ಯಲಗಟ್ಟೆಯಲ್ಲಿ ಹಾಡಹಗಲೇ ಹೃದಯವಿದ್ರಾವಕ ಘಟನೆ
ಯಲಗಟ್ಟೆ ಗ್ರಾಮದ ತಿಪ್ಪೇಸ್ವಾಮಿ ಎಂಬುವವರ ಪತ್ನಿ ಲತಾ (೨೫), ತನ್ನ ಮಕ್ಕಳಾದ ಪ್ರಣೀತಾ (೫), ಒಂದೂವರೆ ವರ್ಷ ಹಸುಗೂಸು ಜ್ಞಾನೇಶ್ವರನನ್ನು ಮನೆಯ ಬಚ್ಚಲಿನಲ್ಲಿದ್ದ ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಕೊಂದು, ನಂತರ ತಾನು ನೇಣುಹಾಕಿಕೊಂಡು ಮೃತಪಟ್ಟಿದ್ದಾಳೆ. ಈ ಸಂದರ್ಭದಲ್ಲಿ ಗಂಡ ತಿಪ್ಪೇಸ್ವಾಮಿ ತೋಟಕ್ಕೆ ಹೋಗಿದ್ದು, ವಿಷಯ ತಿಳಿದು ಸ್ಥಳಕ್ಕೆ ಬಂದು ನೋಡಿದಾಗ ವಿಷಯ ಬೆಳಕಿಗೆ ಬಂದಿದೆ. ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ತಂದು ದಾಖಲಿಸಿದಾಗ ಪರೀಕ್ಷೆ ನಡೆಸಿದ ವೈದ್ಯರು ಮಕ್ಕಳು ಹಾಗೂ ಪತ್ನಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಲತಾ ಹಾಗೂ ಮಕ್ಕಳ ಸಾವಿನ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.