ಕಾಯಕವನ್ನೆ ಜೀವನದಲ್ಲಿ ಅಳವಡಿಸಿಕೊಂಡ ದೇವರ ದಾಸಿಮಯ್ಯ: ದಿನೇಶ್.ಕೆ.ಶೆಟ್ಟಿ

KannadaprabhaNewsNetwork |  
Published : Apr 03, 2025, 12:30 AM IST
ಕ್ಯಾಪ್ಷನ2ಕೆಡಿವಿಜಿ35ದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಇತರರು ಪುಷ್ಪ ನಮನ ಸಲ್ಲಿಸಿದರು. .....ಕ್ಯಾಪ್ಷನ2ಕೆಡಿವಿಜಿ36ದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಕಾಯಕ ತತ್ವವನ್ನು ತಮ್ಮ ಜೀವನದಲ್ಲಿ ಸಂಪೂರ್ಣವಾಗಿ ಅಳವಡಿಸಿಕೊಂಡವರು ಆದ್ಯ ವಚನಕಾರ ದೇವರ ದಾಸಿಮಯ್ಯನವರು ಎಂದು ದೂಡಾ ಅಧ್ಯಕ್ಷ ದಿನೇಶ್.ಕೆ.ಶೆಟ್ಟಿ ಹೇಳಿದರು.

ದೇವರ ದಾಸಿಮಯ್ಯ ಜಯಂತಿ । ದೂಡಾ ಅಧ್ಯಕ್ಷ ಅಭಿಮತ । ದಾಸಿಮಯ್ಯರ ಭಾವಿತ್ರಕ್ಕೆ ಪುಷ್ಪ ನಮನ

ಕನ್ನಡಪ್ರಭ ವಾರ್ತೆ ದಾವಣಗೆರೆ

ಕಾಯಕ ತತ್ವವನ್ನು ತಮ್ಮ ಜೀವನದಲ್ಲಿ ಸಂಪೂರ್ಣವಾಗಿ ಅಳವಡಿಸಿಕೊಂಡವರು ಆದ್ಯ ವಚನಕಾರ ದೇವರ ದಾಸಿಮಯ್ಯನವರು ಎಂದು ದೂಡಾ ಅಧ್ಯಕ್ಷ ದಿನೇಶ್.ಕೆ.ಶೆಟ್ಟಿ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಜಿಲ್ಲಾ ನೇಕಾರರ ಸಮುದಾಯಗಳ ಒಕ್ಕೂಟ ಜಂಟಿಯಾಗಿ ಆಯೋಜಿಸಲಾಗಿದ್ದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಮಾತಾನಾಡಿದರು.

ಶ್ರೀ ದೇವರ ದಾಸಿಮಯ್ಯನವರು ಕರ್ನಾಟಕ ರಾಜ್ಯದ ಪ್ರಸಿದ್ದ ಆದ್ಯ ಕನ್ನಡ ವಚನಾಕರರ ಗುರುಗಳಲ್ಲಿ ಒಬ್ಬರು, ಹನ್ನೆರಡನೆ ಶತಮಾನದಲ್ಲಿ ಶರಣಕ್ರಾಂತಿ ನಡೆದು ಸಮಾಜದಲ್ಲಿ ಬೇರೂರಿದ್ದ ಜಾತಿಯತೆ, ಅಸಮಾನತೆ, ಮೌಢ್ಯತೆ ತೊಲಗಿಸಲು, ಎಲ್ಲರೂ ಸಮಾನರು ಎಂದು ಅನುಭವ ಮಂಟಪದಲ್ಲಿ ಒಟ್ಟಿಗೆ ಸೇರಿ ಚರ್ಚಿಸುತ್ತಿದ್ದರು. ಶರಣರು ಕಾಯಕ ಮತ್ತು ದಾಸೋಹಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು, ಕಾಯಕ ಎಂದರೆ ಮನಸ್ಸಿಟ್ಟು ದುಡಿಯುವುದು, ದಾಸೋಹವೆಂದರೆ ದುಡಿದದ್ದನ್ನು ನಾವು ಉಪಯೋಗಿಸಿಕೊಂಡು ಸಮಾಜದ ಇತರರಿಗೂ ಹಂಚುವುದಾಗಿದೆ. ಹಾಗಾಗಿ ಎಲ್ಲರೂ ಕಾಯಕ ಶರಣರ ಆದರ್ಶಗಳನ್ನು ಪಾಲಿಸೋಣ ಎಂದರು. ಜೀವನ ಮತ್ತು ವಚನ ಬೋಧನೆಗಳು ಕರ್ನಾಟಕ ಸಂಸ್ಕೃತಿ ಮತ್ತು ನಂಬಿಕೆಗಳ ಮೇಲೆ ಆಳವಾದ ಪ್ರಭಾವವನ್ನು ಬೀರಿವೆ.ಇಂತಹ ಮಹಾನ್ ಕ್ರಾಂತಿಕಾರಿ ಕನ್ನಡದ ಆದ್ಯ ವಚನಕಾರ ದೇವರ ದಾಸಿಮಯ್ಯ ಎಂದರು.

ಕಾಯಕದಲ್ಲಿ ಶಿವನನ್ನು ಕಂಡವರು ದೇವರ ದಾಸಿಮಯ್ಯ, ದಾಸೋಹ ತತ್ವದಿಂದ ಹಸಿವನ್ನು ನೀಗಿಸಲು ಸಾಧ್ಯ ಎಂದು ತಮ್ಮ ವಚನಗಳಲ್ಲಿ ತಿಳಿಸಿದ್ದಾರೆ. ಹನ್ನೆರಡನೇ ಶತಮಾನದ ಶರಣರಿಂದ ಕಾಯಕ ಮತ್ತು ದಾಸೋಹ ಎಂಬ ಎರಡು ಮುಖ್ಯ ಅಂಶಗಳನ್ನು ನಾವು ತಿಳಿಯಬಹುದಾಗಿದೆ. ಕಾಯಕ ಶ್ರದ್ಧೆಯ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಶರಣರು ತಿಳಿಸಿಕೊಟ್ಟರು.

ಹೊಳೆಸಿರಿಗೆರೆಯ ಡಿ.ಸಿದ್ದೇಶ್ ಉಪನ್ಯಾಸ ನೀಡಿದರು. ನೇಕಾರರ ಸಂಘದ ಅಧ್ಯಕ್ಷ ಕೃಷ್ಣಸ್ವಾಮಿ, ಸತ್ಯನಾರಾಯಣ, ಜೇನುಕಲ್ಲಪ್ಪ, ಬಸವರಾಜ್ ಗುಬ್ಬಿ, ಜಿಪಂ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಹಾಗೂ ನೇಕಾರ ಸಮಾಜದವರು ಇತರೆ ಮುಖಂಡರು ಹಾಜರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...