ಕನ್ನಡಪ್ರಭ ವಾರ್ತೆ ಚಾಮರಾಜನಗರ
ಆದಿಕವಿ ಮಹರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯುಕ್ರಮವನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ರಾಮಾಯಣದ ನೈಜ ಪಾತ್ರಗಳು ನಮ್ಮೆಲ್ಲರ ಮೇಲೆ ಪ್ರಭಾವ ಬೀರಿದೆ. ವಾಲ್ಮೀಕಿ ರಾಮಾಯಣ ರಚನೆ ಮೂಲಕ ಎಲ್ಲರೂ ಸುಭಿಕ್ಷತೆಯಿಂದ ಬಾಳಿ ಬದುಕುವ ರಾಮರಾಜ್ಯದ ಕನಸು ಕಂಡಿದ್ದರು. ರಾಮಾಯಣ ಭಾರತಕ್ಕೆ ಮಾತ್ರ ಸೀಮಿತವಾಗಿರದೇ ವಿಶ್ವದ ಅನೇಕ ಭಾಷೆಗಳಿಗೆ ತರ್ಜುಮೆಯಾಗಿ ಜನರಿಗೆ ಉತ್ತಮ ಸಂದೇಶ ನೀಡಿದೆ ಎಂದು ತಿಳಿಸಿದರು.
ಮಹರ್ಷಿ ವಾಲ್ಮೀಕಿ ಪ್ರತಿಮೆ ನಿರ್ಮಾಣಕ್ಕೆ ಯಾವ ವಿರೋಧವು ಇಲ್ಲ. ಸರ್ಕಾರದ ಮಂಜೂರಾತಿ ಬೇಕಾಗಿದೆ. ಮುಖ್ಯಮಂತ್ರಿಯವರು ಹಾಗೂ ಸಂಬಂಧಪಟ್ಟ ಇತರೆ ಸಚಿವರೊಂದಿಗೆ ಈಗಾಗಲೇ ಪ್ರತಿಮೆ ನಿರ್ಮಾಣ ಕುರಿತು ಚರ್ಚಿಸಲಾಗಿದ್ದು, ಮುಖ್ಯಮಂತ್ರಿಯವರು ಒಪ್ಪಿಗೆ ನೀಡಿದ್ದಾರೆ. ಮಹರ್ಷಿ ವಾಲ್ಮೀಕಿಯವರ ಪ್ರತಿಮೆ ಜೊತೆಗೆ ಮಹರ್ಷಿ ಭಗೀರಥ ಹಾಗೂ ಭಕ್ತಶ್ರೇಷ್ಠ ಕನಕದಾಸರ ಪುತ್ಥಳಿ ನಿರ್ಮಾಣಕ್ಕೂ ಸರ್ಕಾರ ಒಪ್ಪಿದೆ. ಈ ಸಂಬಂಧ ಪ್ರತಿಮೆಗಳ ನಿರ್ಮಾಣಕ್ಕೆ ಅಗತ್ಯವಾದ ಅಂದಾಜುಪಟ್ಟಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ಪಡೆಯುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮೂವರು ಮಹನೀಯರ ಪ್ರತಿಮೆಗಳು ನಿರ್ಮಾಣವಾಗಲಿವೆ ಎಂದು ಹೇಳಿದರು.ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಂಗಾರವೇ ಬದುಕಲ್ಲ. ಬದುಕು ಬಂಗಾರದಂತಿರಬೇಕೆಂದು ನುಡಿದ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹರ್ಷಿಗೆ ಎಲ್ಲರೂ ಸಂಸ್ಕಾರಪೂರ್ಣ ಗೌರವ ನೀಡಬೇಕಾಗಿದೆ. ಅನೇಕ ಸಂತರು, ದಾರ್ಶನಿಕರು ಜಗತ್ತನ್ನು ಉತ್ತಮ ದಿಕ್ಕಿನತ್ತ ಕೊಂಡೊಯ್ದಿದ್ದಾರೆ. ಅಂತಹ ಮಹಾಪುರುಷರಲ್ಲಿ ವಾಲ್ಮೀಕಿ ಸಹ ಒಬ್ಬರಾಗಿದ್ದಾರೆ ಎಂದರು.
ಶಾಸಕ ಸಿ.ಪುಟ್ಟರಂಗಶೆಟ್ಟಿ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್ ಅವರ ಅನುಪಸ್ಥಿತಿಯಲ್ಲಿ ಕಳುಹಿಸಲಾಗಿದ್ದ ಸಂದೇಶವನ್ನು ಕಾರ್ಯಕ್ರಮದಲ್ಲಿ ವಾಚನ ಮಾಡಲಾಯಿತು.ಇದೇ ವೇಳೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿ ಪಡೆದ ಸಮುದಾಯದ ವಿದ್ಯಾರ್ಥಿನಿ ಆರ್. ಚೇತನಾ ಅವರನ್ನು ಒಂದು ಲಕ್ಷ ರು.,ನಗದು ಬಹುಮಾನದೊಂದಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಇತರೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.