)
ಮೂಡುಬಿದಿರೆ: ವೈದ್ಯಕೀಯ ವೃತ್ತಿಯಲ್ಲಿ ರೋಗಿಯ ಸುರಕ್ಷತೆ, ನೈತಿಕತೆ ಹಾಗೂ ಸೇವಾ ಮನೋಭಾವವೇ ಅತ್ಯಂತ ಪ್ರಮುಖ ಮೌಲ್ಯಗಳಾಗಿದ್ದು, ವೈದ್ಯ-ರೋಗಿ ಸಂಬಂಧವು ಪರಸ್ಪರ ನಂಬಿಕೆ ಮತ್ತು ಜವಾಬ್ದಾರಿಯ ಆಧಾರದ ಮೇಲೆ ನಿರ್ಮಾಣವಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು.
ವೈದ್ಯರ ಸಮಸ್ಯೆಗಳಿಗೆ ಸಂಘಟನೆ ಅಗತ್ಯ: ಐಎಂಎ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಡಾ. ಟಿ.ಎ. ವೀರಭದ್ರಯ್ಯ ಮಾತನಾಡಿ, ವೈದ್ಯರಿಗೆ ಸಂಘಟನೆಯಿಂದ ವಿಮೆ, ಭದ್ರತೆ ಸೇರಿದಂತೆ ಇನ್ನೂ ಹಲವು ಸೌಲಭ್ಯಗಳು ದೊರೆಯುತ್ತವೆ. ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಐಎಂಎ ಸದಸ್ಯರಾಗುವ ಮೂಲಕ ಸಂಘವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಕರೆ ನೀಡಿದರು.
ವೈದ್ಯರ ಜವಾಬ್ದಾರಿ ದೊಡ್ಡದು: ಕರ್ನಾಟಕ ವೈದ್ಯಕೀಯ ಮಂಡಳಿ ಅಧ್ಯಕ್ಷ ಡಾ.ಯೋಗಾನಂದ ರೆಡ್ಡಿ ಮಾತನಾಡಿ, ಆಳ್ವಾಸ್ ಶಿಕ್ಷಣ ಸಂಸ್ಥೆಯು ಶಿಕ್ಷಣದ ಜೊತೆಗೆ ಸಂಸ್ಕೃತಿಗೂ ಆದ್ಯತೆ ನೀಡಿ ವಿದ್ಯಾರ್ಥಿಗಳನ್ನು ರೂಪಿಸುತ್ತಿದೆ. ಮೂಡುಬಿದಿರೆಯನ್ನು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಬೆಳೆಸುವಲ್ಲಿ ಆಳ್ವಾಸ್ ಸಂಸ್ಥೆಯ ಕೊಡುಗೆ ಮಹತ್ವದ್ದಾಗಿದೆ ಎಂದರು.ಐಎಮ್ಒ ಕರ್ನಾಟಕ ಘಟಕ ವಿಭಾಗೀಯ ಸಂಯೋಜಕ ಡಾ. ಜಿ.ಕೆ. ಭಟ್ ಮಾತನಾಡಿ, ವೈದ್ಯರು ಒಟ್ಟಾಗಿ ತಮ್ಮ ವೃತ್ತಿಯ ಗೌರವ ಹಾಗೂ ಏಳಿಗೆಗಾಗಿ ಶ್ರಮಿಸಬೇಕು ಎಂದರು.
ವೈದ್ಯರ ಸನ್ಮಾನ: ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಡಾ. ಪ್ರಭಾಚಂದ್ರ ಜೈನ್, ಡಾ. ಕೆ.ಆರ್. ಜೋಯಿಷಿ, ಡಾ. ಜಯಗೋಪಾಲ್ ತೊಳ್ಪಾಡಿ ಹಾಗೂ ಡಾ. ಲೀಲಾ ಎಸ್. ಭಟ್, ಡಾ ಪ್ರದೀಪ್ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ಮೂಡುಬಿದಿರೆಯ ಚೊಚ್ಚಲ ಐಎಂಎ ಘಟಕದ ನೂತನ ಪದಾಧಿಕಾರಿಗಳಿಗೆ ಪದಗ್ರಹಣದ ಬ್ಯಾಡ್ಜ್ ಧ್ವಜವಂದನೆಯನ್ನು ನೆರೆವೇರಿಸಲಾಯಿತು. ಕಾರ್ಯಕ್ರಮದಲ್ಲಿ ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ. ಮಹಾಬಲ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಶಮಂತ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಡಾ. ಆಶೀಶ್ ಶರ್ಮ ವಂದಿಸಿದರು. ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಘಟಕದ ಕೋಶಾಧಿಕಾರಿ ಡಾ. ದಿಲೀಪ್ ಕುಮಾರ್ ಪ್ರತಿಜ್ಞಾವಿಧಿ ಧ್ವಜವಂದನೆಯನ್ನು ನೆರೆವೇರಿಸಿದರು. ಡಾ ಮೀನಾ ಕಿರಣ್ ಸನ್ಮಾನಿತರರನ್ನು ಪರಿಚಯಿಸಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಡಾ. ಹರೀಶ್ ದೇಲಂತಬೆಟ್ಟು, ಡಾ. ಮೋಹನ್ ಅಪ್ಪಾಜಿ, ಡಾ. ಅವಿನ್ ಆಳ್ವ, ಡಾ. ವೆಂಕಟಾಚಲಪತಿ, ಡಾ. ವಿನಯ ಆಳ್ವ, ವಿವೇಕ್ ಆಳ್ವ, ಡಾ ಹನ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.