ಗಾಳಿಯ ಅಬ್ಬರಕ್ಕೆ ಕಿತ್ತಿದ ಗುಡಿಸಲು, ಮಹಿಳೆ ತಲೆಗೆ ಗಾಯ

KannadaprabhaNewsNetwork |  
Published : May 24, 2024, 12:50 AM IST
 ಹುಣಸಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆ, ಗಾಳಿಗೆ ವಿದ್ಯುತ್ ಕಂಬಗಳು ಉರುಳಿ ಬಿದ್ದಿರುವುದು. | Kannada Prabha

ಸಾರಾಂಶ

ಹುಣಸಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆ, ಗಾಳಿಗೆ ವಿದ್ಯುತ್ ಕಂಬಗಳು ಉರುಳಿ ಬಿದ್ದಿರುವುದು. ಕುಪ್ಪಿಗುಡ್ಡದ ಬಳಿ ಮಳೆ, ಗಾಳಿಗೆ ಗಾಯಗೊಂಡ ಗುರುಬಾಯಿ ಅವರ ಗುಡಿಸಲು ಮುರಿದು ಬಿದ್ದಿರುವುದು.

ಕನ್ನಡಪ್ರಭ ವಾರ್ತೆ ಹುಣಸಗಿ

ತಾಲೂಕಿನಲ್ಲಿ ಬುಧವಾರ ಸಂಜೆ ಮಳೆ ಗಾಳಿಗೆ ಕುಪ್ಪಿ ಗುಡ್ಡದ ಹತ್ತಿರದ ಗುರುಬಾಯಿ ಎಂಬವರ ಗುಡಿಸಲು ಕಿತ್ತಿ ಬಿದ್ದಿದ್ದು, ಮಹಿಳೆಯ ತಲೆಗೆ ಗಾಯವಾಗಿದೆ. ರೇಣುಕಾ ಸಂತೋಷ್ ರಾಠೋಡ ಅವರ ಶೆಡ್ ಮತ್ತು ಮಲ್ಲಪ್ಪರವರ ಶೆಡ್ ಪತ್ರಾಸ್ ಸಂಪೂರ್ಣ ಕಿತ್ತಿವೆ.

ಭಾರೀ ಗಾಳಿ ಬೀಸಿದ ಪರಿಣಾಮ ಇದ್ದ ಒಂದು ಗುಡಿಸಲು ಮುರಿದು ಬಿದ್ದಿದ್ದು, ತೀವ್ರ ನಷ್ಟವಾಗಿದೆ ಎಂದು ಕುಟುಂಬಸ್ಥ ರಾಮಜಿ ಅಳಲು ತೋಡಿಕೊಂಡಿದ್ದಾರೆ. ಕುಪ್ಪಿ ಗ್ರಾಮದಲ್ಲಿ ಮರವೊಂದು ಬಿದ್ದು, ವಿದ್ಯುತ್ ಹೈ ಪವರ್ ತಂತಿ ಕಟ್ಟಾಗಿ ನಾಲ್ಕು ಗಂಟೆಗಳ ಕಾಲ ವಿದ್ಯುತ್ ಸಮಸ್ಯೆ ಉಂಟಾಯಿತು.

ದ್ಯಾಮನಾಳ ಗ್ರಾಮದಲ್ಲಿ ಯಮನಪ್ಪ ದೇವರಮನಿ ಎಂಬವರ ಮನೆ ಮುಂದಿನ ಪತ್ರಾಸ್ ಕಿತ್ತಿ ಹೋಗಿದ್ದು, ಅದೃಷ್ಟವಶಾತ್‌ ಯಾರಿಗೂ ಅಪಾಯವಾಗಿಲ್ಲ. ಕೆಲವೊಂದು ಕಡೆ ಮರಗಳು ನೆಲಕ್ಕುರುಳಿದ್ದು. ಕಂಬಗಳ ಮುರಿದಿವೆ ಎನ್ನಲಾಗಿದೆ. ಸ್ಥಳಕ್ಕೆ ಗ್ರಾಮಾಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಧರೆಗುರುಳಿದ ವಿದ್ಯುತ್ ಕಂಬಗಳು :

ಹುಣಸಗಿ ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ ಹಲವು ಗ್ರಾಮಗಳಲ್ಲಿ 30ಕ್ಕೂ ಹೆಚ್ಚು ಕಂಬಗಳು ಧರೆಗುರುಳಿದ್ದು, ಜೆಸ್ಕಾಂ ಅಧಿಕಾರಿಗಳು ವರದಿ ಪಡೆದುಕೊಂಡು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ. ಇನ್ನು ಇಲಾಖೆಯಿಂದ ಆದಷ್ಟು ಬೇಗೆ ಕಂಬಗಳು ಬಂದರೆ ಮುರಿದ ಕಂಬಗಳು ತೆರವುಗೊಳಿಸಿ, ಹೊಸ ಕಂಬಗಳು ಹಾಕಿ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಂದಾಗುತ್ತೇವೆ ಎಂದು ಹುಣಸಗಿ ಶಾಖಾಧಿಕಾರಿ ಸೋಮಪ್ಪ ಟಪಾಲ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!