ಪ್ರವೇಶ ಪರೀಕ್ಷೆಗೆ ಹರಿದು ಬಂದ ವಿದ್ಯಾರ್ಥಿ ಸಮೂಹ

KannadaprabhaNewsNetwork |  
Published : Feb 20, 2024, 01:50 AM ISTUpdated : Feb 20, 2024, 01:51 AM IST
ಫೋಟೊ ಸುದ್ದಿ: 18ಜಿಬಿ8ಆಳಂದ ಪಟ್ಟಣದ ಎಂಎಆರ್‍ಜಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮೇಗಾ ಅರ್ಹತಾ ಪರೀಕ್ಷೆಯಲ್ಲಿ ನೋಂದಣಿಗಾಗಿ ಸರತಿ ಸಾಲಿನಲ್ಲಿ ನಿಂತ ವಿದ್ಯಾರ್ಥಿಗಳು. | Kannada Prabha

ಸಾರಾಂಶ

ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಸ್ಮಾರಕ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನೀಟ್, ಸಿಇಟಿ, ಜೆಇಇ ಸೇರಿದಂತೆ ಅನೇಕ ರಾಷ್ಟ್ರ ಮತ್ತು ರಾಜ್ಯಮಟ್ಟದ ಕೋರ್ಸಗಳಿಗೆ ಪಿಯುಸಿ ಪ್ರಥಮ ವರ್ಷದಿಂದಲೇ ತರಬೇತಿ ನೀಡಲಾಗುತ್ತಿದೆ

ಕನ್ನಡಪ್ರಭ ವಾರ್ತೆ ಆಳಂದ

ಪಟ್ಟಣದ ಪ್ರತಿಷ್ಠಿತ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಸ್ಮಾರಕ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಪ್ರವೇಶಕ್ಕಾಗಿ ಇಂದು ಜರುಗಿದ ಪ್ರವೇಶ ಪರೀಕ್ಷೆಯಲ್ಲಿ ತಾಲೂಕಿನ ಸಾವಿರಾರು ವಿದ್ಯಾರ್ಥಿಗಳು ಹಾಜರಾದರು.

ಆಳಂದ ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಹಮ್ಮಿಕೊಂಡಿದ್ದ ಪ್ರವೇಶ ಪರೀಕ್ಷೆಗೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅತ್ಯಂತ ಹುರುಪಿನಿಂದ ಭಾಗವಹಿಸಿ ಪರೀಕ್ಷೆ ಬರೆದರು. ಪ್ರವೇಶ ಪರೀಕ್ಷೆಯಲ್ಲಿ ಸುಮಾರು 1500 ವಿದ್ಯಾರ್ಥಿಗಳು ನೋಂದಣಿ ಮಾಡಿ ಪರೀಕ್ಷೆ ಬರೆದರು.

ಪ್ರವೇಶ ಪರೀಕ್ಷೆಯಲ್ಲಿ ಮೊದಲ 20 ರ್‍ಯಾಂಕ್‌ ಬಂದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾಲೇಜಿನಲ್ಲಿ ಉಚಿತ ಪ್ರವೇಶ, ಮೊದಲ ರ್‍ಯಾಂಕ್‌ ಬಂದ ವಿದ್ಯಾರ್ಥಿಗೆ 1 ಟ್ಯಾಬ್, 2ನೇ ರ್‍ಯಾಂಕ್‌ ಬಂದವರಿಗೆ ಪಿಯುಸಿ ವಿಜ್ಞಾನ ವಿಭಾಗದ ಸಂಪೂರ್ಣ ಪಠ್ಯಪುಸ್ತಕ, 3ನೇ ರ್‍ಯಾಂಕ್‌ ಬಂದವರಿಗೂ ಪಿಯುಸಿ ವಿಜ್ಞಾನ ವಿಭಾಗದ ಸಂಪೂರ್ಣ ಪಠ್ಯಪುಸ್ತಕ ಸಂಸ್ಥೆಯ ವತಿಯಿಂದ ನೀಡಲಾಗುವುದು.

ಕಾಲೇಜಿನಲ್ಲಿ ನೀಟ್, ಸಿಇಟಿ, ಜೆಇಇ ಸೇರಿದಂತೆ ಅನೇಕ ರಾಷ್ಟ್ರ ಮತ್ತು ರಾಜ್ಯಮಟ್ಟದ ಕೋರ್ಸಗಳಿಗೆ ಪಿಯುಸಿ ಪ್ರಥಮ ವರ್ಷದಿಂದಲೇ ತರಬೇತಿ ನೀಡಲಾಗುತ್ತಿದೆ. ಕಳೆದ ಬಾರಿ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ ಬಂದಿದೆ. ತಾಲೂಕಿನ ವಿದ್ಯಾರ್ಥಿಗಳಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಈ ಬಾರಿ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ.

ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ಬರೆಯಲು ಅನೂಕೂಲವಾಗುವಂತೆ ಸಂಸ್ಥೆಯಿಂದ ಪಟ್ಟಣದ ಬಸ್ ನಿಲ್ದಾಣ, ರಜ್ವಿ ರಸ್ತೆ, ಶ್ರೀ ರಾಮ ಮಾರುಕಟ್ಟೆ, ಸಿದ್ಧಾರ್ಥ ಚೌಕ್, ಹಳೆಯ ತಹಸೀಲ ಕಚೇರಿ ಸೇರಿದಂತೆ ಪ್ರಮುಖ ಸ್ಥಳಗಳಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತುಮಕೂರಿನ ಠಾಣೆಯಲ್ಲಿ ಲಾಕಪ್‌ ಡೆತ್‌!
ವಿಚ್ಛೇದಿತ ಪತ್ನಿ, ಮಗಳ ಮೇಲೆಯೇ ಆ್ಯಸಿಡ್‌ ದಾಳಿ