ಕನ್ನಡಪ್ರಭ ವಾರ್ತೆ ವಿಜಯಪುರಗಾಣಿಗ ಸಮಾಜದವರು ಆಡಳಿತ, ರಾಜಕಾರಣ ಯಾವುದೇ ಕ್ಷೇತ್ರದಲ್ಲಿದ್ದರೂ ಸತ್ಯ, ಧರ್ಮಕ್ಕೆ ಪ್ರಾಶಸ್ತ್ಯ ನೀಡಿ ಕರ್ತವ್ಯ ನಿಷ್ಠೆಗೆ ಹೆಸರಾದವರು ಎಂದು ಮಾಜಿ ಶಾಸಕ ಜಿ.ಎಸ್.ನ್ಯಾಮಗೌಡ ಅಭಿಮತ ವ್ಯಕ್ತಪಡಿಸಿದರು.
ಮಲ್ಲಿಕಾರ್ಜುನ ಲೋಣಿಯವರು ರಾಜ್ಯಾದ್ಯಂತ ಗಾಣಿಗ ಸಮಾಜದ ಒಳಪಂಗಡಗಳನ್ನು ಒಗ್ಗೂಡಿಸಿ ಸಮಾಜ ಕಟ್ಟಿ ಎಂಎಲ್ಸಿ ಚುನಾವಣೆಯಲ್ಲಿ ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಸಮಾಜ ಹಾಗೂ ಅವರ ಸಾಮರ್ಥ್ಯ ಗುರುತಿಸಿ ಕಾಂಗ್ರೆಸ್ ಅವರಿಗೆ ಜಿಲ್ಲಾಧ್ಯಕ್ಷ ಜವಾಬ್ದಾರಿ ನೀಡಿದೆ. ಪಕ್ಷಕ್ಕೆ ಅವರಿಂದ ಅನುಕೂಲವಾಗಿ ಅವರು ಅತ್ಯುನ್ನತ್ತಮ ಸ್ಥಾನಮಾನಗಳನ್ನು ಅಲಂಕರಿಸಲಿ ಎಂದು ಶುಭ ಹಾರೈಸಿದರು.
ಮಾಜಿ ಎಂಎಲ್ಸಿ ಬಿ.ಜಿ.ಪಾಟೀಲ ಹಲಸಂಗಿ ಅವರು ಮಾತನಾಡಿ, ಜಯದೇವ ಜಗದ್ಗುರುಗಳು ಜೋಳಿಗೆ ಇಲ್ಲದ ಜಂಗಮನಾಗಿ ದುಡಿಮೆ ಮೂಲಕ ವನಶ್ರೀ ಮಠ ಕಟ್ಟಿ ಸಮಾಜಕ್ಕೆ ಹತ್ತಾರು ಕೋಟಿಯಷ್ಟು ಆಸ್ತಿ ಕೊಟ್ಟು ಹೋಗಿದ್ದಾರೆ. ಶೀಘ್ರದಲ್ಲೇ ಅವರ ಗದ್ದುಗೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದರು.ಶಾಸಕ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಮಾತನಾಡಿ, ಸಾಧಕರಾದ ಸಂತೋಷ ಶಿರಡೋಣ, ಸಹೋದರಿ ಅಂಕಿತಾ ಕೊಣ್ಣೂರ ತಮ್ಮ ಸಾಧನೆಗಳ ಮೂಲಕ ಯುವ ಸಮುದಾಯಕ್ಕೆ ದೊಡ್ಡ ಪ್ರೇರಣೆಯಾಗಿದ್ದಾರೆ. ಅಂಕಿತಾ ಕೊಣ್ಣೂರ ಅವರ ಭವಿಷ್ಯದ ಶಿಕ್ಷಣಕ್ಕಾಗಿ ನಮ್ಮ ತಂದೆಯವರು ಒಂದು ಲಕ್ಷ ಪ್ರೋತ್ಸಾಹಧನ ನೀಡಿದ್ದಾರೆ. ಅಂಕಿತಾ ಅವರ ಕನಸಿನಂತೆ ಐಎಎಸ್ ಅಧಿಕಾರಿಯಾಗಿ ಬಂದು ಇದೇ ವೇದಿಕೆಯಲ್ಲಿ ಮತ್ತೊಮ್ಮೆ ಸನ್ಮಾನಿತರಾಗಲಿ. ಇದಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದು ಪ್ರೋತ್ಸಾಹಿಸಿದರು.
ಉಪನ್ಯಾಸಕ ಮಲ್ಲಿಕಾರ್ಜುನ ಮೇತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಮಖಂಡಿಯ ಸಿದ್ದಮುತ್ಯಾ ಅವರು ಸಾನಿಧ್ಯವಹಿಸಿದ್ದರು.
ಈ ಸಂದರ್ಭದಲ್ಲಿ ರೂಗಿ ಮುಕ್ತಿಮಂದಿರ ಸುಗಲಮ್ಮತಾಯಿ ಸಾನಿಧ್ಯವಿದ್ದರು. ಮಾಜಿ ಶಾಸಕ ರಮೇಶ ಭೂಸನೂರ, ಜಿಪಂ ಮಾಜಿ ಅಧ್ಯಕ್ಷರಾದ ಶಿವಯೋಗಪ್ಪ ನೇದಲಗಿ, ಸೋಮನಾಥ ಬಾಗಲಕೋಟೆ, ಜಿಲ್ಲಾ ಗಾಣಿಗ ಸಂಘದ ಮಾಜಿ ಜಿಲ್ಲಾಧ್ಯಕ್ಷ ಶರಣಬಸಪ್ಪ ಅರಕೇರಿ, ಗೌರವಾಧ್ಯಕ್ಷ ಬಿ.ಎಂ.ಪಾಟೀಲ್ ಕತ್ನಳ್ಳಿ, ಜಿಲ್ಲಾಧ್ಯಕ್ಷ ಬಿ.ಬಿ.ಪಾಸೋಡಿ, ಪ್ರಧಾನ ಕಾರ್ಯದರ್ಶಿ ಡಾ.ಬಾಬು ಸಜ್ಜನ ಸೇರಿದಂತೆ ಜಿಲ್ಲೆ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳು, ಶಿವಯೋಗಿ ಟ್ರಸ್ಟ್ ಸದಸ್ಯರು ಹಾಗೂ ಸಮಾಜದ ಗಣ್ಯರು,ಹಿರಿಯರು ಉಪಸ್ಥಿತರಿದ್ದರು.
ಕೋಟ್
ಜಿ.ಎಸ್.ನ್ಯಾಮಗೌಡ, ಮಾಜಿ ಶಾಸಕ