ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಶ್ರೀರೂಪಾ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು ಅವರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ (ಮುನ್ನ) ಅವರು ಇದ್ದರು.
ಸಿಎಸ್ಆರ್ ನೆರವಿನಡಿ ವಿಶೇಷಚೇತನರಿಗೆ ತ್ರಿಚಕ್ರ ವಾಹನ ನೀಡುವಂತೆ ಕಾರ್ಮಿಕ ಇಲಾಖೆಯಿಂದ ಉದ್ಯಮಗಳಿಗೆ ಪತ್ರ ಬರೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಎಲೆಕ್ಟ್ರಾನಿಕ್ ಮ್ಯಾನುಫ್ಯಾಕ್ಚರಿಂಗ್ ಹಾಗೂ ಕಲರ್ ಟೋನ್ ಟೆಕ್ಸ್ಟೈಲ್ ಕಂಪನಿ ವಿಶೇಷ ಚೇತನರಿಗೆ 2 ತ್ರಿಚಕ್ರ ವಾಹನಗಳನ್ನು ನೀಡಿವೆ.ಈ ವಾಹನಗಳನ್ನು ಶುಕ್ರವಾರ ಇಬ್ಬರು ವಿಶೇಷ ಚೇತನರಿಗೆ ಗಣ್ಯರು ವಿತರಿಸಿದ್ದಾರೆ.
---
27ಸಿಎಚ್ಎನ್13ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ