ಬಿ- ಖಾತಾ ಅಭಿಯಾನಕ್ಕೆ ಚಾಲನೆ

KannadaprabhaNewsNetwork |  
Published : Mar 02, 2025, 01:15 AM IST
8 | Kannada Prabha

ಸಾರಾಂಶ

ಅನೇಕ ವರ್ಷಗಳ ಕಾಲ ಯಾವುದೇ ದಾಖಲೆಗಳಿಲ್ಲದೆ ನಿವೇಶನಗಳಲ್ಲಿ ವಾಸಿಸುತ್ತಿದ್ದ ಜನರ ಅನುಕೂಲಕ್ಕಾಗಿ ಬಿ-ಖಾತಾ ಅಭಿಯಾನ ಪ್ರಾರಂಭಿಸಿದೆ

ಕನ್ನಡಪ್ರಭ ವಾರ್ತೆ ಮೈಸೂರುಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು, ಜಿಲ್ಲೆಯ ನಗರ ಪಾಲಿಕೆ ಹಾಗೂ ನಗರ ಸಭೆ, ಪುರಸಭೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ದಾಖಲೆಗಳಿಲ್ಲದ ನಿವೇಶನಗಳಲ್ಲಿ ವಾಸಿಸುತ್ತಿದ್ದ ಅರ್ಹ ಫಲಾನುಭವಿಗಳಿಗೆ ಬಿ-ಖಾತಾ ಪತ್ರವನ್ನು ಸಾಂಕೇತಿಕವಾಗಿ ವಿತರಿಸುವ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿದರು.ನಗರ ಪಾಲಿಕೆ ಸಭಾಂಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರವು ಈ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದು, ಅನೇಕ ವರ್ಷಗಳ ಕಾಲ ಯಾವುದೇ ದಾಖಲೆಗಳಿಲ್ಲದೆ ನಿವೇಶನಗಳಲ್ಲಿ ವಾಸಿಸುತ್ತಿದ್ದ ಜನರ ಅನುಕೂಲಕ್ಕಾಗಿ ಬಿ-ಖಾತಾ ಅಭಿಯಾನ ಪ್ರಾರಂಭಿಸಿದೆ ಎಂದು ಅವರು ತಿಳಿಸಿದರು.ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಂಡು ಯಾವುದೇ ಲೋಪವಾಗದಂತೆ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಸೂಚಿಸಿದರು. ಇದರಿಂದ ಸ್ಥಳೀಯ ಸಂಸ್ಥೆಗಳಿಗೂ ಆದಾಯ ದೊರಕಲಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಅವರು ಹೇಳಿದರು.ಈ ವೇಳೆ ಶಾಸಕರಾದ ಟಿ.ಎಸ್‌. ಶ್ರೀವತ್ಸ, ತನ್ವೀರ್ ಸೇಠ್, ಕೆ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ