ದ್ವಿಚಕ್ರವಾಹನಕ್ಕೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ: ರೈಲ್ವೆ ನೌಕರ ಸಾವು

KannadaprabhaNewsNetwork |  
Published : Aug 12, 2024, 12:46 AM IST
45 | Kannada Prabha

ಸಾರಾಂಶ

ದೇವರಾಜ ಅರಸು ರಸ್ತೆಯಿಂದ ಹಳೆಯ ಜಿಲ್ಲಾಧಿಕಾರಿ ಕಚೇರಿಗೆ ಕಡೆಗೆ ಹೋಗುತ್ತಿದ್ದಾಗ

ಕನ್ನಡಪ್ರಭ ವಾರ್ತೆ ಮೈಸೂರು

ದ್ವಿಚಕ್ರವಾಹನಕ್ಕೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿಯಾಗಿ ರೈಲ್ವೆ ನೌಕರರೊಬ್ಬರು ಮೃತಪಟ್ಟಿರುವ ಘಟನೆ ಮೈಸೂರಿನ ಜೆ.ಎಲ್.ಬಿ ರಸ್ತೆ- ಡಿ. ದೇವರಾಜ ಅರಸು ರಸ್ತೆ ಸೇರುವ ಮಹಾರಾಣಿ ಕಾಲೇಜು ಜಂಕ್ಷನ್ ಬಳಿ ಭಾನುವಾರ ಬೆಳಗ್ಗೆ ನಡೆದಿದೆ.

ನಗರದ ಕ್ಯಾತಮಾರನಹಳ್ಳಿಯ ನಿವಾಸಿ ಹಾಗೂ ರೈಲ್ವೆ ನೌಕರ ಶಿವಕುಮಾರ್ (58) ಎಂಬವರೇ ಮೃತಪಟ್ಟವರು. ಇವರು ತಮ್ಮ ಎಲೆಕ್ಟ್ರಿಕಲ್ ದ್ವಿಕ್ರವಾಹನದಲ್ಲಿ ಡಿ. ದೇವರಾಜ ಅರಸು ರಸ್ತೆಯಿಂದ ಹಳೆಯ ಜಿಲ್ಲಾಧಿಕಾರಿ ಕಚೇರಿಗೆ ಕಡೆಗೆ ಹೋಗುತ್ತಿದ್ದಾಗ ಜೆಎಲ್ ಬಿ ರಸ್ತೆಯಲ್ಲಿ ರಾಮಸ್ವಾಮಿ ವೃತ್ತದ ಕಡೆಯಿಂದ ಬಂದ ಕೆಎಸ್ಆರ್ ಟಿಸಿ ಬಸ್ ಡಿಕ್ಕಿಯಾಗಿದೆ. ಗಾಯಾಳನ್ನು ತಕ್ಷಣ ಕೆ.ಆರ್. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ದೇವರಾಜ ಸಂಚಾರ ಠಾಣೆಯ ಇನ್ಸ್ ಪೆಕ್ಟರ್ ಮಮತಾ ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿವೃತ್ತ ಬ್ಯಾಂಕ್ ನೌಕರರ ಪಿಂಚಣಿ ಪರಿಷ್ಕರಣೆಗೆ ಆಗ್ರಹ
27ಕ್ಕೆ ಬಸವತತ್ವ ಪೀಠದ ಸುವರ್ಣ ಮಹೋತ್ಸವ