ರಾಜ್ಯದ ಅಭಿವೃದ್ಧಿಗೆ ಡಿಕೆಶಿಯಿಂದ ಹೊಸ ಅಧ್ಯಾಯ

KannadaprabhaNewsNetwork |  
Published : Jun 05, 2026, 01:30 AM IST
ಫೋಟೋ: 4 ಹೆಚ್‌ಎಸ್‌ಕೆ 2ನೂತನ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಬೆಂಡಿಗಾನಹಳ್ಳಿ ಕುಟುಂಬದ ಶಾಸಕ ಶರತ್ ಬಚ್ಚೇಗೌಡ, ಬಿ.ವಿ ಸತೀಶ್‌ಗೌಡ, ಬೈರೇಗೌಡ, ಬಿ.ವಿ ರಾಜಶೇಖರ್‌ಗೌಡ ಅಭಿನಂದಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ರಾಜ್ಯ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದು, ಕರ್ನಾಟಕ ರಾಜ್ಯ ಅಭಿವೃದ್ಧಿಗೆ ಮತ್ತೊಂದು ಅಧ್ಯಾಯ ಶುರುವಾಗಲಿದೆ. ಅವರ ನಾಯಕತ್ವದಲ್ಲಿ ರಾಜ್ಯ ಮತ್ತಷ್ಟು ಪ್ರಗತಿ ಹೊಂದಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಕನ್ನಡಪ್ರಭಕ್ಕೆ ಪ್ರತಿಕ್ರಿಯೆ ನೀಡಿದರು

ಹೊಸಕೋಟೆ: ರಾಜ್ಯ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದು, ಕರ್ನಾಟಕ ರಾಜ್ಯ ಅಭಿವೃದ್ಧಿಗೆ ಮತ್ತೊಂದು ಅಧ್ಯಾಯ ಶುರುವಾಗಲಿದೆ. ಅವರ ನಾಯಕತ್ವದಲ್ಲಿ ರಾಜ್ಯ ಮತ್ತಷ್ಟು ಪ್ರಗತಿ ಹೊಂದಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಕನ್ನಡಪ್ರಭಕ್ಕೆ ಪ್ರತಿಕ್ರಿಯೆ ನೀಡಿದರು.

ಮುಖ್ಯ ಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದು ಜನಸೇವೆಯ ಮೇಲಿನ ಬದ್ದತೆ, ಸಂಘಟನೆಯ ಮೇಲಿನ ನಿಷ್ಠೆ ಹಾಗೂ ಅಭಿವೃದ್ಧಿ ದೃಷ್ಟಿಕೋನದೊಂದಿಗೆ ಡಿ.ಕೆ.ಶಿವಕುಮಾರ್ ನೇತೃತ್ವದ ಹೊಸ ಸರ್ಕಾರ ರಚನೆಯಾಗಿದೆ. ಇವರ ಆಡಳಿತ ಅವಧಿಯಲ್ಲಿ ಜನರ ಆಶೋತ್ತರಗಳು ಈಡೇರಲಿವೆ. ಇವರ ನಾಯಕತ್ವದಲ್ಲಿ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಶಾಸಕ ಶರತ್ ಬಚ್ಚೇಗೌಡ, ಬಮೂಲ್ ನಿರ್ದೇಶಕ ಬಿ.ವಿ.ಸತೀಶ್‌ಗೌಡ, ಉದ್ಯಮಿ ಬಿ.ವಿ.ಬೈರೇಗೌಡ, ಒಕ್ಕಲಿಗರ ಸಂಘದ ಕರ‍್ಯಾಧ್ಯಕ್ಷ ಬಿ.ವಿ.ರಾಜಶೇಖರ್ ಗೌಡ, ಹಿರಿಯ ಮುಖಂಡ ಬಿ.ಎನ್ ಗೋಪಾಲಗೌಡ, ಯುವ ಮುಖಂಡ ಬಿ.ಜಿ.ನಾರಾಯಣಗೌಡ ಅವರು ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಅಭಿನಂದಿಸಿದ್ದಾರೆ.

ಫೋಟೋ: 4 ಹೆಚ್‌ಎಸ್‌ಕೆ 2

ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಬಮೂಲ್‌ ನಿರ್ದೇಶಕ ಬಿ.ವಿ.ಸತೀಶ್‌ಗೌಡ, ಬೈರೇಗೌಡ, ಬಿ.ವಿ.ರಾಜಶೇಖರ್‌ಗೌಡ ಇತರರು ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಐಟಿ ರಚನೆ ಆದಾಗ ಡಾ। ಹೆಗ್ಗಡೆ ಜೈಲಿಗೆ ಹೋಗ್ತಾರೆ ಅಂತ ಸಂಭ್ರಮಿಸಿತ್ತು ಬುರುಡೆ ಗ್ಯಾಂಗ್‌: ಚಿನ್ನಯ್ಯ
ಗೃಹಲಕ್ಷ್ಮಿ ಸ್ಕೀಂನಿಂದ 3.89 ಲಕ್ಷ ಮಂದಿ ಫಲಾನುಭವಿಗಳು ಔಟ್‌