ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಮನವಿ

KannadaprabhaNewsNetwork |  
Published : Jun 26, 2024, 12:30 AM IST
ಅಕ್ರಮ ಮದ್ಯ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ತಹಶಿಲ್ದಾರಗೆ ಮನವಿ | Kannada Prabha

ಸಾರಾಂಶ

ತಾಲೂಕಿನ ಕೇಸಾಪೂರ ಗ್ರಾಮಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ಮದ್ಯಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ಕೇಸಾಪೂರ ಗ್ರಾಮದ ಮುಖಂಡರು ಮಂಗಳವಾರ ತಹಸೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಹಾಗೂ ತಾಲೂಕು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ತಾಲೂಕಿನ ಕೇಸಾಪೂರ ಗ್ರಾಮಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ಮದ್ಯಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ಕೇಸಾಪೂರ ಗ್ರಾಮದ ಮುಖಂಡರು ಮಂಗಳವಾರ ತಹಸೀಲ್ದಾರ್‌ ಬಲರಾಮ ಕಟ್ಟಿಮನಿ ಅವರಿಗೆ ಹಾಗೂ ತಾಲೂಕು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕೇಸಾಪೂರದಲ್ಲಿನ ಕಿರಾಣಿ ಅಂಗಡಿ, ಪಾನ್‌ಶಾಪ್ ಮತ್ತು ಚಹಾ ಅಂಗಡಿಗಳಲ್ಲಿ ಬಹು ದಿನಗಳಿಂದ ಅಕ್ರಮ ಮದ್ಯ ಮಾರಾಟ ಮಾಡುತ್ತಾ ಬಂದಿದ್ದಾರೆ. ಇದರಿಂದ ನಮ್ಮ ಊರಿನ ಯುವಕರು, ಕಾಲೇಜ ವಿದ್ಯಾರ್ಥಿಗಳು ಸಹ ಮದ್ಯ ವ್ಯಸನಿಗಳಾಗಿದ್ದಾರೆ. ಎಷ್ಟೋ ಕುಟುಂಬಗಳು ಬೀದಿ ಪಾಲಾಗಿವೆ. ಎಷ್ಟೋ ಜನರು, ಯುವಕರು ಸಹ ಕುಡಿತದ ಚಟಕ್ಕೆ ಬಲಿಯಾಗಿ ಜೀವ ಕಳೆದುಕೊಂಡಿದ್ದಾರೆ. ಆದ ಕಾರಣ ನಮ್ಮ ಊರಿನ ಎಲ್ಲಾ ಹಿರಿಯರು ಮಹಿಳಾ ಸಂಘದವರು, ಕಾಲೇಜ ವಿದ್ಯಾರ್ಥಿಗಳು ಕೆಲವು ದಿನಗಳ ಹಿಂದೆ ಊರಲ್ಲಿ ಸಭೆ ಸೇರಿ ನಮ್ಮ ಊರಿನಲ್ಲಿ ಅಕ್ರಮ ಮದ್ಯ ಮಾರಾಟ ನಿಷೇಧಿಸಬೇಕೆಂದು ನಿರ್ಧರಿಸಿದರು. ಅಂದೇ ನಮ್ಮ ಊರಿನಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ಅಂಗಡಿಗಳಿಗೆ ಹೋಗಿ ಇನ್ನೂ ಮುಂದೆ ಅಕ್ರಮ ಮದ್ಯ ಮಾರಾಟ ಮಾಡಬಾರದು ಎಂದು ತಿಳಿ ಹೇಳಲಾಯಿತು. ಅಂದೇ ಆಲೂರ ಹಾಗೂ ನೆರಬೆಂಚಿ ಗ್ರಾಮಗಳಿಗೆ ಹೋಗಿ ಅಲ್ಲಿಯೂ ಮದ್ಯ ಅಕ್ರಮ ಮದ್ಯ ಮಾರಾಟ ಮಾಡಬಾರದು ಎಂದು ತಿಳಿ ಹೇಳಲಾಯಿತು. ಆದರೆ, ಇದ್ಯಾವುದಕ್ಕೂ ಮಣಿಯದೇ ಮತ್ತೆ ಅವ್ಯಾಹತವಾಗಿ ಅಕ್ರಮ ಮದ್ಯ ಮಾರಾಟ ನಡೆದಿದೆ. ಹೀಗಾಗಿ ಈ ಊರುಗಳಲ್ಲಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮನವಿ ಸಲ್ಲಿಸಿ ಆಗ್ರಹಿಸಿದರು.

ಈ ವೇಳೆ ಮುಖಂಡರಾದ ಮಲ್ಲಿಕಾರ್ಜುನ ದೇಶಮುಖ, ವೈ.ಬಿ.ತಳವಾರ, ಶಾಂತಗೌಡ ನಾಡಗೌಡ, ಜಿ.ಜಿ.ಗೌಡರ, ದ್ಯಾಮಣ್ಣ ಹಿರೇಕುರಬರ, ಸಿದ್ದಪ್ಪ ಉಪ್ಪಿನಕಾಯಿ, ಸುರೇಶ ಭೈರವಾಡಗಿ, ಸಂಗನಗೌಡ ಪಾಟೀಲ, ನಾಗರಾಜ ಹಿರೇಕುರಬರ, ಶ್ರೀನಿವಾಸ ಗೌಂಡಿ ಸೇರಿದಂತೆ ಹಲವರು ಇದ್ದರು.

PREV

Recommended Stories

ನೀಲಿ ಮೊಟ್ಟೆ ಇಟ್ಟ ಚನ್ನಗಿರಿಯ ನಾಟಿ ಕೋಳಿ: ಸ್ಥಳೀಯರಲ್ಲಿ ತೀವ್ರ ಕುತೂಹಲ
ಸಿಗಂದೂರಿನಲ್ಲಿ ವಾಟರ್ ಏರೋಡ್ರೋಮ್: ವಿಮಾನ ಟೇಕಾಫ್‌, ಲ್ಯಾಂಡಿಂಗ್‌! ಪ್ರವಾಸೋದ್ಯಮಕ್ಕೆ ಹೊಸ ಹೆಜ್ಜೆ?