ಶೋಷಿತ ಬದುಕಿನಲ್ಲಿ ಹೊಸ ಆಶಾಕಿರಣ: ಸೂರನಹಳ್ಳಿ ಶ್ರೀನಿವಾಸ್

KannadaprabhaNewsNetwork |  
Published : Aug 02, 2024, 12:54 AM IST
ಪೋಟೋ೧ಸಿಎಲ್‌ಕೆ೩ ಚಳ್ಳಕೆರೆ ನಗರದ ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಮುದಾಯಕ್ಕೆ ಒಳಮೀಸಲಾತಿಗೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮಾಡಿದರು. | Kannada Prabha

ಸಾರಾಂಶ

A new ray of hope in an oppressed life: Suranahalli Srinivas

-ದಲಿತ ಸಮುದಾಯದಿಂದ ಅಂಬೇಡ್ಕರ್‌ ವೃತ್ತದಲ್ಲಿ ಸಂಭ್ರಮಾಚರಣೆ

----

ಕನ್ನಡಪ್ರಭವಾರ್ತೆ ಚಳ್ಳಕೆರೆ

ರಾಜ್ಯ ಸರ್ಕಾರಗಳು ಎಸ್‌ಸಿಎಸ್‌ಟಿ ಜನರಿಗೆ ಒಳಮೀಸಲಾತಿ ನೀಡಬಹುದು ಎಂದು ಸುಪ್ರೀಂಕೋರ್ಟ್‌ ನೀಡಿದ ತೀರ್ಪು ದಲಿತ ಸಮುದಾಯದ ಬದುಕಿಗೆ ಹೊಸ ಆತ್ಮವಿಶ್ವಾಸ ಉಂಟು ಮಾಡಿದೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ತಿಳಿಸಿದ್ಧಾರೆ.

ಸವೋಚ್ಚ ನ್ಯಾಯಾಲಯ ಈ ಬಗ್ಗೆ ತೀರ್ಪು ನೀಡಿದ ಹಿನ್ನೆಲೆ ದಲಿತ ಸಮುದಾಯದ ಎಲ್ಲಾ ವರ್ಗಗಳು ಹೃತ್ಪೂರ್ವಕವಾಗಿ ಸ್ವಾಗತಿಸುತ್ತವೆ ಎಂದು ತಿಳಿಸಿದ ಅವರು, ಮುಂಬರುವ ದಿನಗಳಲ್ಲಿ ಸರ್ಕಾರಿ ನೌಕರಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ದಲಿತ ಸಮುದಾಯದ ಒಳಮೀಸಲಾತಿ ನೀಡಿದ ಫಲವಾಗಿ ಈ ಸಮುದಾಯದ ಶೋಷಣೆ ಮುಕ್ತ ಸಮುದಾಯದವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಸಾಮಾಜಿಕ ಹೋರಾಟಗಾರ ಎಚ್.ಎಸ್.ಸೈಯದ್, ಹಲವು ವರ್ಷಗಳ ಹೋರಾಟದಿಂದ ನಾಡಿನ ಎಲ್ಲಾ ದಲಿತ ಸಮುದಾಯದ ಬಂಧುಗಳು ಮೀಸಲಾತಿ ಸೌಲಭ್ಯವಿಲ್ಲದೆ ನೋವು ಅನುಭವಿಸುತ್ತಿದ್ದರು. ಪ್ರಸ್ತುತ ಜಾರಿಯಲ್ಲಿದ್ದ ಮೀಸಲಾತಿ ಪ್ರಮಾಣ ದಲಿತರ ಬೆಳವಣಿಗೆಗೆ ನಿರೀಕ್ಷಿತ ಮಟ್ಟದಲ್ಲಿ ಸಹಾಯವಾಗಿರಲಿಲ್ಲ. ಆದರೆ, ಇಂದು ಸುಪ್ರೀಂ ಕೋರ್ಟ್ ಒಳಮೀಸಲಾತಿ ಕಲ್ಪಿಸುವ ಮೂಲಕ ಚರಿತ್ರಾಹ ತೀರ್ಪು ನೀಡಿದೆ ಎಂದರು.

ಜಿಲ್ಲಾ ಮಾದಿಗ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಶಿವಮೂರ್ತಿ ಮಾತನಾಡಿ, ನಾಡಿನ ಮಾದಿಗ ಸಮುದಾಯಕ್ಕೆ ಈ ತೀರ್ಫು ವರವಾಗಿ ಪರಿಣಮಿಸಲಿದೆ. ಕಾರಣ, ನಿರಂತರ ಹೋರಾಟದಿಂದ ಸಮುದಾಯ ಬಳಲಿ ಬೆಂಡಾಗಿದ್ದು, ಶೋಷಿತರ ಪಾಲಿಗೆ ಮೀಸಲಾತಿ ಕನಸಾಗಿತ್ತು. ಆದರೆ, ಅಂತಿಮವಾಗಿ ಪ್ರಾಮಾಣಿಕ ಹೋರಾಟಕ್ಕೆ ಸುಪ್ರೀಂಕೋರ್ಟ್ ಜಯವನ್ನು ನೀಡಿದೆ. ದಲಿತರ ಬಾಳಿನಲ್ಲಿ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ. ಒಳಮೀಸಲಾತಿ ಸಮುದಾಯಕ್ಕೆ ವರವಾಗಿ ಪರಿಣಮಿಸಲಿದೆ ಎಂದರು.

ದಲಿತ ಮುಖಂಡರಾದ ಆರ್.ಡಿ.ಮಂಜುನಾಥ, ಎಚ್.ಲಂಕಪ್ಪ, ಮಾರುತಿ, ಕಾಂತರಾಜ್, ಬಂಡೆರಂಗಪ್ಪ, ಭೀಮಣ್ಣ, ಚನ್ನಗಾನಹಳ್ಳಿಮಲ್ಲೇಶ್, ನಾಗರಾಜು ಮುಂತಾದವರು ಉಪಸ್ಥಿತರಿದ್ದರು.

-------

ಪೋಟೋ: ೧ಸಿಎಲ್‌ಕೆ೩ ಚಳ್ಳಕೆರೆ ನಗರದ ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಮುದಾಯಕ್ಕೆ ಒಳಮೀಸಲಾತಿಗೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ ಹಿನ್ನೆಲೆ ಸಂಭ್ರಮಾಚರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ