ಸಂಶೋಧನಾ ನಿಯತಕಾಲಿಕೆ ಸಂಶೋಧನೆಯಲ್ಲಿ ತೊಡಗಲು ಕೈಪಿಡಿ: ಡಾ.ಜಿ. ಪರಮೇಶ್ವರ

KannadaprabhaNewsNetwork |  
Published : Feb 03, 2024, 01:47 AM IST
ನಗರದ ಶ್ರೀ ಸಿದ್ದಾರ್ಥ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪಠ್ಯ-ಪಠ್ಯೇತರ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ಒಳಗೊಂಡ ‘ಪರಂ-24’ ವಾರ್ಷಿಕ ಸಂಚಿಕೆಯನ್ನು ಡಾ.ಜಿ. ಪರಮೇಶ್ವರ ಬಿಡುಗಡೆ ಮಾಡಿದರು. | Kannada Prabha

ಸಾರಾಂಶ

ತುಮಕೂರಿನ ಶ್ರೀ ಸಿದ್ದಾರ್ಥ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪಠ್ಯ-ಪಠ್ಯೇತರ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ಒಳಗೊಂಡ ‘ಪರಂ-24’ ವಾರ್ಷಿಕ ಸಂಚಿಕೆಯನ್ನು ಗೃಹಸಚಿವ ಡಾ.ಜಿ. ಪರಮೇಶ್ವರ್ ಬಿಡುಗಡೆ ಮಾಡಿದರು.

ಕನ್ನಡಪ್ರಭ ವಾರ್ತೆ ತುಮಕೂರು

ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ಪ್ರಕಟಿಸುವ ವೈಜ್ಞಾನಿಕ ಮತ್ತು ಸಂಶೋಧನಾ ನಿಯತಕಾಲಿಕೆಗಳು ಶೈಕ್ಷಣಿಕ ಜ್ಞಾನದ ಪ್ರಪಂಚಕ್ಕೆ ಕೊಡುಗೆ ನೀಡುತ್ತವೆಯಷ್ಟೆ ಅಲ್ಲದೆ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಮಾರ್ಗದರ್ಶನ ಮತ್ತು ಸಂಶೋಧನೆಯಲ್ಲಿ ತೊಡಗಲು ಮಾರ್ಗದರ್ಶಿ ಕೈಪಿಡಿಗಳಾಗುತ್ತವೆ ಎಂದು ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ ಅಭಿಪ್ರಾಯಪಟ್ಟರು.

ನಗರದ ಶ್ರೀ ಸಿದ್ದಾರ್ಥ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪಠ್ಯ-ಪಠ್ಯೇತರ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ಒಳಗೊಂಡ ‘ಪರಂ-24’ ವಾರ್ಷಿಕ ಸಂಚಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ಸಂಶೋಧನೆಗಳು ಪಠ್ಯಕ್ರಮದ ಸುಧಾರಣೆ ಮತ್ತು ಗಮನಾರ್ಹ ಪ್ರಗತಿಯನ್ನು ಸಾಧಿಸಲು ಅನುವು ಮಾಡಿಕೊಡುತ್ತವೆ. ಕಲಿಯುವವರ ಅಗತ್ಯಗಳಿಗೆ ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳುವುದು, ನಿರ್ದಿಷ್ಟ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಹೆಚ್ಚಿನ ಜ್ಞಾನ, ಕೌಶಲ್ಯ ಮತ್ತು ತಿಳುವಳಿಕೆಯ ವೃತ್ತಿಪರ ಕಲಿಕೆಗೆ ಆಧಾರವಾಗುತ್ತವೆ ಎಂದರು.

ಸಂಶೋಧನೆ ಕ್ಷೇತ್ರದಲ್ಲಿ ಜ್ಞಾನದ ಪ್ರಗತಿ ಅರ್ಥಮಾಡಿಕೊಳ್ಳಲು ಮತ್ತು ಭವಿಷ್ಯದ ಸಂಶೋಧನೆಗಾಗಿ ಆಲೋಚನೆಗಳನ್ನು ಇನ್ನಷ್ಟು ಸುಧಾರಿಸಲು ಬಳಸಬಹುದಾದ ಪಾಂಡಿತ್ಯಪೂರ್ಣ ಲೇಖನಗಳ ದೊಡ್ಡ ಸಂಗ್ರಹವನ್ನುಕಾಲೇಜಿನ ನಿಯತಕಾಲಿಕೆ ನೀಡುತ್ತವೆ. ಈ ಶೈಕ್ಷಣಿಕ ನಿಯತಕಾಲಿಕಗಳು, ಪ್ರಾಧ್ಯಾಪಕರು-ಸಂಶೋಧಕರ ಮತ್ತು ವಿದ್ಯಾರ್ಥಿಗಳ ನಡುವೆ ಸಂವಹನವನ್ನು ಹೆಚ್ಚು ಮಾಡುತ್ತವೆ. ಶೈಕ್ಷಣಿಕ ಕ್ಷೇತ್ರದ ಹತ್ತು-ಹಲವು ವಿಚಾರಗಳ ವಿಶ್ಲೇಷಣೆಗೆ ಆಧಾರವಾಗುತ್ತವೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಉದಯೋನ್ಮುಖ ಆಲೋಚನೆಗಳಿಗೆ ಸಹಕಾರಿಯಾಗುತ್ತವೆ ಎಂದು ಸಾಹೇ ಕುಲಾಧಿಪತಿ ಡಾ.ಜಿ. ಪರಮೇಶ್ವರ ನುಡಿದರು.

ಶಿಕ್ಷಣವು ನಮ್ಮ ಜೀವನದಲ್ಲಿನ ಎಲ್ಲಾ ಸವಾಲುಗಳು, ಅನುಮಾನಗಳು ಮತ್ತು ಭಯಗಳನ್ನು ತೊಡೆದು ಹಾಕಲು ಸಹಾಯ ಮಾಡುವ ಸಾಧನವಾಗಿದೆ. ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಮತ್ತು ಭವಿಷ್ಯದ ಸವಾಲುಗಳಿಗೆ ನಮ್ಮನ್ನು ರೂಪಿಸಲು ಮತ್ತು ವೃತ್ತಿಯನ್ನು ಕಂಡುಕೊಳ್ಳಲು ಸಂಶೋಧನಾ ಕ್ಷೇತ್ರದ ಹೆಚ್ಚಿನ ಆದ್ಯತೆ ನೀಡಬೇಕಾಗಿರುವುದು ಇಂದಿನ ಆದ್ಯತೆಯಾಗಬೇಕು. ಪ್ರಾಧ್ಯಾಪಕರು ಸಕ್ರೀಯವಾಗಿ ಸಂಶೋಧನೆಯಲ್ಲಿ ತೊಡಗುವುದರ ಜೊತೆಗ ವಿದ್ಯಾರ್ಥಿಗಳಲ್ಲಿ ಈ ಆಸಕ್ತಿಯನ್ನು ಬೆಳಸುವಂತೆ ಕರೆ ನೀಡಿದರು.

ವಾರ್ಷಿಕ ಶೈಕ್ಷಣಿಕ ಸಂಚಿಕೆ ಬಿಡುಗಡೆ ಸಂದರ್ಭದಲ್ಲಿ ಸಾಹೇ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಡಾ.ಎಂ.ಝಡ್, ಕುಲಾಧಿಪತಿಗಳ ಸಲಹೆಗಾರರಾದ ಡಾ. ವಿವೇಕ ವೀರಯ್ಯ, ಶ್ರೀ ಸಿದ್ದಾರ್ಥ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್. ರವಿಪ್ರಕಾಶ್, ಮ್ಯಾಗ್‌ಜಿನ್‌ ಪ್ರಕಟಣೆಯ ಮೇಲ್ವಿಚಾರಕ ಎಂಸಿಎ ವಿಭಾಗ ಮುಖ್ಯಸ್ಥ ಪ್ರೊ.ಡಿ. ರಮೇಶ್, ಮೋಹನ್‌ ಕುಮಾರ್‌ ಟಿ.ಪಿ, ಸಂಚಿಕೆಯ ಸದಸ್ಯರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳ ತಂಡದ ಸದಸ್ಯರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!