ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಿದ ಶಕ್ತಿ ಯೋಜನೆ

KannadaprabhaNewsNetwork |  
Published : Jul 15, 2025, 01:45 AM IST
ಬಳ್ಳಾರಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಶಕ್ತಿ ಯೋಜನೆಯ 500 ಕೋಟಿ ಮಹಿಳೆಯರ ಪ್ರಯಾಣದ ಸಂಭ್ರಮಾಚರಣೆ ಜರುಗಿತು. ಎಸ್ಪಿ ಡಾ.ಶೋಭಾರಾಣಿ, ಮೇಯರ್ ಮುಲ್ಲಂಗಿ ನಂದೀಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಮತ್ತಿತರರಿದ್ದರು.  | Kannada Prabha

ಸಾರಾಂಶ

ಗ್ಯಾರಂಟಿ ಯೋಜನೆಗಳ ಬಗ್ಗೆ ಹಲವರು ಟೀಕೆ-ಟಿಪ್ಪಣಿ ಮಾಡಿದ್ದರು. ಆದರೆ ರಾಜ್ಯ ಸರ್ಕಾರವು ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೊದಲ ಹಂತವಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ.

ಶಕ್ತಿ ಯೋಜನೆಯ 500 ಕೋಟಿ ಮಹಿಳೆಯರ ಪ್ರಯಾಣದ ಸಂಭ್ರಮಾಚರಣೆ

ಕನ್ನಡಪ್ರಭ ವಾರ್ತೆ ಬಳ್ಳಾರಿ

ಗ್ಯಾರಂಟಿ ಯೋಜನೆಗಳ ಬಗ್ಗೆ ಹಲವರು ಟೀಕೆ-ಟಿಪ್ಪಣಿ ಮಾಡಿದ್ದರು. ಆದರೆ ರಾಜ್ಯ ಸರ್ಕಾರವು ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೊದಲ ಹಂತವಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಶಕ್ತಿ ಯೋಜನೆಯು 2023 ರ ಜೂ. 11ರಂದು ಆರಂಭವಾಗಿ ಇಲ್ಲಿಯವರೆಗೆ 500 ಕೋಟಿಗಿಂತ ಹೆಚ್ಚಿನ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ. ಇಲ್ಲಿಯವರೆಗೆ ಒಟ್ಟು ಟಿಕೆಟ್ ಮೌಲ್ಯ 12 ಸಾವಿರ ಕೋಟಿ ದಾಟಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಿಳಿಸಿದರು.

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ನಗರದ ಕೇಂದ್ರಿಯ ಬಸ್ ನಿಲ್ದಾಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ 500 ಕೋಟಿ ಮಹಿಳೆಯರ ಪ್ರಯಾಣದ ಸಂಭ್ರಮಾಚರಣೆಗೆ ಮಹಿಳೆಯರಿಗೆ ಸಿಹಿ ಹಂಚುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತು ಯುವನಿಧಿ ಯೋಜನೆಗಳನ್ನು ಎಲ್ಲ ಅರ್ಹರಿಗೆ ತಲುಪಿಸುವಲ್ಲಿ ಸರ್ಕಾರವು ಯಶಸ್ವಿಯಾಗಿದೆ. ದುಡಿವ ಬಡವರ್ಗದ ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಲು ನೂತನ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯು ಮಹಿಳೆಯರಿಗೆ ಹೆಚ್ಚು ಶಕ್ತಿ ತುಂಬಿ ಯಶಸ್ವಿಯಾಗಿ ಮುಂದುವರೆಯುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಲಿಡ್ಕರ್ ನಿಗಮ ಅಧ್ಯಕ್ಷ ಮುಂಡ್ರಗಿ ನಾಗರಾಜ್ ಮಾತನಾಡಿ, ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಅಡಿಯಲ್ಲಿ ಇಲ್ಲಿಯವರೆಗೆ 500 ಕೋಟಿ ಮಹಿಳೆಯರು ಪ್ರಯಾಣಿಸಿರುವುದು ಸಂಭ್ರಮದ ವಿಷಯವಾಗಿದ್ದು, ಮಹಿಳೆಯರಿಗೆ ಉತ್ತೇಜನ ನೀಡಿದೆ. ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಗಳು ಜಾರಿಯಾಗಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಬೇರೆ-ಬೇರೆ ರಾಜ್ಯಗಳಿಗೂ ಕೂಡ ಮಾದರಿಯಾಗಿದೆ ಎಂದು ಹೇಳಿದರು.

ಮೇಯರ್ ಮುಲ್ಲಂಗಿ ನಂದೀಶ್ ಮಾತನಾಡಿ, ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಶಕ್ತಿ ಯೋಜನೆ ದಿಟ್ಟ ಹೆಜ್ಜೆಯಾಗಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ. ಉಪಸ್ಥಿತರಿದ್ದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ನಾಗಭೂಷಣ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ, ಕೆಕೆಆರ್‌ಟಿಸಿ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಭಾಗವಾನ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ