ಸಂಶೋಧನಾ ಲೇಖನಗಳು ಅಭಿವೃದ್ಧಿಗೆ ಮಾರ್ಗದರ್ಶಿ

KannadaprabhaNewsNetwork |  
Published : Apr 03, 2025, 12:30 AM IST
ಮಹಿಳಾ ವಿವಿಯಲ್ಲಿ ಸಂಶೋಧನಾ ವಿಧಾನ ಕಾರ್ಯಕ್ರಮ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಸಂಶೋಧನಾ ಲೇಖನಗಳು ಸಮಾಜದ ಅಭಿವೃದ್ಧಿಗೆ ಮಾರ್ಗದರ್ಶನ ನೀಡುವ ಬೆಳಕಿನಂತೆ ಕಾರ್ಯನಿರ್ವಹಿಸುತ್ತವೆ ಎಂದು ಹಾವೇರಿ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವೆ ಪ್ರೊ.ರೇಣುಕಾ ಮೇಟಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಸಂಶೋಧನಾ ಲೇಖನಗಳು ಸಮಾಜದ ಅಭಿವೃದ್ಧಿಗೆ ಮಾರ್ಗದರ್ಶನ ನೀಡುವ ಬೆಳಕಿನಂತೆ ಕಾರ್ಯನಿರ್ವಹಿಸುತ್ತವೆ ಎಂದು ಹಾವೇರಿ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವೆ ಪ್ರೊ.ರೇಣುಕಾ ಮೇಟಿ ಹೇಳಿದರು.

ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನಿರ್ವಹಣಾ ಅಧ್ಯಯನ ವಿಭಾಗದಿಂದ ಐ.ಸಿ.ಎಸ್.ಎಸ್.ಆರ್ ಪ್ರಾಯೋಜಿಕತ್ವದಲ್ಲಿ ಆಯೋಜಿಸಿದ್ದ ಹತ್ತು ದಿನಗಳ ಸಮಗ್ರ ಸಾಮಾಜಿಕ ವಿಜ್ಞಾನ ವಿಶ್ಲೇಷಣೆಗಾಗಿ ಸಂಶೋಧನಾ ವಿಧಾನ ತಂತ್ರಗಳು ಕುರಿತ ಸಂಶೋಧನಾ ವಿಧಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಶೈಕ್ಷಣಿಕ ವಾತಾವರಣದಲ್ಲಿ ಸಂಶೋಧನೆ ಅತ್ಯಂತ ಪ್ರಮುಖವಾಗಿದೆ. ಗುಣಮಟ್ಟದ ಸಂಶೋಧನಾ ಲೇಖನಗಳು ಹೊಸ ತಿಳುವಳಿಕೆ ನೀಡುವುದರ ಜೊತೆಗೆ ವಿದ್ಯಾರ್ಥಿಗಳು ಮತ್ತು ಅಂತಾರಾಷ್ಟ್ರೀಯ ಮಟ್ಟದ ತಜ್ಞರಿಗೆ ಮಾರ್ಗದರ್ಶನ ನೀಡಲು ಸಹಕಾರಿಯಾಗುತ್ತವೆ. ನಿರಂತರ ಅಧ್ಯಯನ ಮತ್ತು ವಿಶ್ಲೇಷಣೆಯ ಮೂಲಕ ಸಂಶೋಧಕರು ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳಬಹುದು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳನ್ನು ಪರಿಚಯಿಸಬಹುದು ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ. ಮಾತನಾಡಿ, ಸಂಶೋಧಕರು ತಮ್ಮ ಸಂಶೋಧನಾ ಕೌಶಲ್ಯಗಳನ್ನು ಪರಿಷ್ಕರಿಸಲು ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು ಇಂತಹ ಕಾರ್ಯಕ್ರಮ ಅಗತ್ಯವಾಗಿದೆ. ಸಂಶೋಧನೆ ನಡೆಸುವಾಗ ವಿವಿಧ ಸವಾಲುಗಳು ಎದುರಾಗುತ್ತವೆ. ಸವಾಲುಗಳನ್ನು ಸಮರ್ಥವಾಗಿ ಎದುರಿಸಿ, ಗುಣಮಟ್ಟದ ಸಂಶೋಧನೆ ಮಾಡಬೇಕು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳು ಇದರ ಪ್ರಯೋಜನ ಪಡೆದು ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ವಿಭಾಗಳ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಸಂಯೋಜಕಿ ಪ್ರೊ.ಅನಿತಾ ನಾಟೇಕರ್ ಸ್ವಾಗತಿಸಿದರು. ಸಹ ಸಂಯೋಜಕ ಡಾ.ಚಂದ್ರಶೇಖರ ಮಠಪತಿ ವಂದಿಸಿದರು. ಸಂಶೋಧನಾ ವಿದ್ಯಾರ್ಥಿನಿ ಅಶ್ವಿನಿ ತೊರವಿ ನಿರೂಪಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ