ಜನಪ್ರತಿನಿಧಿಗೆ ಸಾಮಾನ್ಯ ಜ್ಞಾನದ ಅಗತ್ಯ ಇದೆ: ಶಾಸಕ ಎಂ.ಚಂದ್ರಪ್ಪ

KannadaprabhaNewsNetwork |  
Published : Mar 27, 2025, 01:01 AM IST
ಫೋಟೋ ವಿವರಣೆ : ನೂತನ ಚೆಕ್‍ಡ್ಯಾಂ ಹಾಗೂ ಮೂರು ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಎಂ.ಚಂದ್ರಪ್ಪ | Kannada Prabha

ಸಾರಾಂಶ

ನೂತನ ಚೆಕ್‍ಡ್ಯಾಂ ಹಾಗೂ ಮೂರು ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಎಂ.ಚಂದ್ರಪ್ಪ

ನೂತನ ಕ್‍ಡ್ಯಾಂ ನಿರ್ಮಾಣ, ಮೂರು ಶಾಲಾ ಕೊಠಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಕನ್ನಡಪ್ರಭ ವಾರ್ತೆ ಹೊಳಲ್ಕೆರೆ

ಜನಪ್ರತಿ ನಿಧಿಯಾದವನಿಗೆ ಸಾಮಾನ್ಯ ಜ್ಞಾನವಿದ್ದರೆ ಅಭಿವೃದ್ಧಿ ಕೆಲಸಗಳಾಗುತ್ತವೆ. ಮತ ಹಾಕಿದವರು ಮನಸ್ಸಿಗೆ ನೋವುಂಟು ಮಾಡಿಕೊಂಡಾರೆಂಬ ಅರಿವಿಟ್ಟುಕೊಂಡು ಬದ್ಧತೆಯಿಂದ ಕೆಲಸ ಮಾಡುವ ರಾಜಕಾರಣಿ ನಾನು ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

ತಾಲೂಕಿನ ಚಿಕ್ಕಂದವಾಡಿ ಗ್ರಾಮದ ಹತ್ತಿರ ಹರಿಯುವ ಹಳ್ಳಕ್ಕೆ 80 ಲಕ್ಷ ರು. ವೆಚ್ಚದಲ್ಲಿ ನೂತನ ಕ್‍ಡ್ಯಾಂ ನಿರ್ಮಾಣ ಹಾಗೂ ಮೂರು ಶಾಲಾ ಕೊಠಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಬುಧವಾರ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.

ಅಪ್ಪರಸನಹಳ್ಳಿ ಬಳಿ ಹಳ್ಳಕ್ಕೆ ಎತ್ತರವಾದ ಡ್ಯಾಂ ಕಟ್ಟಿ ಕೆರೆಗೆ ನೀರು ಹರಿಯುವಂತೆ ಮಾಡಿದ್ದೇನೆ. ಯಾರಿಂದಲೂ ಈ ಕೆಲಸ ಆಗುತ್ತಿರಲಿಲ್ಲ. 16 ಕೋಟಿ ರು. ವೆಚ್ಚದಲ್ಲಿ ವಿದ್ಯುತ್ ಪವರ್‌ ಸ್ಟೇಷನ್ ಕಟ್ಟಿಸಿದ್ದೇನೆ. ಪ್ರತಿ ನಿತ್ಯವೂ ವಿದ್ಯುತ್ ಅಭಾವವಿದೆ ಎಂದು ರೈತರು ನನಗೆ ಫೋನ್ ಮಾಡಿ ಕಷ್ಟ ಹೇಳಿಕೊಳ್ಳುತ್ತಿದ್ದರು. ಚಿಕ್ಕಜಾಜೂರಿನ ಕೋಟೆಹಾಳ್ ಸಮೀಪ 500 ಕೋಟಿ ರು. ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗುತ್ತಿದ್ದು, ಜೋಗ್‍ಫಾಲ್ಸ್‌ನಿಂದ ನೇರವಾಗಿ ವಿದ್ಯುತ್ ಪೂರೈಕೆಯಾಗಲಿದೆ ಎಂದು ತಿಳಿಸಿದರು.

ಚಿಕ್ಕಜಾಜೂರಿನಿಂದ ಚಿತ್ರಹಳ್ಳಿವರೆಗೆ ರಸ್ತೆಗೆ 13 ಕೋಟಿ ರು. ನೀಡಿದ್ದೇನೆ. ಕೇಶವಾಪುರಕ್ಕೆ ಹೋಗುವ ರಸ್ತೆಗೂ ಹಣ ನೀಡಿದ್ದೇನೆ.

ತಾಲೂಕಿನಾದ್ಯಂತ 493 ಹಳ್ಳಿಗಳಿಗೂ ಏನೇನು ಅವಶ್ಯಕತೆಯಿದೆ ಎನ್ನುವುದನ್ನು ಅರ್ಥಮಾಡಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಹಗಲು-ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ. ಚಿಕ್ಕಜಾಜೂರಿನಲ್ಲಿ ಹೈಟೆಕ್ ಆಸ್ಪತ್ರೆ, ವೈದ್ಯರು ಅಲ್ಲಿಯೇ ಉಳಿದುಕೊಳ್ಳಲು ವಸತಿ ಗೃಹಗಳನ್ನು ಕಟ್ಟಿಸಿದ್ದೇನೆ. ಸಿಸಿ ರಸ್ತೆ, ಮೂಲಭೂತ ಸೌಲಭ್ಯಗಳನ್ನು ಒದಗಿಸಿದ್ದೇನೆ. 5 ಕೋಟಿ ರು. ವೆಚ್ಚದಲ್ಲಿ ಅತ್ಯುತ್ತಮ ಶಾಲೆ ಕಟ್ಟಿಸಿದ್ದೇನೆ. ಸುತ್ತಮುತ್ತಲಿನ ಹಳ್ಳಿಗಳಿಂದ ಬರುವ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದೆಂದು ನನ್ನ ಅನುದಾನದಲ್ಲಿ ಬಸ್‍ಗಳನ್ನು ಬಿಡುತ್ತಿದ್ದೇನೆ. ಆಂಗ್ಲ ಮಾಧ್ಯಮದಲ್ಲಿ ಮಕ್ಕಳಿಗೆ ಶಿಕ್ಷಣ ಕಲಿಸಲಾಗುವುದು ಎಂದರು.

ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತಂದು ಪ್ರತಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು. ಇದರಿಂದ ಇನ್ನೂ 30 ವರ್ಷಗಳ ಕಾಲ ನೀರಿಗೆ ಅಭಾವವಿರುವುದಿಲ್ಲ. ರಾಜಕಾರಣಿಯಾದವನು ಸಾರ್ವಜನಿಕರ ಬದುಕನ್ನು ಸ್ವಂತ ಬದುಕೆಂದು ಅರ್ಥಮಾಡಿಕೊಂಡು ಕೆಲಸ ಮಾಡಬೇಕು ಎಂದು ನುಡಿದರು.

ಈ ಸಂದರ್ಭದಲ್ಲಿ ಡಿ.ಸಿ.ಮೋಹನ್, ಕರಿಸಿದ್ದಯ್ಯ, ಮೂರ್ತಿ, ಈಶ್ವರಪ್ಪ, ಷಣ್ಮುಖಪ್ಪ, ಆನಂದಪ್ಪ, ರಾಜಪ್ಪ, ಗುರುಸ್ವಾಮಿ, ಜಗದೀಶ್, ತಿಪ್ಪೇಸ್ವಾಮಿ, ಅನಿಲ್, ಗ್ರಾಪಂ ಸದಸ್ಯರಾದ ರುದ್ರಮ್ಮ, ಶಿವಮೂರ್ತಿ, ಪವಿತ್ರ ಅಜ್ಜಯ್ಯ, ಸಾವಿತ್ರಮ್ಮ, ಹೊಳಲ್ಕೆರೆ ಬಿಜೆಪಿ ಮಂಡಲ ಕಾರ್ಯದರ್ಶಿ ಸಿ.ವಿ.ಶಶಿಧರ್, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಊರಿನ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನಿತ ಪಿಯು ಕಾಲೇಜು ನಿವೃತ್ತರ ಗಳಿಕೆ ರಜೆಗೆ 30 ಕೋಟಿ ರು.
ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!