ಕನ್ನಡಪ್ರಭ ವಾರ್ತೆ ಮಡಿಕೇರಿ
ವಿರಾಜಪೇಟೆ ತಾಲೂಕಿನ ಬೆಟೋಳಿ ಗ್ರಾಮ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ತಡೆಗೋಡೆ ಪರಿಶೀಲಿಸಿದರು. ಕಳೆದ ವಾರ ಸುರಿದ ಧಾರಾಕಾರ ಮಳೆಗೆ ಎತ್ತರದ ತಡೆಗೋಡೆ ಕುಸಿದಿದ್ದು, ಸಂಬಂಧಪಟ್ಟ ಎಂಜಿನಿಯರಿಂಗ್ ವಿಭಾಗದವರು ಸರಿಪಡಿಸುವಂತೆ ಶಾಸಕರು ನಿರ್ದೇಶನ ನೀಡಿದರು.
ಈಗಾಗಲೇ ನಿರ್ಮಿಸಿರುವ ಸುತ್ತುಗೋಡೆ ಮತ್ತಷ್ಟು ಬೀಳುವ ಸಾಧ್ಯತೆ ಇದೆ. ಆದ್ದರಿಂದ ಈ ಬಗ್ಗೆ ಎಚ್ಚರ ವಹಿಸಬೇಕು. ಯಾರಿಗೂ ತೊಂದರೆ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದು ಎ.ಎಸ್.ಪೊನ್ನಣ್ಣ ಸೂಚಿಸಿದರು.ಬಳಿಕ ಆರ್ಜಿ ಗ್ರಾಮದ ಅನ್ವರುಲ್ ಹುಧಾ ಶಾಲೆಯ ಬಳಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿದ ಶಾಸಕರು, ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಕಾಮಗಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಎಂಜಿನಿಯರ್ಗೆ ಸೂಚಿಸಿದರು.
ಅಂಬೇಡ್ಕರ್ ಭವನಕ್ಕೆ ತೆರಳುವ ದಾರಿಯಲ್ಲಿಯೇ ಮಣ್ಣು ಬಿದ್ದಿದ್ದು, ಇದನ್ನು ತೆಗೆಯಬೇಕು. ಇಲ್ಲಿನ ಕಾಮಗಾರಿ ನಿರ್ವಹಣೆಗೆ ಈ ಹಿಂದೆ ಏಜೆನ್ಸಿ ಅವರಿಗೆ ನೇರವಾಗಿ 10 ಲಕ್ಷ ರು. ಅನುದಾನ ಬಿಡುಗಡೆ ಆಗಿದೆ. ಈ ಬಗ್ಗೆ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಎಂಜಿನಿಯರ್ಗೆ ಸೂಚಿಸಿದರು.
ಅಂಬೇಡ್ಕರ್ ಭವನ ನಿರ್ವಹಣೆ ಸಂಬಂಧ ಅಗತ್ಯ ಕ್ರಮ ವಹಿಸುವಂತೆ ತಹಸೀಲ್ದಾರರು ಮತ್ತು ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಿದರು.
ಮನೆ ಸಂಪೂರ್ಣ ಹಾನಿಯಾಗಿರುವುದರಿಂದ ಸರ್ಕಾರದ ನಿರ್ದೇಶನದಂತೆ 1.20 ಲಕ್ಷ ರು. ಪರಿಹಾರದ ಹಣ ಕೂಡಲೇ ನೀಡುವಂತೆ ತಹಸೀಲ್ದಾರರಿಗೆ ಶಾಸಕರು ಸೂಚಿಸಿದರು.
ಡಿಸೆಂಬರ್ನಲ್ಲೇ ಕಾಮಗಾರಿ ಆರಂಭವಾದರೂ ಸಹ ಇಂದಿಗೂ ಪೂರ್ಣಗೊಳ್ಳದಿರುವುದಕ್ಕೆ ಸ್ಥಳದಲ್ಲಿಯೇ ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ತಹಸೀಲ್ದಾರರಾದ ಅನಂತ ಶಂಕರ, ತಾ.ಪಂ. ಇಒ ಅಪ್ಪಣ್ಣ, ಸೆಸ್ಕ್ ಎಂಜಿನಿಯರ್ ಸುರೇಶ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಲಿಂಗರಾಜು, ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ಕುಮಾರ ಸ್ವಾಮಿ ಇತರರು ಇದ್ದರು.