ರಾಘವೇಶ್ವರ ಶ್ರೀಗಳ ಸುವರ್ಣ ಪಾದುಕೆಗೆ ಅದ್ಧೂರಿ ಸ್ವಾಗತ

KannadaprabhaNewsNetwork |  
Published : Nov 30, 2023, 01:15 AM IST
ಪೊಟೋ ಪೈಲ್ : 29ಬಿಕೆಲ್3: ರಾಘವೇಶ್ವರ ಭಾರತೀ ಸ್ವಾಮೀಜಿಯವರ ಸುವರ್ಣ ಪಾದುಕೆಗೆ ಶಿವಾನಂಹ್ಹೆಬ್ಬಾರ ಮೂಡ್ಕೆರೆ ಅವರ ಮನೆಯಲ್ಲಿ ಪೂಜೆ ಸಲ್ಲಿಸಿರುವುದು.  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಭಟ್ಕಳತಾಲೂಕಿಗೆ ಆಗಮಿಸಿ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ಸುವರ್ಣ ಪಾದುಕೆ ಸಂಚಾರಕ್ಕೆ ಭಕ್ತರು ಅದ್ಧೂರಿ ಸ್ವಾಗತ ನೀಡಿ ಬರಮಾಡಿಕೊಂಡರು.ಮಂಗಳವಾರ ಸಂಜೆ ಶ್ರೀ ಕ್ಷೇತ್ರ ದೇವಿಮನೆಗೆ ಆಗಮಿಸಿದ ಸುವರ್ಣ ಪಾದುಕೆಗೆ ದೇವಿಮನೆ ಮೊಕ್ತೇಸರ ಉಮೇಶ ಹೆಗಡೆ ದಂಪತಿ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಭವತಾರಿಣಿ ಸೀಮಾ ವಲಯದ ಅಧ್ಯಕ್ಷ ವಿನಾಯಕ ಭಟ್ಟ ತೆಕ್ನಗದ್ದೆ, ದೇವಿಮನೆ ಅರ್ಚಕ ಬಾಲಚಂದ್ರ ಭಟ್ಟ,ದೇವಿಮನೆ ಅಧ್ಯಕ್ಷ ಶಿವಾನಂದ ಹೆಬ್ಬಾರ ಮುಲ್ಲೆಮಕ್ಕಿ, ವೆ ಮೂ ಗುರು ಉಪಾಧ್ಯಾಯ ಮುಂತಾದವರಿದ್ದರು.

ಶ್ರೀಗಳ ಪಾದುಕೆಗೆ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದ ಭಕ್ತರು

ಕನ್ನಡಪ್ರಭ ವಾರ್ತೆ ಭಟ್ಕಳ

ತಾಲೂಕಿಗೆ ಆಗಮಿಸಿ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ಸುವರ್ಣ ಪಾದುಕೆ ಸಂಚಾರಕ್ಕೆ ಭಕ್ತರು ಅದ್ಧೂರಿ ಸ್ವಾಗತ ನೀಡಿ ಬರಮಾಡಿಕೊಂಡರು.

ಮಂಗಳವಾರ ಸಂಜೆ ಶ್ರೀ ಕ್ಷೇತ್ರ ದೇವಿಮನೆಗೆ ಆಗಮಿಸಿದ ಸುವರ್ಣ ಪಾದುಕೆಗೆ ದೇವಿಮನೆ ಮೊಕ್ತೇಸರ ಉಮೇಶ ಹೆಗಡೆ ದಂಪತಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಭವತಾರಿಣಿ ಸೀಮಾ ವಲಯದ ಅಧ್ಯಕ್ಷ ವಿನಾಯಕ ಭಟ್ಟ ತೆಕ್ನಗದ್ದೆ, ದೇವಿಮನೆ ಅರ್ಚಕ ಬಾಲಚಂದ್ರ ಭಟ್ಟ,ದೇವಿಮನೆ ಅಧ್ಯಕ್ಷ ಶಿವಾನಂದ ಹೆಬ್ಬಾರ ಮುಲ್ಲೆಮಕ್ಕಿ, ವೆ ಮೂ ಗುರು ಉಪಾಧ್ಯಾಯ ಮುಂತಾದವರಿದ್ದರು.

ಬುಧವಾರ ಬೆಳಗ್ಗೆ ಮಾರುಕೇರಿ ಹೆಜ್ಜಲಿನ ಮೂಡಕೆರೆ ಶಿವಾನಂದ ಹೆಬ್ಬಾರ ಮನೆಯಲ್ಲಿ ಶ್ರೀಗಳ ಸುವರ್ಣ ಪಾದುಕೆಗೆ ಪೂಜೆ ನೆರವೇರಿಸಲಾಯಿತು. ನಂತರ ಕಿತ್ರೆ ದೇವಿಮನೆಯಲ್ಲಿ ಶ್ರೀಕಂಠ ಹೆಬ್ಬಾರ ನೇತೃತ್ವದಲ್ಲಿ ಮಾರುಕೇರಿ ಘಟಕದಿಂದ ಮತ್ತು ಬೆಣಂದೂರು ಘಟಕದಿಂದ ನಾರಾಯಣ ಹೆಬ್ಬಾರ್‌ ನೇತೃತ್ವದಲ್ಲಿ ಪಾದಪೂಜೆ ನೆರವೇರಿಸಲಾಯಿತು.

ನಂತರ ಭವತಾರಿಣಿ ವಲಯದಿಂದ ಭಿಕ್ಷೆ ನಡೆಸಲಾಯಿತು.ಮಧ್ಯಾಹ್ನ ಕೋಣಾರದ ಕೆರೆಕೋಡ್ಲು ರಾಮಕೃಷ್ಣ ಎಸ್ ಹೆಬ್ಬಾರ ಮನೆಯಲ್ಲಿ ಸುವರ್ಣ ಪಾದುಕೆಗೆ ಪೂಜೆ ಸಲ್ಲಿಸಲಾಯಿತು. ನಂತರ ಪಾದುಕೆ ಮರವಂತೆ ವಲಯಕ್ಕೆ ತೆರಳಿತು.ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು. ಸುವರ್ಣ ಪಾದುಕೆ ಸಂಚಾರದ ಉದ್ದೇಶ,ಮಹತ್ವದ ಬಗ್ಗೆ ತಿಳಿಸಿಕೊಡಲಾಯಿತು. ಇದಕ್ಕೂ ಪೂರ್ವದಲ್ಲಿ ಭಟ್ಕಳ ವಲಯದಲ್ಲೂ ಎರಡು ದಿನಗಳ ಕಾಲ ಸುವರ್ಣ ಪಾದುಕೆ ಸಂಚರಿಸಿದ್ದು, ಭಕ್ತರು ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗನ ಸಾವಿಗೆ ಮೋದಿ ಸೇಡು ತೀರಿಸಿದ್ದಕ್ಕೆ ನೆಮ್ಮದಿ : ಸುಮತಿ
ಗೋಲ್ಡ್‌ ಸ್ಮಗ್ಲರ್‌, ನಟಿ ರನ್ಯಾ ರಾವ್‌ 1 ವರ್ಷ ಬಳಿಕ ಜೈಲಿಂದ ಬಿಡುಗಡೆ!