ಹೊಸಕೋಟೆ: ಮನುಷ್ಯ ತನ್ನ ವೃತ್ತಿ ಜೀವನದಲ್ಲಿ ಶಿಸ್ತು, ಸಂಯಮ ಹಾಗೂ ಸಮಯ ಪಾಲನೆ ಅಳವಡಿಸಿಕೊಂಡರೆ ಯಶಸ್ವಿ ಜೀವನ ನಿರ್ವಹಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ತಿಳಿಸಿದರು.
ನಿವೃತ್ತ ಇಒ ಡಾ. ನಾರಾಯಸ್ವಾಮಿ ಮಾತನಾಡಿ, ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಇಂತಹ ಶಿಕ್ಷಕ ಸೇವೆಯನ್ನು 33 ವರ್ಷ ಪೂರೈಸಿದ ಬಿ.ಶ್ರೀನಿವಾಸ್ ಅವರ ಕಾರ್ಯವೈಖರಿ ಜನಮನ್ನಣೆ ಗಳಿಸಿದೆ. ಅವರು ಕೆಲಸ ಮಾಡಿದ ಪ್ರತಿ ಶಾಲೆಯಲ್ಲಿ ಅವರದೇ ಆದ ಸರಳ ವ್ಯಕ್ತಿತ್ವದ ಮೂಲಕ ಮಾದರಿಯಾಗಿದ್ದಾರೆ ಎಂದರು.
ನಿವೃತ್ತ ಶಿಕ್ಷಕ ಬಿ.ಶ್ರೀನಿವಾಸ್ ಮಾತನಾಡಿ, ಶಿಕ್ಷಕರು ತಾವು ಕೆಲಸ ಮಾಡುವ ಸ್ಥಳದಲ್ಲಿ ಎಲ್ಲಾ ಶಿಕ್ಷಕರಲ್ಲಿ ಸಮನ್ವಯತೆ ಸಾಧಿಸಬೇಕು. ಎಸ್ಡಿಎಂಸಿ ಅಧ್ಯಕ್ಷರು ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದರೆ ಶಾಲೆಯ ಅಭಿವೃದ್ಧಿ ಜೊತೆಗೆ ನಮ್ಮದೇ ಆದ ಸೇವೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲು ಸಾಧ್ಯವಾಗುತ್ತದೆ. ನಾನು ಕರ್ತವ್ಯ ನಿರ್ವಹಣೆ ಮಾಡಿದ ನಗರೇನಹಳ್ಳಿ, ಸೂಲಿಬೆಲೆ ಜನತಾ ಕಾಲೋನಿ, ಬೆಟ್ಟಹಳ್ಳಿ ಹಾಗೂ ಗಿಡ್ಡಪ್ಪನಹಳ್ಳಿ ಶಾಲೆಗಳಲ್ಲಿ ಎಲ್ಲರ ವಿಶ್ವಾಸದೊಂದಿಗೆ ಅಭಿವೃದ್ಧಿ ಜೊತೆಗೆ ಯಶಸ್ವಿ ಶಿಕ್ಷಕ ವೃತ್ತಿಯನ್ನು ಮಾಡಲು ಸಾಧ್ಯವಾಯಿತು ಎಂದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸಪ್ಪ, ತಾಲೂಕು ಅದ್ಯಕ್ಷ ಮುನಿಶಾಮಯ್ಯ, ಗೃಹ ನಿರ್ಮಾಣ ಸಂಘದ ಅಧ್ಯಕ್ಷ ನರೇಶ್, ನಿವೃತ್ತ ಪ್ರಾಂಶುಪಾಲ ಚನ್ನಪ್ಪ, ಬಿಆರ್ಸಿ ನಾಗರಾಜ್ ಶಿಕ್ಷಕ ವರ್ಗ ಹಾಜರಿದ್ದರು.
ಫೋಟೋ : 9 ಹೆಚ್ಎಸ್ಕೆ 1ಹೊಸಕೋಟೆಯಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದಿದ ಶಿಕ್ಷಕ ಬಿ.ಶ್ರೀನಿವಾಸ್ಗೆ ಗೌರವ ಸಲ್ಲಿಸಿ ಬೀಳ್ಕೊಡಲಾಯಿತು.