ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಮಹಮ್ಮದ್ ಝುಬೇರ್

KannadaprabhaNewsNetwork |  
Published : Mar 05, 2025, 12:32 AM IST
ಮಹನೀಯರ ಜಯಂತಿ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಜಿಲ್ಲಾಡಳಿತದಿಂದ ರೇಣುಕಾಚಾರ್ಯ, ಯೋಗಿನಾರೇಯಣ ಯತೀಂದ್ರ ಮತ್ತು ಅಗ್ನಿಬನ್ನಿರಾಯ ಜಯಂತಿ ಸೇರಿದಂತೆ ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು.

ಪೂರ್ವಭಾವಿ ಸಭೆಯಲ್ಲಿ ನಿರ್ಧಾರ: ಅಪರ ಜಿಲ್ಲಾಧಿಕಾರಿಕನ್ನಡಪ್ರಭ ವಾರ್ತೆ ಬಳ್ಳಾರಿ

ಜಿಲ್ಲಾಡಳಿತದಿಂದ ರೇಣುಕಾಚಾರ್ಯ, ಯೋಗಿನಾರೇಯಣ ಯತೀಂದ್ರ ಮತ್ತು ಅಗ್ನಿಬನ್ನಿರಾಯ ಜಯಂತಿ ಸೇರಿದಂತೆ ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹನೀಯರ ಜಯಂತಿ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ಮಾ.12ರಂದು ರೇಣುಕಾಚಾರ್ಯ ಜಯಂತಿಯನ್ನು ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಸಭಾಂಗಣದಲ್ಲಿ, 14ರಂದು ಯೋಗಿನಾರೇಯಣ ಯತೀಂದ್ರ ಜಯಂತಿ ನಗರದ ಬಲಿಜ ಭವನದಲ್ಲಿ ಮತ್ತು 28ರಂದು ಅಗ್ನಿಬನ್ನಿರಾಯ ಜಯಂತಿಯನ್ನು ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಸಭಾಂಗಣದಲ್ಲಿ ಅರ್ಥಪೂರ್ಣ ಆಚರಣೆಗೆ ಕ್ರಮ ವಹಿಸಲಾಗುವುದು ಎಂದರು.

ರೇಣುಕಾಚಾರ್ಯ, ಯೋಗಿನಾರೇಯಣ ಯತೀಂದ್ರ ಮತ್ತು ಅಗ್ನಿಬನ್ನಿರಾಯ ಜಯಂತಿ ಕಾರ್ಯಕ್ರಮಗಳ ಅಂಗವಾಗಿ ಭವ್ಯವಾದ ಮೆರವಣಿಗೆ ನಡೆಯಲಿದ್ದು, ರಸ್ತೆ ಸಂಚಾರ ಮಾರ್ಗಕ್ಕೆ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಠಾಚಾರ ಪಾಲನೆ, ಆಹ್ವಾನ ಪತ್ರಿಕೆ, ವಿಶೇಷ ಉಪನ್ಯಾಸ, ವಚನ ಗಾಯನ ಸೇರಿದಂತೆ ಎಲ್ಲವೂ ಸರಿಯಾಗಿ ನಿರ್ವಹಿಸಬೇಕು. ಅದೇ ರೀತಿ ವೇದಿಕೆ, ಕುಡಿಯುವ ನೀರು, ಸ್ವಚ್ಛತೆ ಮತ್ತು ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯು ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಮಹಾನ್ ವ್ಯಕ್ತಿಗಳ ವಿಚಾರಧಾರೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನುರಿತ ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು ಎಂದರು.

ಜಯಂತಿ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು. ಸಮುದಾಯದಲ್ಲಿ ಉತ್ತಮ ಸಾಧನೆಯ ರೈತರಿಗೆ, ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮತ್ತು ಪಿಎಚ್‌ಡಿ ಪದವಿ ಪಡೆದ ಅಭ್ಯರ್ಥಿಗಳಿದ್ದರೆ ಸನ್ಮಾನಿಸಲಾಗುವುದು ಎಂದರು.

ಜಯಂತಿ ಕಾರ್ಯಕ್ರಮಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು.

ಸಭೆಯಲ್ಲಿ ವಿವಿಧ ಸಮುದಾಯದ ಮುಖಂಡರು, ಜನಪ್ರತಿನಿಧಿಗಳು ಜಯಂತಿಗಳ ಆಚರಣೆಯ ಕುರಿತು ತಮ್ಮ ಸಲಹೆ-ಸೂಚನೆ ನೀಡಿದರು.

ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ