ವಕೀಲರಿಂದ 2ಎ ಮೀಸಲಾತಿ ಹೋರಾಟಕ್ಕೆ ತಾರ್ಕಿಕ ಅಂತ್ಯ: ಕೂಡಲಸಂಗಮ ಶ್ರೀ

KannadaprabhaNewsNetwork |  
Published : Sep 09, 2024, 01:39 AM IST
ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ವಕೀಲರ ಸಭೆಯಲ್ಲಿ ಕೂಡಲಸಂಗಮ ಶ್ರೀಗಳು ಮಾತನಾಡಿದರು. | Kannada Prabha

ಸಾರಾಂಶ

ಭಾರತಕ್ಕೆ ಸ್ವಾತಂತ್ರ್ಯ ಕೊಡಿಸುವಲ್ಲಿ ಯಶಸ್ವಿಯಾದ ವಕೀಲರು, ಪಂಚಮಸಾಲಿ 2ಎ ಮೀಸಲಾತಿ ಹೊರಾಟಕ್ಕೆ ಧುಮುಕಿರುವುದರಿಂದ ಮೀಸಲಾತಿ ದೊರೆಯುವುದರಲ್ಲಿ ಸಂದೇಹವೇ ಇಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ಭಾರತಕ್ಕೆ ಸ್ವಾತಂತ್ರ್ಯ ಕೊಡಿಸುವಲ್ಲಿ ಯಶಸ್ವಿಯಾದ ವಕೀಲರು, ಪಂಚಮಸಾಲಿ 2ಎ ಮೀಸಲಾತಿ ಹೊರಾಟಕ್ಕೆ ಧುಮಕಿರುವುದರಿಂದ ಮೀಸಲಾತಿ ದೊರೆಯುವುದರಲ್ಲಿ ಸಂದೇಹವೇ ಇಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಪಟ್ಟಣದ ಗಣಾಚಾರಿ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ವಕೀಲರ ಸಭೆಯಲ್ಲಿ ಮಾತನಾಡಿದ ಅವರು, ಕಣ್ಣಿದ್ದು ಕುರಾಡಾದ, ಕಿವಿಯಿದ್ದು ಕಿವುಡಾದ ಪ್ರಸ್ತುತ ಸರ್ಕಾರದಲ್ಲಿ ಲಿಂಗಾಯತ ಪಂಚಮಸಾಲಿ ಹೋರಾಟಕ್ಕೆ ಮನ್ನಣೆ ಸಿಗದಿರುವುದು ಹಾಗೂ ಸಮಾಜದ ಶಾಸಕರು ವಿಧಾನಸೌಧದಲ್ಲಿ ಧ್ವನಿ ಎತ್ತದಿರುವುದು ಬೇಸರ ತಂದಿದೆ. ಸಮಾಜದ ವಕೀಲರು ಹೋರಾಟಕ್ಕೆ ಇಳಿದಿರುವುದರಿಂದ ಮೀಸಲಾತಿ ಹೋರಾಟ ತಾರ್ಕಿಕ ಅಂತ್ಯ ಕಾಣುವ ಭರವಸೆ ಇದೆ. ನಮ್ಮವರಿಂದಲೇ ಇಂದು ಕಗ್ಗಂಟಾಗಿರುವ ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ವಕೀಲರ ನೇತೃತ್ವದಲ್ಲಿ ಮುನ್ನಡೆಸುವ ಉದ್ದೇಶದಿಂದ ಸೆ.22ರಂದು ಸಾವಿರಾರು ವಕೀಲರು ಹೋರಾಟದ ಶಕ್ತಿ ಕೇಂದ್ರ ಬೆಳಗಾವಿಯಲ್ಲಿ ಸೇರಿ ಮುಂದಿನ ಹೋರಾಟದ ನಿರ್ಣಯ ತಗೆದುಕೊಳ್ಳಲಾಗುವುದು ಎಂದರು.

ಮಾಜಿ ಶಾಸಕ ಡಾ.ವಿ.ಐ.ಪಾಟೀಲ ಮಾತನಾಡಿ, ಪಂಚಮಸಾಲಿಗಳು ಒಂದಾದರೆ ನಮ್ಮ ಬೇಡಿಕೆ ಸರ್ಕಾರ ಈಡೆರಿಸುತ್ತದೆ. ಸಮಾಜ ಒಡೆಯುವ ಕೆಲಸ ಯಾರು ಮಾಡಬಾರದು. ಅಂತವರಿಗೆ ಪಾಠ ಕಲಿಸಬೇಕೆಂದೆರು.

ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಮ್.ಆರ್.ಮೆಳವೆಂಕಿ ಮಾತನಾಡಿ, ಸಮಾಜಕ್ಕೆ ನ್ಯಾಯ ಕೊಡಿಸುವ ವಕೀಲರು ಹೋರಾಟ ಯಶಸ್ವಿಯಾಗಿಸೊಣ ಎಂದರು.

ತಾಲೂಕು ಅಧ್ಯಕ್ಷ ಶ್ರೀಶೈಲ ಬೋಳಣ್ಣವರ, ಬೆಳಗಾವಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಕಿವಡಸಣ್ಣವರ, ಆರ್.ಸಿ.ಪಾಟೀಲ, ಸಿ.ಎಸ್. ಚಿಕ್ಕಣಗೌಡರ, ಎಫ್.ಎಸ್. ಸಿದ್ದನಗೌಡರ, ಎಸ್.ಎಂ. ಅಬ್ಬಾಯಿ, ಅಶೋಕ ಶಿದ್ರಾಮನಿ ಮಾತನಾಡಿದರು.

ವೇದಿಕೆಯ ಮೇಲೆ ಬಿ.ಎಸ್.ಕಿವಡಸಣ್ಣವರ, ಎಮ್.ವಾಯ್.ಸೊಮಣ್ಣವರ, ಜಿ.ಬಿ.ಶೀಗಿಹಳ್ಳಿ, ಮಹಾಂತೇಶ ಮತ್ತಿಕೊಪ್ಪ, ಎಸ್.ಎಸ್.ಮಠದ, ಇದ್ದರು.

ಪದಾಧಿಕಾರಿಗಳ ನೇಮಕ: ಇದೆ ಸಂದರ್ಭದಲ್ಲಿ ಬೈಲಹೊಂಗಲ ನಾಡಿನ ಲಿಂಗಾಯತ ಪಂಚಮಸಾಲಿ ಕಾನೂನು ಘಟಕದ ಅಧ್ಯಕ್ಷರಾಗಿ ಮಂಜುನಾಥ ಸೋಮಣ್ಣವರ, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ್ ವಣ್ಣೂರ, ಉಪಾಧ್ಯಕ್ಷರಾಗಿ ಆನಂದ ನರಸಣ್ಣವರ, ಖಜಾಂಚಿಯಾಗಿ ಅನಿಲ ಕರಬಣ್ಣವರ ಹಾಗೂ ಸಕ್ಕರೆ ಕಾರ್ಖಾನೆಗಳ ಕಾರ್ಮಿಕರ ಸಂಘಟನಾ ಜಿಲ್ಲಾ ಅಧ್ಯಕ್ಷರಾಗಿ ಬಾಳನಗೌಡ ಪಾಟೀಲರನ್ನು ಆಯ್ಕೆ ಮಾಡಿ ಪೂಜ್ಯರು ಸತ್ಕರಿಸಿದರು.

ಮುರಿಗೆಪ್ಪ ಗೂಂಡ್ಲೂರ, ಮಹೇಶ ಹರಕುಣಿ, ರಾಜು ಸೊಗಲ, ಎಸ್.ಎಸ್.ಅಲದಕಟ್ಟಿ ವಿ.ಎಸ್.ಸಂಗೊಳ್ಳಿ, ಮಹಾಂತೇಶ ಚಿಕ್ಕೊಪ್ಪ, ವಿಶ್ವನಾಥ ಪಾಟೀಲ, ಮಹಾಂತೇಶ ಹೊಸಮನಿ, ಬಿ.ಬಿ.ಹುಲಮನಿ, ಪಿ.ಡಿ.ಮರಕಟ್ಟಿ, ರಾಜು ಕುಡಸೋಮಣ್ಣವರ, ಎಸ್.ಬಿ.ರೊಟ್ಟಿ. ಸಿ.ಪಿ.ಈಟಿ, ಎಸ್.ವಾಯ್.ಪಾಟೀಲ, ಆನಂದ ತುರಮರಿ, ರುದ್ರಪ್ಪ ಹೊಸಮನಿ ಸೇರಿದಂತೆ ನೂರಾರು ವಕೀಲರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ