ವೈದ್ಯಕೀಯ ನೆರವು ಕೋರಿ ಬಂದ ಅಹವಾಲುಗಳಿಗೆ ನೆರವಿನ ಹಸ್ತ

KannadaprabhaNewsNetwork |  
Published : Dec 19, 2023, 01:45 AM IST
ಗದಗ ಕಾಟನ್ ಸೇಲ್ ಸೊಸೈಟಿಯಲ್ಲಿನ ಸಚಿವರ ಕಾರ್ಯಾಲಯದಲ್ಲಿ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು. | Kannada Prabha

ಸಾರಾಂಶ

ಗದಗ ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿನ ಸಚಿವರ ಕಾರ್ಯಾಲಯದಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲರ ಜನತಾದರ್ಶನಗದಗ: ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿನ ಸಚಿವರ ಕಾರ್ಯಾಲಯದಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.

ಸಾರ್ವಜನಿಕರಿಂದ ಶಾಂತ ಚಿತ್ತದಿಂದಲೇ ಅಹವಾಲುಗಳನ್ನು ಸ್ವೀಕರಿಸಿದ ಅವರು ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಶಿಷ್ಯ ವೇತನ, ವಸತಿ ಶಾಲೆ ಪ್ರವೇಶಾತಿ, ಆಶ್ರಯ ಮನೆ ಮಂಜೂರಾತಿ ಸೇರಿದಂತೆ ವಿವಿಧ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು, ಸಂಬಂಧಿಸಿದ ಅಧಿಕಾರಿಗಳಿಗೆ ಕೂಡಲೇ ಸಮಸ್ಯೆಗಳ ಪರಿಹಾರಕ್ಕಾಗಿ ಸೂಚನೆ ನೀಡಿದರು.

ಸ್ಥಳದಲ್ಲಿಯೇ ಪರಿಹಾರ:ಮಕ್ಕಳಿಗೆ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಕೊಡಿಸಲು ಸಚಿವ ಎಚ್.ಕೆ.ಪಾಟೀಲ ಅವರಲ್ಲಿ ಪೋಷಕರು ಸಹಾಯ ಹಸ್ತ ಚಾಚುತ್ತಿದ್ದಂತೆ, ಸಚಿವರು ಮಕ್ಕಳ ಆರೋಗ್ಯ ಸುಧಾರಣೆಗೆ ಹಾಗೂ ಉತ್ತಮ ಚಿಕಿತ್ಸೆ ದೊರಕಿಸಿಕೊಡುವ ಭರವಸೆ ನೀಡಿದರು. ಈ ಕುರಿತು ವೈದ್ಯರೊಂದಿಗೆ ತಕ್ಷಣ ಮಾತನಾಡಿ ಖಂಡಿತವಾಗಿ ಮಕ್ಕಳ ಚಿಕಿತ್ಸೆಗೆ ಅಗತ್ಯದ ಸಹಕಾರ, ಸಹಾಯ ಮಾಡಲಾಗುವುದು ಎಂದು ಪೋಷಕರಿಗೆ ಧೈರ್ಯ ತುಂಬಿದರು.

ಕೈಗಾರಿಕೆ ನಿವೇಶನ, ತುರ್ತು ಪಡಿತರ ಚೀಟಿ, ಸ್ವಯಂ ಉದ್ಯೋಗ ಹಾಗೂ ವಸತಿಗೆ ಸಂಬಂಧಿಸಿದ ಅಹವಾಲುಗಳಿಗೆ ಸಚಿವರು ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.

ಸೌಲಭ್ಯ ವಿತರಣೆ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ತಾಲೂಕು ಪಂಚಾಯತ ವತಿಯಿಂದ ಗಣಕ ಯಂತ್ರ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಶ್ರವಣ ಸಾಧನಗಳನ್ನು ಫಲಾನುಭವಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ. ವೆಂಕಟೇಶ ನಾಯ್ಕ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಎಂ. ಗಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ನೀಲಗುಂದ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಂಥನಾಳ ಸಂಗನಬಸವ ಶಿವಯೋಗಿಗಳ ಸ್ಮಾರಕ ನಿರ್ಮಾಣಕ್ಕೆ ಆಗ್ರಹ
ಅಪರಾಧ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಕಾರ್ಯ ಜನಮೆಚ್ಚುಗೆ