ದೇವೇಗೌಡರಿಂದ ಮೊಮ್ಮಗನ ಸಾಧನೆಗಳ ಪುಸ್ತಕ ಲೋಕಾರ್ಪಣೆ । ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಮಾಹಿತಿಕನ್ನಡಪ್ರಭ ವಾರ್ತೆ ಹಾಸನ
ಮಾಧ್ಯಮಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ನಗರದ ಬಿ.ಎಂ.ರಸ್ತೆ ಬಳಿ ಇರುವ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಸಂಜೆ ೪ ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಸಾಧನಾ ಪುಸ್ತಕ ಅನಾವರಣವನ್ನು ಎಚ್.ಡಿ. ದೇವೇಗೌಡ ನಡೆಸಿಕೊಡಲಿದ್ದಾರೆ. ಪ್ರಜ್ವಲ್ ಕೇಂದ್ರದಿಂದ ರೈಲ್ವೆ ಹಾಗೂ ಹೆದ್ದಾರಿ ಮೇಲ್ಸೇತುವೆ ಹಾಗೂ ಹೊಸ ಹೆದ್ದಾರಿ ಕಾಮಗಾರಿಗಳಿಗೆ ಅನುದಾನ ತರುವುದರ ಜತೆಗೆ ಜಿಲ್ಲೆಗೆ ಏನೆಲ್ಲಾ ಮಾಡಿದ್ದಾರೆ ಎಂಬುದು ಪುಸ್ತಕದಲ್ಲಿ ಇರಲಿದೆ ಎಂದು ತಿಳಿಸಿದರು.
ಜೆಡಿಎಸ್-ಬಿಜೆಪಿ ಒಪ್ಪಿಗೆಯಂತೆ ಹೊಂದಾಣಿಕೆ‘ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಹೊಂದಾಣಿಕೆಯಂತೆಯೇ ತೀರ್ಮಾನ ಆಗಿದೆ. ಎರಡೂ ಪಕ್ಷಗಳ ನಾಯಕರು ಈಗಾಗಲೇ ಒಪ್ಪಿ ಆಗಿದೆ. ನಮಗೆ ಎಷ್ಟು ಸೀಟು ಹಂಚಿಕೆ ಎಂಬುದಷ್ಟೇ ಬಾಕಿ ಇದೆ. ಲೋಕಸಭಾ ಚುನಾವಣೆ ಫಲಿತಾಂಶ ಆಧರಿಸಿ ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಮೈತ್ರಿ ಮುಂದುವರಿಕೆ ಬಗ್ಗೆ ನಿರ್ಧಾರ ಆಗಲಿದೆ. ಲೋಕಸಭೆ ಚುನಾವಣೆಗೆ ನಾನು, ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರು ಉಸ್ತುವಾರಿ ಆಗಿದ್ದೇವೆ. ಶೀಘ್ರವೇ ಪಕ್ಷದ ವಿವಿಧ ಘಟಕಗಳನ್ನು ಪುನರ್ ರಚಿಸಿ ಸಂಘಟನೆ ಮಾಡುವ ಮೂಲಕ ಲೋಕಸಭೆ ಚುನಾವಣೆ ಮಾಡಲಾಗುವುದು’ ಎಂದು ಹೇಳಿದರು.
ಆಲೂರಿನಲ್ಲಿ ಮಿನಿ ವಿಧಾನಸೌಧ ಕಾಮಗಾರಿ ಮುಗಿದೇ ಇಲ್ಲ. ಆದರೂ ಉದ್ಘಾಟಿಸಲಾಗಿದೆ. ಸಮಾವೇಶದಲ್ಲಿ ೭೦೦ ಬಸ್ಗಳಲ್ಲಿ ಜನರನ್ನು ಕರೆ ತರಲಾಗಿತ್ತು. ಎಷ್ಟೋ ಕಾಮಗಾರಿ ಪೂರ್ಣಗೊಳ್ಳದಿದ್ದರೂ ಉದ್ಘಾಟನೆ ಮಾಡಿರುವುದರ ಹಿಂದೆ ಲೋಕಸಭೆ ಚುನಾವಣೆ ಉದ್ದೇಶ ಅಡಗಿದೆ ಎಂದು ಆರೋಪಿಸಿದರು.
ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಜಿಲ್ಲಾ ಜೆಡಿಎಸ್ ವಕ್ತಾರ ಹೊಂಗೆರೆ ರಘು, ನಗರಸಭೆ ಮಾಜಿ ಅಧ್ಯಕ್ಷ ಸೈಯದ್ ಅಕ್ಟರ್, ಗಿರೀಶ್ ಇದ್ದರು.ಹಾಸನದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಎಚ್.ಕೆ.ಕುಮಾರಸ್ವಾಮಿ.