ಕನ್ನಡಪ್ರಭ ವಾರ್ತೆ ಕಾರ್ಕಳ
ಈ ಶಾಸನದ ಅಧ್ಯಯನವನ್ನು ಈ ಮೊದಲು ಮಾಡಿದ್ದರೂ ಸಹ ಕಾಲಮಾನದಲ್ಲಿ ವ್ಯತ್ಯಾಸ ಕಂಡು ಬಂದಿರುವುದರಿಂದ ಈ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಮರು ಅಧ್ಯಯನಕ್ಕೊಳಪಡಿಸಿದ್ದಾರೆ.
ಈ ಶಾಸನವನ್ನು ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟಿದ್ದು, 3 ಅಡಿ ಎತ್ತರ ಮತ್ತು 2 ಅಡಿ ಅಗಲವಿದ್ದು, 16ನೇ ಶತಮಾನದ ಕನ್ನಡ ಲಿಪಿಯ 18 ಸಾಲುಗಳನ್ನು ಒಳಗೊಂಡಿದೆ. ಶಾಸನದ ಮೇಲ್ಭಾಗದಲ್ಲಿ ಮುಕ್ಕೊಡೆಯಿದ್ದು, ಇಕ್ಕೆಲಗಳಲ್ಲಿ ಸೂರ್ಯ-ಚಂದ್ರರ ಉಬ್ಬು ಕೆತ್ತನೆಯಿದೆ.ಜಿನ ಸ್ತುತಿಯೊಂದಿಗೆ ಪ್ರಾರಂಭವಾಗುವ ಈ ಶಾಸನವು 1452 (ಸಾಮಾನ್ಯ ವರ್ಷ 1530) ರ ವಿಕೃತಿ ಸಂವತ್ಸರದ ಮಕರ ಮಾಸ ಶುದ್ಧ 15ನೇ ಆದಿವಾರಕ್ಕೆ ಸೇರುತ್ತದೆ. ಈ ಮೊದಲ ಅಧ್ಯಯನದಲ್ಲಿ ಶಕವರ್ಷ 1442 ವಿಕ್ರಮ ಸಂವತ್ಸರ ಎಂದು ಓದಲಾಗಿತ್ತು.
ಈ ಅಧ್ಯಯನಕ್ಕೆ ಪ್ರಾಚ್ಯಸಂಚಯ ಸಂಶೋಧನಾ ಕೇಂದ್ರ ನಿರ್ದೇಶಕ ಎಸ್.ಎ. ಕೃಷ್ಣಯ್ಯ, ಆದರ್ಶ್ ಶೆಟ್ಟಿ, ಅಕ್ಷಯ್ ಶೆಟ್ಟಿ, ಪುರಾತತ್ವ ವಿದ್ಯಾರ್ಥಿಗಳಾದ ವಿಶಾಲ್ ರೈ ಕೆ., ಶಶಾಂತ್, ಮಂಜುನಾಥ ನಂದಳಿಕೆ ಹಾಗೂ ಸ್ಥಳೀಯರಾದ ರತ್ನಾಕರ್ ಶೆಟ್ಟಿ, ವಸಂತ್ ಶೆಟ್ಟಿ ಮತ್ತು ರಾಜೀವಿ ಶೆಟ್ಟಿ ಸಹಕಾರ ನೀಡಿದ್ದರು.