ಕನ್ನಡಪ್ರಭ ವಾರ್ತೆ ಬೆಳಗಾವಿ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಗ್ರಂಥಾಲಯದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಗ್ರಂಥಗಳು ವಿಶ್ವದ ಜ್ಞಾನ ಉಣಬಡಿಸುತ್ತವೆ. ಆದರೆ, ಇಂದಿನ ಸಾಮಾಜಿಕ ಜಾಲತಾಣಗಳು ಓದುವ ವರ್ಗವನ್ನು ಕಡಿಮೆ ಮಾಡಿದೆ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಗ್ರಂಥಾಲಯಗಳು ಎಲ್ಲರಿಗೂ ತಲುಪುವ ಕಾರ್ಯ ಮಾಡಬೇಕು ಎಂದರು.ಗ್ರಂಥಾಲಯದ ದಿನಾಚರಣೆ ನಿಮಿತ್ತ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗ್ರಂಥಾಲಯದ ಪಾತ್ರ ಎಂಬ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ಮೊದಲ ಹತ್ತು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ರಶ್ಮೀ ಪಾಟೀಲ ನಿರೂಪಿಸಿದರು, ಶಿವಾನಂದ ಬೊಮ್ಮಣ್ಣವರ ಸ್ವಾಗತಿಸಿದರು. ಭಾಗ್ಯಶ್ರೀ ಕುಲಕರ್ಣಿ ವಂದಿಸಿದರು. ಕಲ್ಪನಾ ಮುಚ್ಚಂಡಿ ಪ್ರಾರ್ಥಿಸಿದರು. ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.