ಜ್ಞಾನದ ಬೆಳಕು ನೀಡಿದ ಮಹಾನ್‌ ವ್ಯಕ್ತಿ

KannadaprabhaNewsNetwork |  
Published : May 01, 2025, 12:48 AM IST
ಫೋಟೋ 30ಪಿವಿಡಿ1ಪಾವಗಡ,ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಜಯಂತ್ಯುತ್ಸವ ಸಮಾರಂಭದಲ್ಲಿ ಜಗಜ್ಯೋತಿ ಬಸವಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾನಮನ ಸಲ್ಲಿಸಿ ತಹಸೀಲ್ದಾರ್‌ ಡಿ.ಎನ್‌.ವರದರಾಜು ಮಾತನಾಡಿದರು. ಫೋಟೋ 30ಪಿವಿಡಿ1ಪಾವಗಡ,ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಜಯಂತ್ಯುತ್ಸವ ಸಮಾರಂಭದಲ್ಲಿ ಜಗಜ್ಯೋತಿ ಬಸವಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾನಮನ ಸಲ್ಲಿಸಿ ತಹಸೀಲ್ದಾರ್‌ ಡಿ.ಎನ್‌.ವರದರಾಜು ಮಾತನಾಡಿದರು.  | Kannada Prabha

ಸಾರಾಂಶ

ಸಮಾನತೆ ಹಾಗೂ ಕಾಯಕವೇ ಕೈಲಾಸ ಎಂಬ ಸಂದೇಶ ಸಾರಿ ಜಗತ್ತಿಗೆ ಜ್ಞಾನದ ಬೆಳಕು ಚೆಲ್ಲಿ ಜಾಗೃತಿ ಮೂಡಿಸಿದ ಕೀರ್ತಿ ಜಗಜ್ಯೋತಿ ಬಸವಣ್ಣ ಅವರಿಗೆ ಸಲ್ಲಬೇಕಿದೆ ಎಂದು ತಹಸೀಲ್ದಾರ್‌ ಡಿ.ಎನ್‌. ವರದರಾಜು ಹೇಳಿದರು.

ಕನ್ನಡಪ್ರಭ ವಾರ್ತೆ ಪಾವಗಡ

ಸಮಾನತೆ ಹಾಗೂ ಕಾಯಕವೇ ಕೈಲಾಸ ಎಂಬ ಸಂದೇಶ ಸಾರಿ ಜಗತ್ತಿಗೆ ಜ್ಞಾನದ ಬೆಳಕು ಚೆಲ್ಲಿ ಜಾಗೃತಿ ಮೂಡಿಸಿದ ಕೀರ್ತಿ ಜಗಜ್ಯೋತಿ ಬಸವಣ್ಣ ಅವರಿಗೆ ಸಲ್ಲಬೇಕಿದೆ ಎಂದು ತಹಸೀಲ್ದಾರ್‌ ಡಿ.ಎನ್‌. ವರದರಾಜು ಹೇಳಿದರು.

ಜಯಂತ್ಯುತ್ಸವದ ಹಿನ್ನೆಲೆಯಲ್ಲಿ ತಾಲೂಕು ಆಡಳಿತದ ವತಿಯಿಂದ ಬುಧವಾದ ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಮ್ಮ ವಚನ ಸಂದೇಶದ ಮೂಲಕ ಸಮಾನತೆ ಕಟ್ಟಿಕೊಟ್ಟ ಕೀರ್ತಿ ಬಸವಣ್ಣ ಅವರಿಗೆ ಸಲ್ಲಬೇಕು. ಅವರ ತತ್ವ ಸಿದ್ಧಾಂತ ಮಾದರಿಯಾಗಿದ್ದು ತಮ್ಮ ಅನುಯಾಯಿಗಳ ಮೂಲಕ ಸಹ ಮನೆಮನೆಗಳಿಗೆ ತೆರಳಿ ಸಮಾನತೆ ಹಾಗೂ ಬದುಕಿನ ಸೂತ್ರಗಳ ಕುರಿತು ಜಾಗೃತಿ ಮೂಡಿಸಿ ಬೆಳಕಾಗಿದ್ದಾರೆ. ಅವರನ್ನು ಪ್ರತಿಯೊಬ್ಬರು ಸ್ಮರಿಸಬೇಕು. ಅವರ ವಚನ ಸಾಹಿತ್ಯ ಕುರಿತು ಅರ್ಥೈಸಿಕೊಳ್ಳುವ ಮೂಲಕ ಜೀವನದಲ್ಲಿ ಮುನ್ನಡೆಯುವಂತೆ ಕರೆ ನೀಡಿದರು.

ಈ ವೇಳೆ ಗ್ರೇಡ್ 2 ತಹಸೀಲ್ದಾರ್ ಚಂದ್ರಶೇಖರ್, ಕಂದಾಯ ಇಲಾಖೆಯ ತನಿಖಾಧಿಕಾರಿ ರಾಜಗೋಪಾಲ್, ಗ್ರಾಮಲೆಕ್ಕಾಧಿಕಾರಿಗಳಾದ ರಾಜೇಶ್‌,ರವಿಕುಮಾರ್‌, ಗ್ರಾಮ ಆಡಳಿತ ಅಧಿಕಾರಿಗಳಾದ ಈರಣ್ಣ ಗೋರ್ನಾಳ್, ಸಿಬ್ಬಂದಿ ಪದ್ಮಾ, ಬಲರಾಂ, ಅಸ್ಲಾಂ, ಲಿಂಗಾಯತ ಸಮಾಜದ ಮುಖಂಡರಾದ ಕಾರ್ತಿಕ್ ರಾಜನ್, ಪ್ರೆಸ್‌ ನಾಗಭೂಷಣ್, ಶ್ರೇಯಸ್, ಎಚ್‌. ಕೃಷ್ಣಮೂರ್ತಿ,ವಕೀಲರಾದ ಆರ್. ಹನುಮಂತರಾಯಪ್ಪ, ಎಂ.ಜಿ. ಮಂಜುನಾಥ್, ರೈತ ಸಂಘದ ಗೋಪಾಲ್ ಹಾಗೂ ತಾಲೂಕು ಕಚೇರಿಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು