ತಡವಾದ ಮುಂಗಾರಿಗೆ ಹೊಸ ರಾಗಿ ತಳಿ

KannadaprabhaNewsNetwork |  
Published : Dec 08, 2024, 01:17 AM IST
ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದಿಂದ ತಿಂಡ್ಲು ಗ್ರಾಮದಲ್ಲಿ ರಾಗಿ ಹೊಸ ತಳಿ  ಪರಿಚಯ, ಪ್ರಾತ್ಯಕ್ಷಿಕೆ ಮತ್ತು ಕ್ಷೇತ್ರೋತ್ಸವ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ಕುಂದಾಣದ ರೈತ ಸಂಪರ್ಕ ಕೇಂದ್ರದ ಸಹಯೋಗದಲ್ಲಿ ತಿಂಡ್ಲು ಗ್ರಾಮದಲ್ಲಿ “ತಡವಾದ ಮುಂಗಾರಿಗೆ ರಾಗಿ ಹೊಸ ತಳಿ ಎಂ.ಎಲ್-322 ರ ಪರಿಚಯ, ಪ್ರಾತ್ಯಕ್ಷಿಕೆ ಮತ್ತು ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ಕುಂದಾಣದ ರೈತ ಸಂಪರ್ಕ ಕೇಂದ್ರದ ಸಹಯೋಗದಲ್ಲಿ ತಿಂಡ್ಲು ಗ್ರಾಮದಲ್ಲಿ “ತಡವಾದ ಮುಂಗಾರಿಗೆ ರಾಗಿ ಹೊಸ ತಳಿ ಎಂ.ಎಲ್-322 ರ ಪರಿಚಯ, ಪ್ರಾತ್ಯಕ್ಷಿಕೆ ಮತ್ತು ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರಾಧ್ಯಾಪಕ ಡಾ.ವೆಂಕಟೇಗೌಡ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಉಂಟಾಗುತ್ತಿರುವ ಹವಾಮಾನ ವೈಪರೀತ್ಯಕ್ಕೆ ತಕ್ಕಂತೆ ರಾಗಿಯಲ್ಲಿ ಮಧ್ಯಮಾವಧಿ ತಳಿಯಾದ ಎಂ.ಎಲ್-322ಯನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಬಿಡುಗಡೆಗೊಳಿಸಿದ್ದು, ಈ ತಳಿಯು ಬೆಂಕಿ ರೋಗಕ್ಕೆ

ನಿರೋಧಕತೆಯನ್ನು ಹೊಂದಿದೆ. ಆಗಸ್ಟ್ ತಿಂಗಳಿನಲ್ಲಿ ಬಿತ್ತನೆ ಮಾಡಲು ಸೂಕ್ತವಾಗಿದ್ದು, ಬಿತ್ತನೆ ಮಾಡುವ ಮೊದಲು ರೈತರು ಮೇ – ಜೂನ್ ತಿಂಗಳಿನಲ್ಲಿ ಹಸಿರೆಲೆ ಗೊಬ್ಬರದ ಬೆಳೆಯಾದ ಅಪ್ಸೆಣಬನ್ನು ಬಿತ್ತನೆ ಮಾಡಿ, ಹೂವಾಡುವ ಹಂತದಲ್ಲಿ ಭೂಮಿಗೆ ಸೇರಿಸುವುದರಿಂದ ಭೂಮಿಯ ಫಲವತ್ತತೆ ಹೆಚ್ಚಾಗುತ್ತದೆ. ರಾಸಾಯನಿಕ ಗೊಬ್ಬರಗಳ ಮೇಲಿನ ಅವಲಂಬನೆ ಕಡಿಮೆ ಮಾಡಬಹುದಾಗಿದೆ ಎಂದರು.

ಎಂ.ಎಲ್-322 ತಳಿಯನ್ನು ಬೆಳೆದ ರೈತರು ತಳಿಯ ಬಗ್ಗೆ ವಿವರಿಸಿ, ಈ ತಳಿಯು 100-110 ದಿನಗಳಲ್ಲಿ ಕಟಾವಿಗೆ ಬರುವುದರಿಂದ ಖುಷ್ಕಿ ಬೇಸಾಯದಲ್ಲಿ ಅಲ್ಪಾವಧಿ ಬೆಳೆಗಳಾದ ಅಲಸಂದೆ ಅಥವಾ ಅಪ್ಸೆಣಬನ್ನು ಮೇ ತಿಂಗಳಲ್ಲಿ ಬೆಳೆದು ಆಗಸ್ಟ್ ತಿಂಗಳಿನಲ್ಲಿ ಈ ತಳಿಯನ್ನು ಬಿತ್ತನೆ

ಮಾಡುವುದರಿಂದ ರೈತರ ಆದಾಯ ಹೆಚ್ಚುವುದಲ್ಲದೆ, ಭೂಮಿಯ ಫಲವತ್ತತೆಯೂ ಸಹ ವೃದ್ಧಿಗೊಳ್ಳುವುದೆಂದು ಸಂತಸ ವ್ಯಕ್ತ ಪಡಿಸಿದರು.

ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ವೈ. ಸತ್ಯನಾರಾಯಣ, ಕೃಷಿ ಇಲಾಖೆಯಲ್ಲಿ ದೊರಕುವ ಯೋಜನೆ ಮತ್ತು ಸೌಲಭ್ಯಗಳ ಬಗ್ಗೆ ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಬಿಡುಗಡೆಗೊಂಡಿರುವ ನ್ಯಾನೋ ಯೂರಿಯಾ ಬಗ್ಗೆ ಮಾಹಿತಿ ಹಂಚಿಕೊಂಡು, ರೈತರಿಗೆ ಪ್ರಾತ್ಯಕ್ಷಿಕೆಗಾಗಿ ನೀಡಿದರು.

ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಚೇತನ್ ಮತ್ತಿತರರು ಉಪಸ್ಥಿತರಿದ್ದರು.

ಫೋಟೋ-

6ಕೆಡಿಬಿಪಿ5- ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದಿಂದ ತಿಂಡ್ಲು ಗ್ರಾಮದಲ್ಲಿ ರಾಗಿ ಹೊಸ ತಳಿ ಪರಿಚಯ, ಪ್ರಾತ್ಯಕ್ಷಿಕೆ ಮತ್ತು ಕ್ಷೇತ್ರೋತ್ಸವ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ