ಕನ್ನಡಪ್ರಭ ವಾರ್ತೆ ಮಂಡ್ಯ
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆಯಿಂದ ನಗರದ ಜೆ.ಸಿ.ವೃತ್ತದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 44ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
ಅರಸು ಅವರು ನಮ್ಮನ್ನು ಅಗಲಿ 44 ವರ್ಷಗಳಾದರೂ ಇಂದಿಗೂ ಪ್ರಸ್ತುತವಾಗಿದ್ದಾರೆಂದರೆ ಅದಕ್ಕೆ ಕಾರಣ ಅವರಲ್ಲಿನ ಆಡಳಿತ ಬದ್ಧತೆ, ದೂರದೃಷ್ಟಿ ಮತ್ತು ಮಾನವೀಯತೆಯ ತೀರ್ಮಾನಗಳು ಎಂದ ಅವರು, ಜನಪ್ರತಿನಿಧಿಗಳು ಎಷ್ಟು ದಿವಸ ಅಧಿಕಾರದಲ್ಲಿರುತ್ತಾರೆ ಎಂಬುದಕ್ಕಿಂತ ಜನರ ಮನಸ್ಸಿನಲ್ಲಿ ಎಷ್ಟು ಕಾಲ ಉಳಿಯುತ್ತಾರೆ ಎಂಬುದು ಮುಖ್ಯವಾದದ್ದು. ಆ ಮೂಲಕ ಅವರ ಆಡಳಿತವನ್ನು ನಿರ್ಧರಿಸಲಾಗುತ್ತದೆ ಎಂದು ವಿಶ್ಲೇಷಿಸಿದರು.ನಾಲ್ವಡಿ ಕೃಷ್ಣರಾಜ ಒಡೆಯರ್ ಮಿಲ್ಲರ್ ಆಯೋಗದ ಮೂಲಕ ಎಲ್ಲ ವರ್ಗದವರಿಗೆ ಶೇ.75ರ ಮೀಸಲಾತಿಯನ್ನು ಜಾರಿಗೊಳಿಸಿದಂತೆ ಡಿ.ದೇವರಾಜ ಅರಸು ಹಾವನೂರು ವರದಿಯನ್ನು ಅನುಷ್ಠಾನಗೊಳಿಸಿ ಹಿಂದುಳಿದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ಕಲ್ಪಿಸಿದರು. ಅಂದಿನಿಂದ ಇಂದಿನವರೆಗೂ ಹಲವು ಆಯೋಗಗಳು ರಚನೆಯಾದರೂ, ಅವುಗಳ ವರದಿಯನ್ನು ಅನುಷ್ಠಾನಗೊಳಿಸುವ ಪ್ರಕ್ರಿಯೆ ನಡೆಸಿಲ್ಲ. ಇದು ಸಾಮಾಜಿಕ ನ್ಯಾಯಕ್ಕೆ ಎಸಗಿದ ಅಪಮಾನವಾಗಿದೆ. ಇತ್ತೀಚೆಗೆ ಸ್ವೀಕಾರಗೊಂಡಿರುವ ಮಧುಸೂಧನ್ ನಾಯಕ್ ಸಮಿತಿಯ ವರದಿಯನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.
ಜೈಕರ್ನಾಟಕ ಪರಿಷತ್ ಅಧ್ಯಕ್ಷ ಎಸ್. ನಾರಾಯಣ್ ಮಾತನಾಡಿ, ಡಿ. ದೇವರಾಜ ಅರಸು ಅವರು ಸಮಾಜದ ಸುಧಾರಣೆಗೆ ಶ್ರಮಿಸಿದಂತವರು. ಹಳೇ ಮೈಸೂರು ರಾಜ್ಯವನ್ನು ಕರ್ನಾಟಕವೆಂದು ನಾಮಕರಣ ಮಾಡುವ ಮೂಲಕ ಅಖಂಡತೆಯನ್ನು ಪ್ರದರ್ಶಿಸಿದರು. ಅವರ ಆಡಳಿತ ಇಂದಿಗೂ ಪ್ರಸ್ತುತವಾಗಿದೆ ಎಂದು ಬಣ್ಣಿಸಿದರು.
ಕನ್ನಡಪ್ರಭ ವಾರ್ತೆ ಮದ್ದೂರುಪಟ್ಟಣದ ಶ್ರೀನರಸಿಂಹ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಹಿಂದ ಸಂರಕ್ಷಣಾ ವೇದಿಕೆಯಿಂದ ಹಿಂದುಳಿದ ವರ್ಗಗಳ ನೇತಾರ ಡಿ.ದೇವರಾಜು ಅರಸು ಅವರ ಪುಣ್ಯ ಸ್ಮರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಅಹಿಂದ ಸಂರಕ್ಷಣಾ ವೇದಿಕೆ ದಾಕ್ಷಾಯಿಣಿ, ಚಿಕ್ಕಮ್ಮ, ಸಂಘಟನಾ ಕಾರ್ಯದರ್ಶಿ ಶಶಿಕುಮಾರ್ ಪಿ, ಸಂಚಾಲಕರಾದ ಆಶಿಷ್ ಪಾಷಾ, ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ ಟಿ.ಶಿವಕುಮಾರ್, ಸಹಕಾರ್ಯದರ್ಶಿ ರಾಚಯ್ಯ, ಚಂದ್ರಶೇಖರ್ ,ಧನಂಜಯ ,ಚಿಕ್ಕನಂಜಚಾರಿ, ಮೋಹನ್, ವೆಂಕಟೇಶ್,ಜೋಗಿ,ಅರ್ ಮಂಗಮ್, ದೇವು ಉಮೇಶ್, ಹಾಗೂ ಇತರರು ಇದ್ದರು.