ಹೊಂಗನೂರು ಕೆರೆ ಬಳಿ ಕಾಡಾನೆಗಳ ಹಿಂಡು ಪ್ರತ್ಯಕ್ಷ

KannadaprabhaNewsNetwork |  
Published : Feb 22, 2024, 01:52 AM IST
ಪೊಟೋ೨೧ಸಿಪಿಟಿ೩: ತಾಲೂಕಿನ ಹೊಂಗನೂರು ಗ್ರಾಮದ ಕೆರೆಯ ಬಳಿ ಕಾಣಿಸಿದ ಆನೆಗಳ ಹಿಂಡು. | Kannada Prabha

ಸಾರಾಂಶ

ಚನ್ನಪಟ್ಟಣ: ತಾಲೂಕಿನ ಹೊಂಗನೂರು ಗ್ರಾಮದ ಕೆರೆಯ ಬಳಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದೆ.

ಚನ್ನಪಟ್ಟಣ: ತಾಲೂಕಿನ ಹೊಂಗನೂರು ಗ್ರಾಮದ ಕೆರೆಯ ಬಳಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದೆ. ತಾಲೂಕಿನ ಹೊಂಗನೂರು ಕೆರೆಯ ಬಳಿ ಬುಧವಾರ ಸುಮಾರು 6 ಆನೆಗಳ ಹಿಂಡು ಕಾಣಿಸಿಕೊಂಡಿದ್ದು, ಆನೆಗಳನ್ನು ನೋಡಲು ಜನ ಕೆರೆ ಸುತ್ತ ಜಮಾಯಿಸಿದ್ದರು. ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದರು. ಸಂಜೆಯ ಹೊತ್ತಿಗೆ ಹೊಂಗನೂರು ಕೆರೆಯ ಬಳಿಯಿಂದ ಆನೆಗಳ ಹಿಂಡು ಬೇರೆಡೆಗೆ ಹೊರಟ್ಟಿದ್ದು, ರಾತ್ರಿ ವೇಳೆ ಕಾರ್ಯಾಚರಣೆ ನಡೆಸಿ ಆನೆಗಳನ್ನು ಅರಣ್ಯ ಪ್ರದೇಶಕ್ಕೆ ಅಟ್ಟುವ ಕಾರ್ಯಾಚರಣೆ ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''