಮಂಗಳವಾರ ಬೆಳಗ್ಗೆ ಚಿತ್ರದುರ್ಗ ಜಿಲ್ಲೆಯನ್ನು ಪ್ರವೇಶಿಸಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವಜನರಲ್ಲಿ ನಾಯಕತ್ವ ಅರಿವಿಗೆ ಜೆಸಿಐ ಆದ್ಯತೆ
ಮೇಲುಕೋಟೆ: ಡಿ.21ರಿಂದ ಮೂರು ದಿನಗಳ ಕಾಲ ನಾಟಕೋತ್ಸವ