ಕನ್ನಡಪ್ರಭ ವಾರ್ತೆ ಕೋಲಾರಕಾನೂನು ವಿದ್ಯಾಭ್ಯಾಸವನ್ನು ವಿದ್ಯಾರ್ಥಿಗಳು ಗಮನವಿಟ್ಟು ಓದಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎ.ಮಂಜುನಾಥ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ತಾಲೂಕಿನ ಅರಹಳ್ಳಿ ಸರ್ಕಾರಿ ಕಾನೂನು ಕಾಲೇಜಿನಲ್ಲಿ ವೆಂಕಟಮ್ಮ ವಿ.ಕೊಂಡಪ್ಪ ಚಾರಿಟಬಲ್ ಟ್ರಸ್ಟ್ನಿಂದ ನಿರ್ಮಾಣವಾದ ಸಭಾಂಗಣದ ವೇದಿಕೆ ಉದ್ಘಾಟಿಸಿ ಮಾತನಾಡಿದರು.ಓದಿದ ಶಾಲೆಗೆ ಕೊಡುಗೆ
ಡಿ.ಎಲ್ಎಸ್.ಎ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಸುನೀಲ್ ಎಸ್.ಹೊಸಮುನಿ ಮಾತನಾಡಿ, ತಾವು ವಿದ್ಯಾಭ್ಯಾಸ ಮಾಡಿದ ಶಾಲೆ ಕಾಲೇಜುಗಳಿಗೆ ತಮ್ಮ ಕೈಲಾದ ಸಹಾಯ ಮಾಡಬೇಕು. ಪ್ರಶಾಂತ್ ವಿ.ಕೆ ಅಲುಮಿನಿ ಆಧ್ಯಕ್ಷರಾಗಿ ಕಾಲೇಜಿಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇದೇ ರೀತಿ ತಮ್ಮ ಕಾರ್ಯ ಮುಂದುವರೆಸಲಿ ಎಂದರು.ಈ ಸಂದರ್ಭದಲ್ಲಿ ಡಾ.ಪದ್ಮಲತಾ.ಆರ್, ಡಾ.ಚಿದಾನಂದ ಸ್ವಾಮಿ, ಡಾ.ರಂಗನಾಥಯ್ಯ, ಅಲುಮಿನಿ ಸಂಘದ ಉಪಾಧ್ಯಕ್ಷ ಜಾಕೀರ್ ಹುಸೇನ್, ಖಜಾಂಚಿ ಕೆ.ಎಂ.ಚೌಡೇಗೌಡ, ಕಾನೂನು ಕಾಲೇಜ್ ಪ್ರಾಂಶುಪಾಲ ಡಾ.ಅಂಬೇಡ್ಕರ್ ಎನ್.ಎಸ್, ಕಾಲೇಜ್ ಅದೀಕ್ಷಕ ಬಾಲಕೃಷ್ಣ, ಲಲಿತಾ ಬಾಯಿ, ಪದ್ಮ ಇದ್ದರು.