ಕನ್ನಡಪ್ರಭ ವಾರ್ತೆ ಬೆಂಗಳೂರು
ಪೀಣ್ಯ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಉತ್ತರ ವಿಭಾಗ (ಸಂಚಾರ)ದ ಪೊಲೀಸರು ಶನಿವಾರ ಆಯೋಜಿಸಿದ್ದ ‘ಸಂಚಾರ ಸಂಪರ್ಕ ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಂಟಿ ಆಯುಕ್ತರು ಈ ವಿಷಯ ತಿಳಿಸಿದರು.
ಸಂಚಾರ ನಿಯಮಗಳು ಹಾಗೂ ರಸ್ತೆ ಸುರಕ್ಷತೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕಳೆದ 3 ತಿಂಗಳ ಹಿಂದೆಯೇ 1ರಿಂದ 10ನೇ ತರಗತಿ ವರೆಗಿನ ಶಾಲೆಯ ತರಗತಿಗೆ ಮಾದರಿ ಪಠ್ಯವಾಗಿ ಸಂಚಾರ ನಿಯಮಗಳನ್ನು ಬೋಧಿಸುವಂತೆ ಸರ್ಕಾರಕ್ಕೆ ಕೋರಲಾಗಿದೆ. ಈ ಪ್ರಸ್ತಾಪಕ್ಕೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್ಇಆರ್ಟಿ) ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಹೇಳಿದರು.ಇನ್ನು ಪ್ರತಿ ವಾರ ಶಾಲಾ-ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಿ ಸಂಚಾರ ಕಾನೂನುಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಟ್ರಾಫಿಕ್ ಪಾರ್ಕ್ನಲ್ಲಿ ದಿನಕ್ಕೆ ಒಂದು ಶಾಲೆಯ 60 ಮಕ್ಕಳನ್ನು ಕರೆತಂದು 3 ಗಂಟೆಗೂ ಹೆಚ್ಚು ಕಾಲ ಸಂಚಾರ ನಿಯಮಗಳ ಕುರಿತು ತಿಳುವಳಿಕೆ ಹೇಳಲಾಗುತ್ತಿದೆ ಎಂದು ಜಂಟಿ ಆಯುಕ್ತರು ವಿವರಿಸಿದರು.
ಇದೇ ವೇಳೆ ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಿ ಮಾತನಾಡಿದ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ರಸ್ತೆಗಳಲ್ಲಿ ವ್ಹೀಲಿಂಗ್ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ನಗರ ವ್ಯಾಪ್ತಿ ರಸ್ತೆಗಳಲ್ಲಿ ಬಿಬಿಎಂಪಿ ಪಾದಚಾರಿ ಒತ್ತುವರಿ ತೆರವು ಕಾರ್ಯಾಚರಣೆಗೆ ಪೊಲೀಸರು ಸಹಕಾರ ನೀಡುತ್ತಿದ್ದಾರೆ. ಹಾಗಾಗಿ ಹಂತ ಹಂತವಾಗಿ ಪಾದಚಾರಿಗಳ ಸುಗಮ ಓಡಾಟಕ್ಕೆ ಅವಕಾಶವಾಗಲಿದೆ ಎಂದು ಆರುಹಿದರು.
ಕಾರ್ಯಕ್ರಮದಲ್ಲಿ ಉತ್ತರ ವಿಭಾಗದ (ಸಂಚಾರ) ಡಿಸಿಪಿ ಡಿ.ಆರ್.ಸಿರಿಗೌರಿ, ಎಸಿಪಿಗಳಾದ ಪೃಥ್ವಿ ಹಾಗೂ ರಮೇಶ್, ಅಧಿಕಾರಿಗಳು ಪಾಲ್ಗೊಂಡಿದ್ದರು. ಸರಕು ಲಾರಿ ಸಂಚಾರಕ್ಕೆ ಅವಕಾಶ ಕೊಡಿ: ಮನವಿ
ಪೀಣ್ಯ ಕೈಗಾರಿಕಾ ಪ್ರದೇಶ ವ್ಯಾಪ್ತಿ ವಾಹನ ದಟ್ಟಣೆ ಸಮಸ್ಯೆಯಾಗಿದೆ. ಕೈಗಾರಿಕೆಗಳು ಪ್ರಾರಂಭವಾಗುವ ಬೆಳಗ್ಗೆ 8 ರಿಂದ 9 ಹಾಗೂ ಮುಗಿಯುವ ಸಂಜೆ 5 ರಿಂದ 7.30 ಅವಧಿಯಲ್ಲಿ ವಾಹನ ದಟ್ಟಣೆ ಇರಲಿದೆ. ಹೀಗಾಗಿ ಸಂಚಾರಕ್ಕೆ ಅಡ್ಡಿಯಾಗುವ ಸ್ಥಳಗಳನ್ನು ಗುರುತಿಸಿ ಸಂಚಾರ ನಿರ್ವಹಣೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಬೇಕು ಎಂದು ಕೋರಿದರು.