ಶಿವಮೊಗ್ಗ: ಭಾರತದಲ್ಲಿ ಕುಸಿಯುತ್ತಿರುವ ಭಾಷೆಗಳಲ್ಲಿ ಕನ್ನಡ ಮುಂಚೂಣಿಯಲ್ಲಿದೆ. ಕೇವಲ ಆದೇಶಗಳಿಂದ ಭಾಷೆ ಉಳಿಯುವುದಿಲ್ಲ. ಕನ್ನಡ ಭಾಷೆ ಉಳಿಸಲು ಕಾರ್ಯಸೂಚಿಯನ್ನು ರೂಪಿಸಿ ಅನುಷ್ಠಾನಗೊಳಿಸುವ ನೈತಿಕ ಹೊಣೆಗಾರಿಕೆ ಎಲ್ಲಾ ಕನ್ನಡಿಗರದ್ದಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.
ದಿನೇ ದಿನೇ ಕರ್ನಾಟಕದಲ್ಲಿ ಭಾಷಾಭಿಮಾನ ಕಡಿಮೆ ಆಗುತ್ತಿದೆ. ಈವರೆಗೂ ಸರ್ಕಾರ ಮೂರು ಸಾವಿರಕ್ಕಿಂತ ಹೆಚ್ಚಿನ ಕನ್ನಡಪರ ಆದೇಶಗಳನ್ನು ಹೊರಡಿಸಿದೆ. ಆದರೆ, ಅನುಷ್ಠಾನದ ಸಂದರ್ಭದಲ್ಲಿ ತೊಡಕುಗಳು ಕಂಡುಬರುತ್ತವೆ. ಕನ್ನಡ ಭಾಷೆಯಲ್ಲಿ ಕ್ರಿಯಾಶೀಲತೆ ಇಲ್ಲದಿದ್ದರೆ ಅದನ್ನು ಉಳಿಸುವುದು ಕಷ್ಟಸಾಧ್ಯವಾಗುತ್ತದೆ. ಎಲ್ಲಾ ಭಾಷೆಗಳು ಆಯಾ ಪ್ರದೇಶಗಳಲ್ಲಿ ಅಸ್ತಿತ್ವ ಉಳಿಸಿಕೊಳ್ಳುವುದು ಮುಖ್ಯ ಎಂದರು.
ಸರ್ಕಾರಿ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಇರಲೇಬೇಕು ಎಂದು ಆದೇಶ ಹೊರಡಿಸಿದೆ. ಅದರ ಜೊತೆಗೆ ಊರಿನ ಹೆಸರು ಸೇರಿಸುವುದರಿಂದ ಕನ್ನಡ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.ಕನ್ನಡ ಪ್ರಾಧಿಕಾರದ ಸದಸ್ಯ ರಾಮಚಂದ್ರ ಮಾತನಾಡಿ, ಕನ್ನಡವನ್ನು ಆಡಳಿತ ಭಾಷೆ, ಅನ್ನದ ಭಾಷೆಯನ್ನಾಗಿ ಮಾಡಬೇಕು. ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿದವರೇ ಕನ್ನಡವನ್ನು ಸರಿಯಾಗಿ ಬಳಸುತ್ತಿಲ್ಲ. ಮೊದಲು ಕನ್ನಡತನವನ್ನು ಮೈಗೂಡಿಸಿಕೊಳ್ಳಬೇಕು ಬಳಿಕ ತನ್ನಿಂತಾನೆ ಕನ್ನಡ ಆಡಳಿತ ಭಾಷೆಯಾಗುತ್ತದೆ ಎಂದರು.
ಶಿವಮೊಗ್ಗ ಕನ್ನಡದ ಕೇಂದ್ರ ಸ್ಥಾನ