ಬಲವಾದ ಅಡಿಪಾಯಕ್ಕೆ ಸರಿಯಾದ ವಿಷಯ ಆರಿಸಿಕೊಳ್ಳಿ

KannadaprabhaNewsNetwork |  
Published : Mar 19, 2025, 12:30 AM IST
43 | Kannada Prabha

ಸಾರಾಂಶ

ಶಿಕ್ಷಣವು ಜೀವಮಾನದ ಅಮೂಲ್ಯ ಸಂಪತ್ತಾಗಿರುವುದರಿಂದ ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ಅತ್ಯುತ್ತಮ ಸಾಧನೆ ಮಾಡಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಶೈಕ್ಷಣಿಕ ಮಾರ್ಗಗಳನ್ನು ಎಚ್ಚರಿಕೆಯಿಂದ ಪರಿಗಣಿಸಬೇಕು. ತಮ್ಮ ವೃತ್ತಿ ಜೀವನದಲ್ಲಿ ಬಲವಾದ ಅಡಿಪಾಯಕ್ಕಾಗಿ ಸರಿಯಾದ ವಿಷಯವನ್ನು ಆರಿಸಿಕೊಳ್ಳಬೇಕು ಎಂದು ವಿಜಯ ವಿಠಲ ಪಿಯು ಕಾಲೇಜಿನ ಪ್ರಾಂಶುಪಾಲ ಎಚ್. ಸತ್ಯಪ್ರಸಾದ್ ತಿಳಿಸಿದರು.

ನಗರದ ವಿಜಯ ವಿಠಲ ವಿದ್ಯಾಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳನ್ನು ಬೋರ್ಡ್ ಪರೀಕ್ಷೆಗಳಿಗೆ ಮುಂಚಿತವಾಗಿ ಆಶೀರ್ವದಿಸಲು ಮತ್ತು ಪ್ರೋತ್ಸಾಹಿಸಲು ಆಯೋಜಿಸಿದ್ದ ವಿಶೇಷ ಸರಸ್ವತಿ ಪೂಜಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಠಿಣ ಪರಿಶ್ರಮ, ಪ್ರಾಮಾಣಿಕತೆ ಮತ್ತು ಆತ್ಮವಿಶ್ವಾಸದ ಮಹತ್ವ, ನ್ಯಾಯಯುತ ಪರೀಕ್ಷೆಗಳನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಇಲಾಖೆಯ ವೆಬ್‌ ಕಾಸ್ಟಿಂಗ್ ಕ್ರಮಗಳ ಬಗ್ಗೆ ವಿವರಿಸಿದರು.

ಸಂಸ್ಥೆಯ ಗೌರವ ಕಾರ್ಯದರ್ಶಿ ಎ. ವಿಶ್ವನಾಥ ಮಾತನಾಡಿ, ಶಿಕ್ಷಣವು ಜೀವಮಾನದ ಅಮೂಲ್ಯ ಸಂಪತ್ತಾಗಿರುವುದರಿಂದ ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ಅತ್ಯುತ್ತಮ ಸಾಧನೆ ಮಾಡಬೇಕು. ಒತ್ತಡ ಮುಕ್ತತೆ, ಆರೋಗ್ಯಕರ ಜೀವನಶೈಲಿಯ ಪಾಲನೆ, ಪ್ರಶ್ನೆ ಪತ್ರಿಕೆಯನ್ನು ಓದುತ್ತ ವಿಶ್ಲೇಷಿಸುವುದು ಮತ್ತು ಸಮಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಶಾಲೆಯ ಪ್ರಾಂಶುಪಾಲೆ ಎಸ್.ಎ. ವೀಣಾ ಮಾತನಾಡಿ, ಶಿಸ್ತು ಮತ್ತು ಉತ್ತಮ ವ್ಯಕ್ತಿತ್ವದ ಮೌಲ್ಯಗಳು ಯಶಸ್ವಿ ಮತ್ತು ಜವಾಬ್ದಾರಿಯುತ ಭವಿಷ್ಯವನ್ನು ನಿರ್ಮಿಸಲು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಸಂಸ್ಕೃತ ಶಿಕ್ಷಕ ಯದುನಾಥ ರಾವ್ ಅವರು ಸರಸ್ವತಿ ದೇವಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು. ನಂತರ ಅವರು ವಿದ್ಯಾರ್ಥಿಗಳಿಗೆ ಸರಸ್ವತಿ ಪೂಜೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು. ನಂತರ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್‌ ಗಳನ್ನು ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!