ಉಡುಪಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ ಪ್ರೇಮಾನಂದ್ ರಾವ್ ಇವರಿಗೆ ಬೀಳ್ಕೊಡುಗೆ ಸಮಾರಂಭ ವಾರ್ತಾ ಇಲಾಖೆಯ ಕಚೇರಿ ಸಭಾಂಗಣದಲ್ಲಿ ನೆರವೇರಿತು.
ಕನ್ನಡಪ್ರಭ ವಾರ್ತೆ ಉಡುಪಿ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿದ ಪ್ರೇಮಾನಂದ್ ರಾವ್ ಇವರಿಗೆ ಬೀಳ್ಕೊಡುಗೆ ಸಮಾರಂಭವನ್ನು ವಾರ್ತಾ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಯಿತು.ಈ ಸಂದರ್ಭದಲ್ಲಿ ಇಲಾಖೆಯ ಸಹಾಯಕ ನಿರ್ದೇಶಕ ಬಿ ಮಂಜುನಾಥ್ ಅವರು ಮಾತನಾಡಿ, ಪ್ರೇಮಾನಂದ್ ರಾವ್ ಅವರು 1999 ರಿಂದ ಉಡುಪಿ ಕಚೇರಿಯಲ್ಲಿಯೇ 26 ವರ್ಷಗಳ ಕಾಲ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸಿ, ತಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಅನ್ಯೋನ್ಯವಾದ ಸ್ನೇಹವನ್ನು ಎಲ್ಲರೊಂದಿಗೆ ಹೊಂದಿದ್ದರು. ಅವರ ನಿವೃತ್ತಿ ಜೀವನ ಸುಖಕರವಾಗಿರಲಿ. ನಿವೃತ್ತಿ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ, ಉತ್ತಮ ಅರೋಗ್ಯ ದೇವರು ಕರುಣಿಸಲಿ ಎಂದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರೇಮಾನಂದ್ ರಾವ್ ಹಾಗೂ ಅವರ ಪತ್ನಿ ಶೋಭಾ ಅವರಿಗೆ ಶಾಲು ಹೊದಿಸಿ, ಫಲ ತಾಂಬೂಲ ಹಾಗೂ ಸ್ಮರಣಿಕೆ ನೀಡಿ ಸತ್ಕರಿಸಲಾಯಿತು.ಇದೇ ಸಂದರ್ಭದಲ್ಲಿ ರೆಡ್ ಕ್ರಾಸ್ ಹಾಗೂ ಡಿ.ಡಿ.ಆರ್.ಸಿ ಸಿಬ್ಬಂ ಸ್ಮರಣಿಕೆ ನೀಡಿದರು. ಕಾರ್ಯಕ್ರಮದಲ್ಲಿ ಕಚೇರಿಯ ಸಿಬ್ಬಂದಿ ಹರೀಶ್ ಭಟ್, ಸತೀಶ್ ಶೇಟ್, ರೆಡ್ಕ್ರಾಸ್ ಹಾಗೂ ಡಿ.ಡಿ.ಆರ್.ಸಿ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.